Homeಮುಖಪುಟಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಕೊರೊನಾ ಸಮಯದಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವ ವಿಚಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ವೈಜ್ಞಾನಿಕ ಕಲ್ಪನೆಯ ಚಿತ್ರಗಳದ್ದೇ ಅಧಿಪತ್ಯ. ಮನರಂಜನೆ ಕ್ಷೇತ್ರದಲ್ಲಿ ಎಲ್ಲಾ ಭಾಷೆಯ ಮುಖ್ಯವಾಗಿ ಹಾಲಿವುಡ್ ವೈಜ್ಞಾನಿಕ ಶೈಲಿಯ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿಗೆ ವೀಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದ ಭಾರತೀಯ ಸಿನಿಮಾ ನಿರ್ದೇಶಕರು ಹೆಚ್ಚು ವೈಜ್ಞಾನಿಕ ಕಥೆಗಳ ಕಡೆಗೆ ಉತ್ಸುಕರಾಗಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಈ ಶೈಲಿಯ ಸಿನಿಮಾಗಳು ಒಳ್ಳೆ ಪ್ರದರ್ಶನ ಪಡೆದಿವೆ.

ಇದಕ್ಕೆ ಸಾಕ್ಷಿಯಾಗಿ ನಟ ಟೋವಿನೋ ಥಾಮಸ್ ಅಭಿನಯದ ಮಲಯಾಳಂನ ‘ಮಿನಲ್ ಮುರಳಿ’ ಚಿತ್ರ ಸೇರ್ಪಡೆಯಾಗಿದೆ. ಇದರಲ್ಲಿ ಒಬ್ಬ ಬಟ್ಟೆ ಹೊಲಿಯುವ ಟೈಲರ್ ಅತಿಮಾನುಷ ಶಕ್ತಿಗಳನ್ನು ಪಡೆದು ಸೂಪರ್ ಹೀರೋ ಆಗುವ ಕಥೆಯನ್ನು ಹೊಂದಿದ್ದು, ಚಿತ್ರಕ್ಕೆ ಬೆಸಿಲ್ ಜೋಸೆಫ್ ಅವರ ನಿರ್ದೇಶನವಿದೆ. ಜಗತ್ತಿನಾದ್ಯಾಂತ 30 ದೇಶಗಳ ಒಟಿಟಿ ಪ್ಲಾಟ್ ಫಾರ್ಮ್‌ಗಳಲ್ಲಿ ‘ಮಿನಲ್ ಮುರಳಿ’ ಸಿನಿಮಾ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ.

“ಸದ್ಯ ವಿಶ್ವಾದ್ಯಂತ ಸಿನಿಮಾ ನಿರ್ದೇಶಕರಿಗೆ ತಮ್ಮ ಚಿತ್ರವನ್ನು ಪ್ರಸ್ತುತ ಪಡಿಸಲು ಅನೇಕ ಅನಿರೀಕ್ಷಿತ ಅವಕಾಶಗಳು ಸಿಕ್ಕವೆ. ಅದಕ್ಕೆ ಉದಾಹರಣೆ ಎಂಬಂತೆ ‘ಮಿನಲ್ ಮುರಳಿ’ ಸಿನಿಮಾ ಮೂಡಿಬಂದಿದೆ” ಎಂದು ನಟ ಥಾಮಸ್ ತಿಳಿಸಿದ್ದಾರೆ.

