Homeಮುಖಪುಟಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

- Advertisement -
- Advertisement -

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿನ 49 ಮಂದಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ಬಿಜೆಪಿ ಗುಜರಾತ್ ಘಟಕ ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ನಂತರ ಟ್ವಿಟರ್‌ ಸಂಸ್ಥೆ ಸದರಿ ಟ್ವೀಟ್ ಅನ್ನು ರದ್ದು ಮಾಡಿದೆ.

ವ್ಯಂಗ್ಯಚಿತ್ರವು “ಸತ್ಯಮೇವ್ ಜಯತೇ” ಮತ್ತು “ಭಯೋತ್ಪಾದನೆಯನ್ನು ಹರಡುವವರಿಗೆ ಕ್ಷಮೆಯಿಲ್ಲ” ಎಂಬ ವಾಕ್ಯಗಳೊಂದಿಗೆ ಇದ್ದು, ಟೋಪಿ ಧರಿಸಿರುವ ವ್ಯಕ್ತಿಗಳನ್ನು ನೇಣುಹಾಕಿರುವ ಸ್ಥಿತಿಯಲ್ಲಿ ಚಿತ್ರಿಸಲಾಗಿದೆ.

ಫೆಬ್ರವರಿ 19ರಂದು ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಗುಜರಾತ್ ಬಿಜೆಪಿಯ (@BJP4Gujarat) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿವಾದಿತ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಟ್ವೀಟ್ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಟ್ವಿಟರ್‌ ಸಂಸ್ಥೆಯು ಟ್ವೀಟ್‌ ಅನ್ನು ರದ್ದುಪಡಿಸಿದ್ದು, “ಟ್ವಿಟರ್‌ನ ನಿಯಮಗಳನ್ನು ಗುಜರಾತ್‌ ಬಿಜೆಪಿಯ ಪೋಸ್ಟ್‌ ಉಲ್ಲಂಘಿಸಿದೆ” ಎಂದು ತಿಳಿಸಿದೆ. (ಗುಜರಾತ್‌‌ ಬಿಜೆಪಿ ಟ್ವೀಟ್‌ನ ಅರ್ಕೈವ್‌ ಲಿಂಕ್‌ ಇಲ್ಲಿದೆ).

‘ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಬಿಜೆಪಿ ತೀರ್ಪಿನ ಲಾಭ ಪಡೆಯಲು ಯತ್ನಿಸಿದೆ” ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

“ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಇಬ್ಬರು ಮಾಜಿ ಪ್ರಧಾನಿಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮವಾಗಿ ಈ ವಿಚಾರ ಯಾರಿಗೂ ತಿಳಿಯದು. ಇಂದು ಬಿಜೆಪಿ ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಸಂತೋಷಪಡುತ್ತಿದೆ. ನ್ಯಾಯಾಲಯದ ತೀರ್ಪಿನ ಲಾಭವನ್ನು ಪಡೆಯುತ್ತಿದೆ. ಅಂತಹ ತೀರ್ಪುಗಳನ್ನು ರಾಜಕೀಯಗೊಳಿಸಿ ನೋಡಬಾರದು. ಇಂಥವುಗಳಿಂದ ರಾಜಕೀಯವಾಗಿ ಮೈಲೇಜ್ ಪಡೆಯುವ ಯಾವುದೇ ಅವಕಾಶವನ್ನು ತಪ್ಪಿಸಬೇಕು ”ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಮನೀಶ್ ದೋಷಿ ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಗುಜರಾತ್ ಬಿಜೆಪಿಯ ಮಾಧ್ಯಮ ಸೆಲ್ ಸಂಚಾಲಕ ಯಜ್ಞೇಶ್ ದವೆ ಪ್ರತಿಕ್ರಿಯಿಸಿ, “ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿನ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಬಿಜೆಪಿ ರಚಿಸಿದೆ. ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಅಪರಾಧಿಗಳ ಮೂಲ ಫೋಟೋಗಳನ್ನು ಪ್ರಕಟಿಸಿವೆ, ಪ್ರಸಾರ ಮಾಡಿವೆ. ಆ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಸಿದ್ಧಪಡಿಸಲಾಗಿದೆ ಎಂದಿರುವ ದವೆ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಎಲ್ಲಾ ಅಪರಾಧಿಗಳು ಟೋಪಿಯನ್ನು ಧರಿಸಿರುವ ಚಿತ್ರಗಳನ್ನು ಮಾಧ್ಯಮ ವರದಿಗಳು ಹೊಂದಿಲ್ಲ ಎಂದು ಸೂಚಿಸಿದಾಗ, ಡೇವ್ ಅದನ್ನು ವಿವರಿಸಲು ನಿರಾಕರಿಸಿದರು. ಅಭೂತಪೂರ್ವ ತೀರ್ಪನ್ನು ಸ್ವಾಗತಿಸುವುದು ಟ್ವೀಟ್‌ನ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕ ಬಿಜೆಪಿಯ ಟ್ವೀಟ್‌ ಕೂಡ ಇತ್ತೀಚೆಗೆ ರದ್ದಾಗಿತ್ತು

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿದ್ದ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿತ್ತು.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).


ಇದನ್ನೂ ಓದಿರಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...