Homeಮುಖಪುಟಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

- Advertisement -
- Advertisement -

ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಹಿಂದಿಯನ್ನು “ರಾಷ್ಟ್ರೀಯ ಭಾಷೆ” ಎಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈದರಾಬಾದ್ ನಿವಾಸಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಪ್ರಸಂಗ ಜರುಗಿದೆ.

ಮುಂಬೈ ಪೊಲೀಸರು ಗಂಗಮ್ ಸುಧೀರ್ ಕುಮಾರ್ ರೆಡ್ಡಿ ಎಂಬ ವ್ಯಕ್ತಿಯನ್ನು ಅವರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎಂದು ಆರೋಪಿಸಿ ಜುಲೈ 2019 ರಲ್ಲಿ ಬಂಧಿಸಿದ್ದರು. ಆ ವಾಹನವು ರೆಡ್ಡಿ ಅವರ ಹೆಂಡತಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ ಸೆಕ್ಷನ್‌ಗಳ ಅಡಿಯಲ್ಲಿ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಜಾಮೀನು ಅರ್ಜಿ ಸಲ್ಲಿಸಿರುವ ರೆಡ್ಡಿ ಪೊಲೀಸರು ತನ್ನ ಬಂಧನಕ್ಕೆ ಕಾರಣಗಳ ಬಗ್ಗೆ ಹಾಗೂ ನನ್ನ  ಶಾಸನಬದ್ಧ ಹಕ್ಕುಗಳ ಬಗ್ಗೆ ಹಿಂದಿಯಲ್ಲಿ ಹೇಳಿದ್ದಾರೆ. ನನಗೆ ಹಿಂದಿ ಬಾರದ ಕಾರಣ ಅದು ಅರ್ಥವಾಗಿಲ್ಲ, ಹಾಗಾಗಿ ಜಾಮೀನು ನೀಡಬೇಕೆಂದು ವಾದಿಸಿದ್ದರು.

ಈ ವಾದಕ್ಕೆ ಪ್ರತಿಕ್ರಿಯೆಯಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು, ‘ರೆಡ್ಡಿ ಅವರು ಟ್ರಾವೆಲ್ಸ್ ವ್ಯವಹಾರವನ್ನು ಹೊಂದಿದ್ದಾರೆ ಮತ್ತು ಅವರು “ಸ್ಥಳೀಯ ಭಾಷೆಯ ಸ್ಥಳಾಕೃತಿ ಮತ್ತು ಸಂಕೇತಗಳ ಬಗ್ಗೆ ತಿಳಿದಿರಬೇಕು” ಎಂದು ಹೇಳಿ, ರೆಡ್ಡಿಗೆ ಹಿಂದಿ ಗೊತ್ತಿದೆ ಎಂದು ಹೈಕೋರ್ಟ್ ಭಾವಿಸಬಹುದು’ ಎಂದಿದ್ದರು.

“ಅರ್ಜಿದಾರರಿಗೆ ತಮ್ಮ ಹಕ್ಕಿನ ಬಗ್ಗೆ ಹಿಂದಿಯಲ್ಲಿ ತಿಳಿಸಲಾಗಿದೆ, ಅದು ರಾಷ್ಟ್ರೀಯ ಭಾಷೆಯಾಗಿದೆ” ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸಾಂಬ್ರೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ರೆಡ್ಡಿ ವಾದಿಸಿದ್ದಾರೆ. ಅವರು ಸಂವಿಧಾನದ 345 ನೇ ವಿಧಿಯನ್ನು ಉಲ್ಲೇಖಿಸಿ, ಇದು ಶಾಸಕಾಂಗವು ರಾಜ್ಯದಲ್ಲಿ ಯಾವುದೇ ರಾಜ್ಯ ಭಾಷೆ ಅಥವಾ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸಲು ಅನುಮತಿಸುತ್ತದೆ. ಇಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಉಲ್ಲೇಖಿಸಿಲ್ಲ ಎಂದಿದ್ದಾರೆ.

ಸಂವಿಧಾನ ರಚನಾ ಸಭೆಯಲ್ಲಿ ಈ ಬಗ್ಗೆ ತೀವ್ರ ಚರ್ಚೆ ನಡೆದಿದೆ. ನಮ್ಮ ಸಂವಿಧಾನ ರಚನಾಕಾರರು ಹಿಂದಿಯನ್ನು ಹಿಂದಿಯನ್ನು ರಾಷ್ಟ್ರಭಾಷೆಯೆಂದು ಒಪ್ಪಿಕೊಂಡಿಲ್ಲ ಎಂದು ರೆಡ್ಡಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಪೊಲೀಸರು ನನಗೆ ತಿಳಿದಿರುವ ರಾಜ್ಯಭಾಷೆಯಲ್ಲಿ ನನ್ನ ಹಕ್ಕುಗಳ ಬಗ್ಗೆ, ನನ್ನ ಮೇಲಿನ ಆರೋಪಗಳ ಬಗ್ಗೆ ತಿಳಿಸಿಲ್ಲ. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. ಟ್ರಾವೆಲ್ ಏಜೆನ್ಸಿಯವರು ಸ್ಥಳೀಯ ಭಾಷೆ ತಿಳಿದಿರಬೇಕು ಎಂಬ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿರುವ ಅವರು, ಸ್ಥಳೀಯ ಭಾಷೆಯಲ್ಲಿ ಸೈನ್‌ಬೋರ್ಡ್‌ಗಳಿಗಿಂತ ನಾನು ಗೂಗಲ್ ನಕ್ಷೆಗಳ ಅಪ್ಲಿಕೇಶನ್ ಅನ್ನು ಅವಲಂಬಿಸಿದ್ದೆ ಎಂದು ಉತ್ತರಿಸಿದ್ದಾರೆ.


ಇದನ್ನೂ ಓದಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...