Homeಮುಖಪುಟಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

ಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

- Advertisement -
- Advertisement -

ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದಿಂದ ಸಲ್ಪ ದೂರದಲ್ಲಿ 45 ವರ್ಷದ ರಂಜಿತಾ ಗುಪ್ತಾ ಅವರು ಕಲಾಕೃತಿಗಳನ್ನು ಮಾರಾಟ ಮಾಡುವ ಸಣ್ಣ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರದ ಭಾಗವಾಗಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ರಂಜಿತಾ ತಮ್ಮ ಅಂಗಡಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ಇದ್ದಾರೆ.

ರಂಜಿತಾ ಅವರಿಗೆ ತೊದಲು ಸಮಸ್ಯೆ ಇದೆ. ಹೀಗಾಗಿ ಅವರು ಮದುವೆಯಾಗುವುದು ಕಷ್ಟವಾಯಿತು. ಸಹೋದರನೇ ರಂಜಿತಾ ಅವರನ್ನು ಪೋಷಣೆ ಮಾಡುತ್ತಿದ್ದು, ರಂಜಿತಾ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರಕ್ಕೆ ತೆರಳುವ ಮುನ್ನ, ಹನುಮಂತನ ಬೃಹತ್ ರಚನೆಯನ್ನು ಹೊಂದಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭಕ್ತರು ಮೊದಲು ಭೇಟಿ ನೀಡಬೇಕೆಂಬ ಸಂಪ್ರದಾಯ ಇಲ್ಲಿದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳ ಜೀವನ ನೆಮ್ಮದಿಯಾಗಿ ಇತ್ತು.

ರಂಜಿತಾ ಅವರ ಅಂಗಡಿಯನ್ನು ಅವರ ಅಜ್ಜ ನಿರ್ಮಿಸಿದರು. ನಂತರ ಅವರ ತಂದೆ ನಡೆಸುತ್ತಿದ್ದರು. ತಂದೆಯ ಮರಣದ ನಂತರ, ರಂಜಿತಾ ತನ್ನ ಸಹೋದರನೊಂದಿಗೆ ಅಂಗಡಿಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ಭಗವಾನ್ ರಾಮನ ಫೋಟೋಗಳೊಂದಿಗೆ ಫೋಟೋ ಫ್ರೇಮ್‌ಗಳು, ಬ್ಯಾಗ್‌ಗಳು, ಧೂಪದ್ರವ್ಯದ ತುಂಡುಗಳು ಮತ್ತು ಇತರ ಕೆಲವು ವರ್ಣರಂಜಿತ ಪೂಜಾ ವಸ್ತುಗಳನ್ನು ಈ ಸಣ್ಣ ಅಂಗಡಿಯಲ್ಲಿ ಕಾಣಬಹುದು. ರಂಜಿತಾ ಮಾರಾಟ ಮಾಡುತ್ತಿರುವ ಬ್ಯಾಗ್‌‌ ಒಂದರ ಮೇಲೆ ‘ಜೈ ಶ್ರೀರಾಮ್‌’ ಎಂದಿರುವುದನ್ನು ನೋಡಬಹುದು.

ರಾಮ ಮಂದಿರ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ತನ್ನ ಅಂಗಡಿ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು ರಂಜಿತಾ ನೋವು ತೋಡಿಕೊಂಡರು.

PC: The Wire, Ismat Ara

ಅಯೋಧ್ಯೆ ಅಭಿವೃದ್ಧಿ ಯೋಜನೆ

ಅಯೋಧ್ಯೆಯ ಅಭಿವೃದ್ಧಿ ಯೋಜನೆಯ ಭಾಗವಾಗಿ ಹನುಮಾನ್ ಗರ್ಹಿ ಮಾರ್ಗದಲ್ಲಿನ ನೂರಾರು ಅಂಗಡಿಗಳಿರುವ ರಸ್ತೆಯ ಅಗಲೀಕರಣ ಮಾಡಲು ಉದ್ದೇಶಿಸಲಾಗಿದೆ. ಇದರ ವಿರುದ್ಧ 2021ರಲ್ಲಿಯೇ ವ್ಯಾಪಾರಿಗಳು ಪ್ರತಿಭಟಿಸಿದರು.

