Homeಮುಖಪುಟಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

ಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

- Advertisement -
- Advertisement -

ಸಾಮಾಜಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ನ್ಯಾಯೋಚಿತ ಜಾಗತೀಕರಣಕ್ಕಾಗಿ ವಿಶ್ವ ಸಾಮಾಜಿಕ ನ್ಯಾಯ ದಿನದ ಘೋಷಣೆಗೆ ಸಹಿ ಹಾಕಿತು.

ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲಕ ಬಡತನ, ಜಾತಿ ಮತ್ತು ದೈಹಿಕ ತಾರತಮ್ಯ, ಅನಕ್ಷರತೆ, ಸಾಮಾಜಿಕ ಮತ್ತು ಧಾರ್ಮಿಕ ತಾರತಮ್ಯವನ್ನು ಹೋಗಲಾಡಿಸುವುದು ಹಾಗೂ ಸಮಸ್ಯೆ ಪರಿಹರಿಸುವುದು ಪ್ರಮುಖ ಉದ್ದೇಶಗಳಾಗಿವೆ.

ಪ್ರತಿ ವರ್ಷ ಒಂದೊಂದು ಸದುದ್ದೇಶದೊಂದಿಗೆ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. 2022 ರ ವಿಶ್ವ ನ್ಯಾಯ ದಿನದ ಥೀಮ್ ‘ಔಪಚಾರಿಕ ಉದ್ಯೋಗದ ಮೂಲಕ ಸಾಮಾಜಿಕ ನ್ಯಾಯವನ್ನು ಸಾಧಿಸುವುದಾಗಿದೆ. ಕಳೆದ ವರ್ಷದ ಥೀಮ್ ‘ಡಿಜಿಟಲ್ ಆರ್ಥಿಕತೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಒಂದು ಕರೆ’ ಎಂಬುದಾಗಿತ್ತು.

ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಆರ್ಥಿಕ ಬೆಳವಣಿಗೆ, ಲಿಂಗ ಸಮಾನತೆ ಮತ್ತು ಮಾನವನ ಸಾರ್ವತ್ರಿಕ ಸಮಾನತೆ ಸಾಧಿಸುವ ಗುರಿಯೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನ ಘೋಷಣೆಯ ಹಿಂದಿನ ಆಲೋಚನೆಯಾಗಿದೆ.

ಬಡತನ, ನಿರುದ್ಯೋಗ, ಸಾಮಾಜಿಕ ಉನ್ನತಿ, ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆಯಂಥ ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಗುರುತಿಸುವ ಅಗತ್ಯವನ್ನು ಅಂಗೀಕರಿಸುವುದು. ಸಾಮಾಜಿಕ ಏಕೀಕರಣ ಮತ್ತು ಉದ್ಯೋಗದ ಗುರಿಯನ್ನು ಸಾಧಿಸುವತ್ತ ಗಮನಹರಿಸುವುದು. ಸಾಮಾಜಿಕ ಜವಾಬ್ದಾರಿಗಳು, ನ್ಯಾಯ ಮತ್ತು ಬಡತನ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಜನರನ್ನು ಪ್ರೋತ್ಸಾಹಿಸುವುದಾಗಿದೆ.

ಇಂದು ವಿಶ್ವದ ರಾಷ್ಟ್ರ ರಾಷ್ಟ್ರಗಳ ನಡುವೆ ಅಸಮಾನತೆ ಹೆಚ್ಚುತ್ತಿದೆ. ಕೆಲ ಮುಂದುವರಿದ ರಾಷ್ಟ್ರಗಳು ಇತರ ರಾಷ್ಟ್ರಗಳನ್ನು ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಂಡು ಶೋಷಿಸುತ್ತಿವೆ. ಜಾಗತೀಕರಣದಿಂದಾಗಿ ತೃತೀಯ ಜಗತ್ತಿನ ರಾಷ್ಟ್ರಗಳನ್ನು ತಮ್ಮ ಮಾರುಕಟ್ಟೆಯನ್ನಾಗಿ ಮಾಡಿಕೊಳ್ಳುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಸಮಸ್ಯೆಗಳನ್ನು ಚರ್ಚಿಸಲು ಸಾಮಾಜಿಕ ನ್ಯಾಯ ದಿನಗಳು ಉಪಯೋಗವಾಗಬೇಕಿವೆ.

ಸಾಮಾಜಿಕ ನ್ಯಾಯದ ವಿಶ್ವ ದಿನದ ಇತಿಹಾಸ:

ಜನರಲ್ ಅಸೆಂಬ್ಲಿ ತನ್ನ 63 ನೇ ಅಧಿವೇಶನದಲ್ಲಿ ನವೆಂಬರ್ 26, 2007 ರಂದು, ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅಂದಿನಿಂದ, ಪ್ರತಿ ವರ್ಷ ಫೆಬ್ರವರಿ 20 ನ್ನು ವಿಶ್ವದಾದ್ಯಂತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ 10ನೇ ಜೂನ್ 2008 ರಂದು ನ್ಯಾಯಯುತ ಜಾಗತೀಕರಣಕ್ಕಾಗಿ ಸಾಮಾಜಿಕ ನ್ಯಾಯ ಘೋಷಣೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು.


ಇದನ್ನೂ ಓದಿ; ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...