Homeಮುಖಪುಟವಿದೇಶಗಳಲ್ಲಿ ವ್ಯಾಸಂಗ: ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ನೀಡಲ್ಲ!

ವಿದೇಶಗಳಲ್ಲಿ ವ್ಯಾಸಂಗ: ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ನೀಡಲ್ಲ!

ಕಳೆದ ಏಳು ದಶಕಗಳಿಂದ ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸಾಗರೋತ್ತರ ವಿದ್ಯಾರ್ಥಿವೇತನ ನೀಡುತ್ತಿದೆ. ಅಂಬೇಡ್ಕರ್‌ ಆಶಯದಂತೆ ಜಾರಿಗೆ ಬಂದ ಈ ಯೋಜನೆಗೆ ಈಗ ಬಿಜೆಪಿ ಸರ್ಕಾರ ಹಲವು ನಿರ್ಬಂಧಗಳನ್ನು ಹೇರುತ್ತಿದೆ!

- Advertisement -
- Advertisement -

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಯು (NOS) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಯ ಪಂಗಡ, ಭೂರಹಿತ ಕೃಷಿ ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 1954ರಿಂದಲೂ ಜಾರಿಯಲ್ಲಿದೆ.

ಭಾರತದಾಚೆಯ ಉನ್ನತ-ಶ್ರೇಣಿಯ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು (ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಗಳು) ಪಡೆಯಲು ಈ ಯೋಜನೆಯಡಿ ಸಂಬಂಧಪಟ್ಟ ವಿದ್ಯಾರ್ಥಿಗಳು ಧನಸಹಾಯ ಪಡೆಯಬಹುದು. ಈ ವಿದ್ಯಾರ್ಥಿವೇತನ ಕಾರ್ಯಕ್ರಮವು 1954ರಲ್ಲಿ ಪ್ರಾರಂಭವಾಗಿ ಸುಮಾರು ಏಳು ದಶಕಗಳಿಂದ ಚಾಲ್ತಿಯಲ್ಲಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸುಮಾರು 5.53 ಲಕ್ಷ ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಅಧ್ಯಯನ ಮಾಡುತ್ತಾರೆ. ಇದಕ್ಕೆ ಹೋಲಿಸಿದರೆ, NOS ಕಾರ್ಯಕ್ರಮದ ಗುರಿಯು ಕೇವಲ 100 ವಿದ್ಯಾರ್ಥಿಗಳಿಗೆ ಮಾತ್ರ ಇದೆ.

ಕಳೆದ ವರ್ಷದವರೆಗೆ, NOS ವಿದ್ಯಾರ್ಥಿವೇತನ ಕಾರ್ಯಕ್ರಮವು ಎಲ್ಲಾ ಪ್ರಮುಖ ವಿಭಾಗಗಳಿಗೂ ಅನ್ವಯವಾಗುತ್ತಿತ್ತು. ಆದರೆ ಈ ವರ್ಷ ಹೊರಡಿಸಲಾದ ಹೊಸ ನಿಯಮದ ಪ್ರಕಾರ, “ಭಾರತೀಯ ಸಂಸ್ಕೃತಿ, ಪರಂಪರೆ, ಇತಿಹಾಸ”ದ ಮೇಲಿನ ಸಾಮಾಜಿಕ ಅಧ್ಯಯನಗಳಿಗೆ ಸಂಬಂಧಿಸಿದ ವಿಷಯಗಳು ಅಥವಾ ಕೋರ್ಸ್‌ಗಳಿಗೆ ಸಾಗರೋತ್ತರ ವಿದ್ಯಾರ್ಥಿ ವೇತನ ಅನ್ವಯವಾಗುವುದಿಲ್ಲ.

