Homeಮುಖಪುಟವಿದೇಶಗಳಲ್ಲಿ ವ್ಯಾಸಂಗ: ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ನೀಡಲ್ಲ!

ವಿದೇಶಗಳಲ್ಲಿ ವ್ಯಾಸಂಗ: ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ನೀಡಲ್ಲ!

ಕಳೆದ ಏಳು ದಶಕಗಳಿಂದ ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸಾಗರೋತ್ತರ ವಿದ್ಯಾರ್ಥಿವೇತನ ನೀಡುತ್ತಿದೆ. ಅಂಬೇಡ್ಕರ್‌ ಆಶಯದಂತೆ ಜಾರಿಗೆ ಬಂದ ಈ ಯೋಜನೆಗೆ ಈಗ ಬಿಜೆಪಿ ಸರ್ಕಾರ ಹಲವು ನಿರ್ಬಂಧಗಳನ್ನು ಹೇರುತ್ತಿದೆ!

- Advertisement -
- Advertisement -

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಯು (NOS) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಯ ಪಂಗಡ, ಭೂರಹಿತ ಕೃಷಿ ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 1954ರಿಂದಲೂ ಜಾರಿಯಲ್ಲಿದೆ.

ಭಾರತದಾಚೆಯ ಉನ್ನತ-ಶ್ರೇಣಿಯ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು (ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಗಳು) ಪಡೆಯಲು ಈ ಯೋಜನೆಯಡಿ ಸಂಬಂಧಪಟ್ಟ ವಿದ್ಯಾರ್ಥಿಗಳು ಧನಸಹಾಯ ಪಡೆಯಬಹುದು. ಈ ವಿದ್ಯಾರ್ಥಿವೇತನ ಕಾರ್ಯಕ್ರಮವು 1954ರಲ್ಲಿ ಪ್ರಾರಂಭವಾಗಿ ಸುಮಾರು ಏಳು ದಶಕಗಳಿಂದ ಚಾಲ್ತಿಯಲ್ಲಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸುಮಾರು 5.53 ಲಕ್ಷ ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಅಧ್ಯಯನ ಮಾಡುತ್ತಾರೆ. ಇದಕ್ಕೆ ಹೋಲಿಸಿದರೆ, NOS ಕಾರ್ಯಕ್ರಮದ ಗುರಿಯು ಕೇವಲ 100 ವಿದ್ಯಾರ್ಥಿಗಳಿಗೆ ಮಾತ್ರ ಇದೆ.

ಕಳೆದ ವರ್ಷದವರೆಗೆ, NOS ವಿದ್ಯಾರ್ಥಿವೇತನ ಕಾರ್ಯಕ್ರಮವು ಎಲ್ಲಾ ಪ್ರಮುಖ ವಿಭಾಗಗಳಿಗೂ ಅನ್ವಯವಾಗುತ್ತಿತ್ತು. ಆದರೆ ಈ ವರ್ಷ ಹೊರಡಿಸಲಾದ ಹೊಸ ನಿಯಮದ ಪ್ರಕಾರ, “ಭಾರತೀಯ ಸಂಸ್ಕೃತಿ, ಪರಂಪರೆ, ಇತಿಹಾಸ”ದ ಮೇಲಿನ ಸಾಮಾಜಿಕ ಅಧ್ಯಯನಗಳಿಗೆ ಸಂಬಂಧಿಸಿದ ವಿಷಯಗಳು ಅಥವಾ ಕೋರ್ಸ್‌ಗಳಿಗೆ ಸಾಗರೋತ್ತರ ವಿದ್ಯಾರ್ಥಿ ವೇತನ ಅನ್ವಯವಾಗುವುದಿಲ್ಲ.