2020 ರಲ್ಲಿ ತೆರೆ ಕಂಡ ‘ಕಾರ್ಗೋ’ ಸಿನಿಮಾದಲ್ಲಿ ಪುಷ್ಪಕ್ 634A ಎಂಬ ಹೆಸರಿನ ಬಾಹ್ಯಾಕಾಶ ನೌಕೆಯಲ್ಲಿ ನಡೆಯುವ ಕತೆಯಿದೆ. ವಿಜ್ಞಾನಿ ಪ್ರಹಸ್ತ ಮತ್ತು ಅವರ ಸಹಾಯಕಿಯಾಗಿರುವ ಮಹಿಳಾ ಗಗನಯಾತ್ರಿ ಸೇರಿ ಮರಣೋತ್ತರ ಸೇವೆ ನೀಡುವ ಕರ್ತವ್ಯ ನಿಭಾಯಿಸುತ್ತಾರೆ. ಸತ್ತವರನ್ನು ಬದುಕಿಸಿ ಪುನರ್ಜನ್ಮ ನೀಡುವ ಕತೆಯನ್ನು ಸಿನಿಮಾದಲ್ಲಿ ನಿರೂಪಿಸಲಾಗಿದೆ. ಈ ಸಿನಿಮಾಕ್ಕೆ ಆರತಿ ಕಡವ್ ನಿರ್ದೇಶನವಿದೆ. ಚಿತ್ರದಲ್ಲಿ ನಟ ವಿಕ್ರಾಂತ್ ಮಸ್ಸೆ ಮತ್ತು ನಟಿ ಶ್ವೇತಾ ತ್ರಿಪಾಠಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಸದ್ಯ ಬಿಡುಗಡೆಯಾದ ‘ಜೆಎಲ್ 50’, ‘ಭನ್ವರ್’, ಮತ್ತು ‘ಓಕೆ ಕಂಪ್ಯೂಟರ್’ ಯೋಜನೆಗಳು ವೈಜ್ಙಾನಿಕ ಕಲ್ಪನೆಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರಗಳಲ್ಲಿ ನಟ ಅಭಯ್ ಡಿಯೊಲ್, ನಟ ವಿಜಯ್ ವರ್ಮ ಮತ್ತು ನಟಿ ರಾಧಿಕಾ ಆಪ್ಟೇ ಅಭಿನಯಿಸಿದ್ದಾರೆ.

“ಇಂತಹ ಸಿನಿಮಾಗಳಲ್ಲಿ ನಟಿಸಲು ತುಂಬ ಕಾತುರನಾಗಿದ್ದೆ. ದೇಶದ ಅಪ್ರತಿಮ ನಿರ್ದೇಶಕರು ಮತ್ತು ಬರಹಗಾರರ ಜೊತೆಗೆ ಕೆಲಸ ಮಾಡಿರುವುದು ಖುಷಿ ತಂದಿದೆ. ಈ ರೀತಿಯ ವೈಜ್ಞಾನಿಕ ಚಿತ್ರಗಳು ದೇಶದಲ್ಲಿ ಹೊಸ ಆರಂಭಕ್ಕೆ ಮುನ್ನುಡಿಯಾಗಲಿವೆ” ಎಂದು ನಟ ವಿಜಯ್ ವರ್ಮ ಹೇಳಿದ್ಧಾರೆ.

ಇದೇ ಸಾಲಿಗೆ ಸೇರಲಿರುವ ತೆಲುಗಿನ ಯೋಜನೆ ‘ಕುಡಿ ಯೆಡಮೈಥೆ’ ವೆಬ್ ಸಿರೀಸ್ ಬಂದಿದೆ. ಇದರಲ್ಲಿ ಅಪಹರಣ ದಂಧೆಯನ್ನು ಪತ್ತೆಹಚ್ಚುವ ಇಬ್ಬರು ನಾಯಕರ ಕತೆಯಿದೆ. ಸಿನಿಮಾಗೆ ಪವನ್ ಕುಮಾರ್ ನಿರ್ದೇಶನವಿದೆ. ಈ ವೆಬ್ ಸಿರೀಸ್‌ನಲ್ಲಿ ನಟ ರಾಹುಲ್ ವಿಜಯ್ ಮತ್ತು ನಟಿ ಅಮಲಾ ಪೌಲ್ ಅಭಿನಯಿಸಿದ್ದಾರೆ.

“ಪ್ರೇಕ್ಷಕರನ್ನು ಕುತೂಹಲದಿಂದ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೇವಲ ವೈಜ್ಞಾನಿಕ ಕಥಾ ಹಂದರದ ಸಿನಿಮಾ, ವೆಬ್ ಸಿರೀಸ್‌ಗಳಿಗೆ ಮಾತ್ರ ಇದೆ. ಇಂತಹವುಗಳಲ್ಲಿ ಪ್ರೇಕ್ಷಕ ಅದರೊಳಗೆ ಪ್ರಯಾಣಿಸಿ ಆನಂದಿಸುತ್ತಾನೆ. ಈ ರೀತಿಯ ಕಥೆಗಳನ್ನು ತೆರೆ ಮೇಲೆ ತರಲು ತುಂಬ ಶ್ರಮ ಅಗತ್ಯವಿದೆ” ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...