Homeಮುಖಪುಟಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

ಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

- Advertisement -
- Advertisement -

ಸಾಮಾಜಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ನ್ಯಾಯೋಚಿತ ಜಾಗತೀಕರಣಕ್ಕಾಗಿ ವಿಶ್ವ ಸಾಮಾಜಿಕ ನ್ಯಾಯ ದಿನದ ಘೋಷಣೆಗೆ ಸಹಿ ಹಾಕಿತು.

ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲಕ ಬಡತನ, ಜಾತಿ ಮತ್ತು ದೈಹಿಕ ತಾರತಮ್ಯ, ಅನಕ್ಷರತೆ, ಸಾಮಾಜಿಕ ಮತ್ತು ಧಾರ್ಮಿಕ ತಾರತಮ್ಯವನ್ನು ಹೋಗಲಾಡಿಸುವುದು ಹಾಗೂ ಸಮಸ್ಯೆ ಪರಿಹರಿಸುವುದು ಪ್ರಮುಖ ಉದ್ದೇಶಗಳಾಗಿವೆ.

ಪ್ರತಿ ವರ್ಷ ಒಂದೊಂದು ಸದುದ್ದೇಶದೊಂದಿಗೆ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. 2022 ರ ವಿಶ್ವ ನ್ಯಾಯ ದಿನದ ಥೀಮ್ ‘ಔಪಚಾರಿಕ ಉದ್ಯೋಗದ ಮೂಲಕ ಸಾಮಾಜಿಕ ನ್ಯಾಯವನ್ನು ಸಾಧಿಸುವುದಾಗಿದೆ. ಕಳೆದ ವರ್ಷದ ಥೀಮ್ ‘ಡಿಜಿಟಲ್ ಆರ್ಥಿಕತೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಒಂದು ಕರೆ’ ಎಂಬುದಾಗಿತ್ತು.

ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಆರ್ಥಿಕ ಬೆಳವಣಿಗೆ, ಲಿಂಗ ಸಮಾನತೆ ಮತ್ತು ಮಾನವನ ಸಾರ್ವತ್ರಿಕ ಸಮಾನತೆ ಸಾಧಿಸುವ ಗುರಿಯೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನ ಘೋಷಣೆಯ ಹಿಂದಿನ ಆಲೋಚನೆಯಾಗಿದೆ.

ಬಡತನ, ನಿರುದ್ಯೋಗ, ಸಾಮಾಜಿಕ ಉನ್ನತಿ, ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆಯಂಥ ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಗುರುತಿಸುವ ಅಗತ್ಯವನ್ನು ಅಂಗೀಕರಿಸುವುದು. ಸಾಮಾಜಿಕ ಏಕೀಕರಣ ಮತ್ತು ಉದ್ಯೋಗದ ಗುರಿಯನ್ನು ಸಾಧಿಸುವತ್ತ ಗಮನಹರಿಸುವುದು. ಸಾಮಾಜಿಕ ಜವಾಬ್ದಾರಿಗಳು, ನ್ಯಾಯ ಮತ್ತು ಬಡತನ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಜನರನ್ನು ಪ್ರೋತ್ಸಾಹಿಸುವುದಾಗಿದೆ.

ಇಂದು ವಿಶ್ವದ ರಾಷ್ಟ್ರ ರಾಷ್ಟ್ರಗಳ ನಡುವೆ ಅಸಮಾನತೆ ಹೆಚ್ಚುತ್ತಿದೆ. ಕೆಲ ಮುಂದುವರಿದ ರಾಷ್ಟ್ರಗಳು ಇತರ ರಾಷ್ಟ್ರಗಳನ್ನು ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಂಡು ಶೋಷಿಸುತ್ತಿವೆ. ಜಾಗತೀಕರಣದಿಂದಾಗಿ ತೃತೀಯ ಜಗತ್ತಿನ ರಾಷ್ಟ್ರಗಳನ್ನು ತಮ್ಮ ಮಾರುಕಟ್ಟೆಯನ್ನಾಗಿ ಮಾಡಿಕೊಳ್ಳುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಸಮಸ್ಯೆಗಳನ್ನು ಚರ್ಚಿಸಲು ಸಾಮಾಜಿಕ ನ್ಯಾಯ ದಿನಗಳು ಉಪಯೋಗವಾಗಬೇಕಿವೆ.

ಸಾಮಾಜಿಕ ನ್ಯಾಯದ ವಿಶ್ವ ದಿನದ ಇತಿಹಾಸ:

ಜನರಲ್ ಅಸೆಂಬ್ಲಿ ತನ್ನ 63 ನೇ ಅಧಿವೇಶನದಲ್ಲಿ ನವೆಂಬರ್ 26, 2007 ರಂದು, ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅಂದಿನಿಂದ, ಪ್ರತಿ ವರ್ಷ ಫೆಬ್ರವರಿ 20 ನ್ನು ವಿಶ್ವದಾದ್ಯಂತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ 10ನೇ ಜೂನ್ 2008 ರಂದು ನ್ಯಾಯಯುತ ಜಾಗತೀಕರಣಕ್ಕಾಗಿ ಸಾಮಾಜಿಕ ನ್ಯಾಯ ಘೋಷಣೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು.


ಇದನ್ನೂ ಓದಿ; ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...