ಇದನ್ನೂ ಓದಿರಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ಇದಲ್ಲದೆ, ಯಾವ ವಿಷಯವು ಈ ವರ್ಗಗಳ ಅಡಿಯಲ್ಲಿ ಬರುತ್ತದೆ ಎಂಬುದರ ಕುರಿತು “NOSನ ಆಯ್ಕೆ ಮತ್ತು ಪರಿಶೀಲನಾ ಸಮಿತಿ ನಿರ್ಧರಿಸುತ್ತದೆ. ಈ ಹಠಾತ್ ಬದಲಾವಣೆಯನ್ನು ಅರ್ಜಿ ಸಲ್ಲಿಸಲು ಕೇವಲ ಎರಡು ತಿಂಗಳು ಬಾಕಿ ಇರುವ ಮೊದಲು ಮಾಡಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷಕ್ಕೆ ಈ ವಿದ್ಯಾರ್ಥಿವೇತನವನ್ನು ಪಡೆಯಲು ಇಚ್ಛಿಸಿರುವವರಿಗೆ ದೊಡ್ಡ ಪೆಟ್ಟು ನೀಡಲಾಗಿದೆ.

ಈ ಹೊಸ ನಿಯಮವು ಭಾರತ ಜಾತಿ ವ್ಯವಸ್ಥೆ, ಹಿಂದೂಧರ್ಮ, ಭಾರತದಲ್ಲಿನ ಲಿಂಗ ತಾರತಮ್ಯ, ಬ್ರಾಹ್ಮಣ ಸಂಸ್ಕೃತಿ ಮತ್ತು ಸಂಪ್ರದಾಯ, ಜಾತಿಗೆ ಅಂಟಿಕೊಂಡ ಬಡತನ ಇತ್ಯಾದಿ ವಿಷಯಗಳ ಕುರಿತು ವಿದೇಶಿ ವಿವಿಗಳಲ್ಲಿ ಅಧ್ಯಯನ ಮಾಡದಂತೆ ತಡೆಯುತ್ತದೆ ಎಂದು ಅಂಬೇಡ್ಕರ್‌ವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯವು ವಿದೇಶದಲ್ಲಿ ಟೀಕೆಗಳಿಗೆ ಒಳಗಾಗುತ್ತಿರುವಾಗ, ಪಾಶ್ಚಿಮಾತ್ಯ ದೇಶಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿರುವ ಸಂದರ್ಭದಲ್ಲಿ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನದ ಕುರಿತಾದ ಚರ್ಚೆಯು ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

2021-22ರವರೆಗೆ ಈ ನಿಬಂಧನೆ ಇರಲಿಲ್ಲ. ಯಾವುದೇ ವಿಷಯದ ಅಧ್ಯಯನಕ್ಕೆ ವಿದ್ಯಾರ್ಥಿವೇತನವನ್ನು ಈವರೆಗೆ ನೀಡಲಾಗುತ್ತಿತ್ತು. ಮುಖ್ಯವಾಗಿ ವಿಷಯದ ಆಯ್ಕೆ ಈಗ ಪರಿಶೀಲನಾ ಸಮಿತಿಯ ಮುಂದೆ ಬರುತ್ತದೆ.

ವಿದ್ಯಾರ್ಥಿವೇತನವು 2021-22 ರವರೆಗೆ ಅಂತಹ ಷರತ್ತುಗಳನ್ನು ಹೊಂದಿರಲಿಲ್ಲ. 2021-22ರ ಯೋಜನಾ ಮಾರ್ಗಸೂಚಿಯು ಯಾವುದೇ ಅಧ್ಯಯನ ಕ್ಷೇತ್ರಕ್ಕೆ ವಿದ್ಯಾರ್ಥಿವೇತನ ಲಭ್ಯವಿದೆ ಎಂದು ಹೇಳಿತ್ತು.

ಸಂಶೋಧನಾ ವಿಷಯಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಪರಿಶೀಲನಾ ಸಮಿತಿಯಿಂದಾಗಿ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ಕುಗ್ಗಿಸಬಹುದು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರಿಗೆ ಇಮೇಲ್ ಕಳುಹಿಸಿರುವ ದಿ ಟೆಲಿಗ್ರಾಫ್‌ ಪತ್ರಿಕೆಯು, “ಸರ್ಕಾರವು ಎತ್ತಿರುವ ಕಾಳಜಿಗಳ ಬಗ್ಗೆ ಸವಿವರವಾಗಿ ಹೇಳಬೇಕು” ಎಂದು ಒತ್ತಾಯಿಸಿದೆ. ಆದರೆ ಪ್ರತಿಕ್ರಿಯೆ ಈವರೆಗೆ ಬಂದಿಲ್ಲ ಎಂದು ಪತ್ರಿಕಾ ವರದಿ ಹೇಳಿದೆ.