ಇದನ್ನೂ ಓದಿರಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ಇದಲ್ಲದೆ, ಯಾವ ವಿಷಯವು ಈ ವರ್ಗಗಳ ಅಡಿಯಲ್ಲಿ ಬರುತ್ತದೆ ಎಂಬುದರ ಕುರಿತು “NOSನ ಆಯ್ಕೆ ಮತ್ತು ಪರಿಶೀಲನಾ ಸಮಿತಿ ನಿರ್ಧರಿಸುತ್ತದೆ. ಈ ಹಠಾತ್ ಬದಲಾವಣೆಯನ್ನು ಅರ್ಜಿ ಸಲ್ಲಿಸಲು ಕೇವಲ ಎರಡು ತಿಂಗಳು ಬಾಕಿ ಇರುವ ಮೊದಲು ಮಾಡಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷಕ್ಕೆ ಈ ವಿದ್ಯಾರ್ಥಿವೇತನವನ್ನು ಪಡೆಯಲು ಇಚ್ಛಿಸಿರುವವರಿಗೆ ದೊಡ್ಡ ಪೆಟ್ಟು ನೀಡಲಾಗಿದೆ.

ಈ ಹೊಸ ನಿಯಮವು ಭಾರತ ಜಾತಿ ವ್ಯವಸ್ಥೆ, ಹಿಂದೂಧರ್ಮ, ಭಾರತದಲ್ಲಿನ ಲಿಂಗ ತಾರತಮ್ಯ, ಬ್ರಾಹ್ಮಣ ಸಂಸ್ಕೃತಿ ಮತ್ತು ಸಂಪ್ರದಾಯ, ಜಾತಿಗೆ ಅಂಟಿಕೊಂಡ ಬಡತನ ಇತ್ಯಾದಿ ವಿಷಯಗಳ ಕುರಿತು ವಿದೇಶಿ ವಿವಿಗಳಲ್ಲಿ ಅಧ್ಯಯನ ಮಾಡದಂತೆ ತಡೆಯುತ್ತದೆ ಎಂದು ಅಂಬೇಡ್ಕರ್‌ವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯವು ವಿದೇಶದಲ್ಲಿ ಟೀಕೆಗಳಿಗೆ ಒಳಗಾಗುತ್ತಿರುವಾಗ, ಪಾಶ್ಚಿಮಾತ್ಯ ದೇಶಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿರುವ ಸಂದರ್ಭದಲ್ಲಿ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನದ ಕುರಿತಾದ ಚರ್ಚೆಯು ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

2021-22ರವರೆಗೆ ಈ ನಿಬಂಧನೆ ಇರಲಿಲ್ಲ. ಯಾವುದೇ ವಿಷಯದ ಅಧ್ಯಯನಕ್ಕೆ ವಿದ್ಯಾರ್ಥಿವೇತನವನ್ನು ಈವರೆಗೆ ನೀಡಲಾಗುತ್ತಿತ್ತು. ಮುಖ್ಯವಾಗಿ ವಿಷಯದ ಆಯ್ಕೆ ಈಗ ಪರಿಶೀಲನಾ ಸಮಿತಿಯ ಮುಂದೆ ಬರುತ್ತದೆ.

ವಿದ್ಯಾರ್ಥಿವೇತನವು 2021-22 ರವರೆಗೆ ಅಂತಹ ಷರತ್ತುಗಳನ್ನು ಹೊಂದಿರಲಿಲ್ಲ. 2021-22ರ ಯೋಜನಾ ಮಾರ್ಗಸೂಚಿಯು ಯಾವುದೇ ಅಧ್ಯಯನ ಕ್ಷೇತ್ರಕ್ಕೆ ವಿದ್ಯಾರ್ಥಿವೇತನ ಲಭ್ಯವಿದೆ ಎಂದು ಹೇಳಿತ್ತು.

ಸಂಶೋಧನಾ ವಿಷಯಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಪರಿಶೀಲನಾ ಸಮಿತಿಯಿಂದಾಗಿ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ಕುಗ್ಗಿಸಬಹುದು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರಿಗೆ ಇಮೇಲ್ ಕಳುಹಿಸಿರುವ ದಿ ಟೆಲಿಗ್ರಾಫ್‌ ಪತ್ರಿಕೆಯು, “ಸರ್ಕಾರವು ಎತ್ತಿರುವ ಕಾಳಜಿಗಳ ಬಗ್ಗೆ ಸವಿವರವಾಗಿ ಹೇಳಬೇಕು” ಎಂದು ಒತ್ತಾಯಿಸಿದೆ. ಆದರೆ ಪ್ರತಿಕ್ರಿಯೆ ಈವರೆಗೆ ಬಂದಿಲ್ಲ ಎಂದು ಪತ್ರಿಕಾ ವರದಿ ಹೇಳಿದೆ.

