Homeಮುಖಪುಟಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

- Advertisement -
- Advertisement -

ಸುಮಾರು 18 ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಿದ್ದ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 18 ಮಂದಿ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ಶಹಜಹಾನ್‌ಪುರದ ನ್ಯಾಯಾಲಯವು ಇಂದು (ಫೆ.20) ಪೊಲೀಸರಿಗೆ ನಿರ್ದೇಶನ ನೀಡಿದೆ.

ಶಹಜಹಾನ್‌ಪುರದ ನ್ಯಾಯಾಲಯದ ಆದೇಶದ ಮೇರೆಗೆ ಜಲಾಲಾಬಾದ್‌ನಲ್ಲಿ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್.ಆನಂದ್ ತಿಳಿಸಿದ್ದಾರೆ.

2004ರ ಅಕ್ಟೋಬರ್ 3ರಂದು ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಚಚುಪುರದ ಇಬ್ಬರು ಗ್ರಾಮಸ್ಥರಾದ ಪ್ರಹ್ಲಾದ್ ಮತ್ತು ಧನಪಾಲ್ ಅವರು ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಪೊಲೀಸರು ಇಬ್ಬರನ್ನೂ ಗುಂಡಿಕ್ಕಿ ಕೊಂದದು, ಅವರ ಮೃತದೇಹಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಸಂತ್ರಸ್ತರ ಪರ ವಕೀಲ ಎಜಾಜ್ ಹಸನ್ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ಮೃತ ಪ್ರಹ್ಲಾದ್ ಅವರ ಸಹೋದರ ರಾಮ್ ಕೀರ್ತಿ ವಿವಿಧ ಆಯೋಗಗಳು ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದ್ದರು. ಆದರೆ ಯಾವುದೇ ವಿಚಾರಣೆ ನಡೆಯದ ಕಾರಣ, ನವೆಂಬರ್ 24, 2012 ರಂದು ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಆದರೆ, ಸಾಕಷ್ಟು ಸಮಯ ಕಳೆದು ಹೋಗಿದೆ, ಅಂತಿಮ ವರದಿಯನ್ನುಸಲ್ಲಿಸಲಾಗಿದೆ ಎಂದು ಹೇಳಿ ಮುಖ್ಯ ಮ್ಯಾಜಿಸ್ಟ್ರೇಟ್ ಮೇಲ್ಮನವಿ ತಿರಸ್ಕರಿಸಿದ್ದರು. ಇದರ ನಂತರ, ಅವರು ಜಿಲ್ಲಾ ನ್ಯಾಯಾಧೀಶ ಸೌರಭ್ ದ್ವಿವೇದಿ ಅವರ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಜನವರಿ 28 ರಂದು ಸಿಜೆಎಂ 18 ಪೊಲೀಸರ ವಿರುದ್ಧ ಐಪಿಸಿಯ ಸೆಕ್ಷನ್ 302/34 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆದೇಶಿಸಿದ್ದಾರೆ ಎಂದು ವಕೀಲ ಎಜಾಜ್ ಹಸನ್ ಖಾನ್ ಹೇಳಿದರು.

ಸುಶೀಲ್ ಕುಮಾರ್ (ಅಂದಿನ ಎಸ್ಪಿ), ಮಾತಾ ಪ್ರಸಾದ್ (ಅಂದಿನ ಹೆಚ್ಚುವರಿ ಎಸ್ಪಿ), ಮುಮ್ಮು ಲಾಲ್ (ಅಂದಿನ ಸಿಒ ತಿಲ್ಹಾರ್), ಜೈಕರನ್ ಸಿಂಗ್ ಭದೌರಿಯಾ (ಅಂದಿನ ಸಿಒ ಜಲಾಲಾಬಾದ್) ಆರ್.ಕೆ.ಸಿಂಗ್ (ಅಂದಿನ ಎಸ್ಪಿ) ಆರ್.ಕೆ.ಸಿಂಗ್ ಸೇರಿದಂತೆ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನಗಳನ್ನು ನೀಡಲಾಗಿದೆ.

ಈ ನಕಲಿ ಎನ್‌ಕೌಂಟರ್‌ ಘಟನೆ ನಡೆದಾಗ ಕಲ್ಲು, ನಜ್ಜು ಮತ್ತು ನರೇಶ್ ಧಿಮಾರ್‌ನಂತಹ ಡಕಾಯಿತರು ಶಹಜಹಾನ್‌ಪುರದ ಜಲಾಲಾಬಾದ್ ತೆಹಸಿಲ್‌ನಲ್ಲಿ ಸಕ್ರಿಯರಾಗಿದ್ದರು.


ಇದನ್ನೂ ಓದಿ: ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...