ಕಳೆದ ವರ್ಷದವರೆಗೆ ಯೋಜನೆಯಡಿಯಲ್ಲಿ ಒಟ್ಟು ವಿದ್ಯಾರ್ಥಿವೇತನಗಳ ಸಂಖ್ಯೆ 100 ಆಗಿತ್ತು, ಇದನ್ನು 2022-23 ಅವಧಿಯಲ್ಲಿ 125ಕ್ಕೆ ಹೆಚ್ಚಿಸಲಾಗಿದೆ. ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಕ್ಕಿಂತ ಕಡಿಮೆ ಇರುವವರು ಅರ್ಜಿ ಸಲ್ಲಿಸಬಹುದು. ಸಚಿವಾಲಯವು ಅಭ್ಯರ್ಥಿಗಳಿಂದ ಮಾರ್ಚ್ 31ರವರೆಗೆ ಅರ್ಜಿಗಳನ್ನು ಕೋರಿದೆ.

ಯುಎಸ್‌ನಲ್ಲಿ ಸಂಶೋಧನೆಗೆ ಅರ್ಜಿ ಸಲ್ಲಿಸುವವರಿಗೆ, ಭಾರತ ಸರ್ಕಾರ ಸಂಪೂರ್ಣ ಬೋಧನಾ ಶುಲ್ಕವನ್ನು ಪಾವತಿಸುತ್ತದೆ. ಜೊತೆಗೆ 15,400 ಡಾಲರ್‌‌ ವಾರ್ಷಿಕ ನಿರ್ವಹಣೆ, 1,500 ಡಾಲರ್‌ ಕಾಂಟಿಜೆನ್ಸಿ ಭತ್ಯೆ, ವೈದ್ಯಕೀಯ ವಿಮೆ, ವಿಸಾ ಖರ್ಚು ವೆಚ್ಚಗಳನ್ನು ಭರಿಸುತ್ತದೆ.

ಐಐಎಂ ಬೆಂಗಳೂರಿನ ಪ್ರೊ.ದೀಪಕ್ ಮಲ್ಘನ್ ಅವರು “ಸರ್ಕಾರವು ಇಲ್ಲಿ ಸ್ಪಷ್ಟವಾಗಿ ಮತಿಭ್ರಮಣೆಯಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಆಶಯದಂತೆ ಸಾಗರೋತ್ತರ ವಿದ್ಯಾರ್ಥಿವೇತನವನ್ನು ಅಂದಿನ ಪ್ರಧಾನಿ ಜವಹರಲಾಲ್‌ ನೆಹರೂ ಜಾರಿಗೆ ತಂದಿದ್ದರು. ಇಲ್ಲಿಯವರೆಗೂ ಧನ ಸಹಾಯವನ್ನು ಸರ್ಕಾರ ಯಾವುದೇ ಅಡತಡೆ ಇಲ್ಲದೆ ಮಾಡುತ್ತಿತ್ತು. ಇಂಥದ್ದೇ ಸಂಶೋಧನೆ ಮಾಡಬೇಕು ಎಂದು ಸರ್ಕಾರ ಇಲ್ಲಿಯವರೆಗೆ ನಿರ್ಬಂಧ ವಿಧಿಸಿರಲಿಲ್ಲ. ಆದರೆ ಈಗ ಕೆಲವು ಮಾನವಿಕ ಹಾಗೂ ವಿಜ್ಞಾನ ವಿಷಯಗಳಿಗೆ ನಿರ್ಬಂಧ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯಾವುದೇ ವಿದ್ಯಾರ್ಥಿಗೆ ಈ ವಿಷಯವನ್ನು ಓದಬಾರದೆಂದು ಈ ಸರ್ಕಾರ ಹೇಗೆ ನಿರ್ಬಂಧ ವಿಧಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದರು.


ಇದನ್ನೂ ಓದಿರಿ: ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...