ಕಳೆದ ವರ್ಷದವರೆಗೆ ಯೋಜನೆಯಡಿಯಲ್ಲಿ ಒಟ್ಟು ವಿದ್ಯಾರ್ಥಿವೇತನಗಳ ಸಂಖ್ಯೆ 100 ಆಗಿತ್ತು, ಇದನ್ನು 2022-23 ಅವಧಿಯಲ್ಲಿ 125ಕ್ಕೆ ಹೆಚ್ಚಿಸಲಾಗಿದೆ. ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಕ್ಕಿಂತ ಕಡಿಮೆ ಇರುವವರು ಅರ್ಜಿ ಸಲ್ಲಿಸಬಹುದು. ಸಚಿವಾಲಯವು ಅಭ್ಯರ್ಥಿಗಳಿಂದ ಮಾರ್ಚ್ 31ರವರೆಗೆ ಅರ್ಜಿಗಳನ್ನು ಕೋರಿದೆ.

ಯುಎಸ್‌ನಲ್ಲಿ ಸಂಶೋಧನೆಗೆ ಅರ್ಜಿ ಸಲ್ಲಿಸುವವರಿಗೆ, ಭಾರತ ಸರ್ಕಾರ ಸಂಪೂರ್ಣ ಬೋಧನಾ ಶುಲ್ಕವನ್ನು ಪಾವತಿಸುತ್ತದೆ. ಜೊತೆಗೆ 15,400 ಡಾಲರ್‌‌ ವಾರ್ಷಿಕ ನಿರ್ವಹಣೆ, 1,500 ಡಾಲರ್‌ ಕಾಂಟಿಜೆನ್ಸಿ ಭತ್ಯೆ, ವೈದ್ಯಕೀಯ ವಿಮೆ, ವಿಸಾ ಖರ್ಚು ವೆಚ್ಚಗಳನ್ನು ಭರಿಸುತ್ತದೆ.

ಐಐಎಂ ಬೆಂಗಳೂರಿನ ಪ್ರೊ.ದೀಪಕ್ ಮಲ್ಘನ್ ಅವರು “ಸರ್ಕಾರವು ಇಲ್ಲಿ ಸ್ಪಷ್ಟವಾಗಿ ಮತಿಭ್ರಮಣೆಯಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಆಶಯದಂತೆ ಸಾಗರೋತ್ತರ ವಿದ್ಯಾರ್ಥಿವೇತನವನ್ನು ಅಂದಿನ ಪ್ರಧಾನಿ ಜವಹರಲಾಲ್‌ ನೆಹರೂ ಜಾರಿಗೆ ತಂದಿದ್ದರು. ಇಲ್ಲಿಯವರೆಗೂ ಧನ ಸಹಾಯವನ್ನು ಸರ್ಕಾರ ಯಾವುದೇ ಅಡತಡೆ ಇಲ್ಲದೆ ಮಾಡುತ್ತಿತ್ತು. ಇಂಥದ್ದೇ ಸಂಶೋಧನೆ ಮಾಡಬೇಕು ಎಂದು ಸರ್ಕಾರ ಇಲ್ಲಿಯವರೆಗೆ ನಿರ್ಬಂಧ ವಿಧಿಸಿರಲಿಲ್ಲ. ಆದರೆ ಈಗ ಕೆಲವು ಮಾನವಿಕ ಹಾಗೂ ವಿಜ್ಞಾನ ವಿಷಯಗಳಿಗೆ ನಿರ್ಬಂಧ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯಾವುದೇ ವಿದ್ಯಾರ್ಥಿಗೆ ಈ ವಿಷಯವನ್ನು ಓದಬಾರದೆಂದು ಈ ಸರ್ಕಾರ ಹೇಗೆ ನಿರ್ಬಂಧ ವಿಧಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದರು.


ಇದನ್ನೂ ಓದಿರಿ: ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....