ಅಂಗಡಿಗಳ ಮಾಲೀಕರು ಹಲವಾರು ಮೆರವಣಿಗೆಗಳನ್ನು ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಧರಣಿ ಕುಳಿತರು. ನಂತರ ಪತ್ರಗಳನ್ನೂ ಬರೆದರು. ಸುಮಾರು ಒಂದು ವರ್ಷ ವರ್ಷದಿಂದಲೂ ವ್ಯಾಪಾರಿಗಳು ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ತೆರವುಗೊಳಿಸುವ ಅಂಗಡಿಗಳಿಗೆ ನೀಡುವ ಪರಿಹಾರದ ಬಗ್ಗೆಯಾಗಲೀ, ಸ್ಥಳಾಂತರಗೊಳ್ಳುವವರಿಗೆ ಹೊಸ ಅಂಗಡಿಗಳಾಗಲಿ ನೀಡುವ ಕುರಿತು ಸ್ಪಷ್ಟತೆ ಇಲ್ಲ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

2019ರಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಭೂಮಿಯನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ರಾಮಮಂದಿರ ನಿರ್ಮಾಣ ಯೋಜನೆ ತ್ವರಿತವಾಗಿ ಪ್ರಗತಿಯಲ್ಲಿದೆ.

ಚುನಾವಣಾ ರಾಜಕೀಯ

ಜಿಲ್ಲೆಯಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಪ್ರತಿಪಕ್ಷಗಳು ವ್ಯಾಪಾರಿಗಳ ಆಗ್ರಹವನ್ನು ಚುನಾವಣಾ ವಿಷಯವನ್ನಾಗಿ ಬಳಸುತ್ತಿವೆ.

ಬಿಜೆಪಿ ಅಭ್ಯರ್ಥಿ ವಿವೇಕ್ ಪ್ರಕಾಶ್ ಗುಪ್ತಾ ವಿರುದ್ಧ ಮತದಾರರನ್ನು ಒಗ್ಗೂಡಿಸಲು ಅಯೋಧ್ಯೆಯ ಇಂಡಸ್ಟ್ರಿ ಅಂಡ್ ಬ್ಯುಸಿನೆಸ್ ಟ್ರಸ್ಟ್‌ನ ಮುಖ್ಯಸ್ಥ ಸಮಾಜವಾದಿ ಪಕ್ಷದ ನಂದ್ ಕುಮಾರ್ ಗುಪ್ತಾ ಮುಂದಾಗಿದ್ದಾರೆ.

“ಅನೇಕ ವ್ಯಾಪಾರಿಗಳು, ವಿಶೇಷವಾಗಿ ಸಣ್ಣ ಸಣ್ಣ ವ್ಯಾಪಾರಿಗಳು ಬಿಜೆಪಿಯಿಂದ ಭ್ರಮನಿರಸನಗೊಂಡಿದ್ದಾರೆ. ಏಕೆಂದರೆ ಅಭಿವೃದ್ಧಿ ಯೋಜನೆಯು ವ್ಯಾಪಾರಿಗಳ ಜೀವನೋಪಾಯದ ಮೇಲೆ ನೇರವಾಗಿ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ಆಗಸ್ಟ್ 5, 2020ರಂದು ರಾಮ ಮಂದಿರದ ಉದ್ಘಾಟನಾ ದಿನದಂದು (ಭೂಮಿ ಪೂಜೆಯಂದು) ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿದ್ದಾರೆಂದು ಸಣ್ಣ ಅಂಗಡಿಗಳನ್ನು ರಸ್ತೆಬದಿಯಿಂದ ತೆರವುಗೊಳಿಸಲಾಯಿತು ಎಂದು ಅವರು ದೂರುತ್ತಾರೆ.

“ಬಿಜೆಪಿ ನಿರ್ಮಿಸಲು ಬಯಸುವ ಈ ಹೊಸ ಮಾಲ್‌ನಂತಹ ಅಯೋಧ್ಯೆಯಲ್ಲಿ ವ್ಯಾಪಾರಿಗಳ ಸ್ಥಾನ ಎಲ್ಲಿದೆ?” ನಂದಕುಮಾರ್‌ ಪ್ರಶ್ನಿಸುತ್ತಾರೆ.

ವ್ಯಾಪಾರಿಗಳಿಗೆ ಪರಿಹಾರ ಸಿಗದಿರುವ ಆತಂಕ, ಆಡಳಿತದಿಂದ ಯಾವುದೇ ಅಧಿಕೃತ ಭರವಸೆ ಇಲ್ಲದಿರುವುದರಿಂದ ವ್ಯಾಪಾರಿ ವರ್ಗದ ಮತಗಳು ಬಿಜೆಪಿಯ ಕೈತಪ್ಪುವ ಸಾಧ್ಯತೆಯನ್ನು ಊಹಿಸಲಾಗಿದೆ.

ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಯೋಧ್ಯೆಯಲ್ಲಿ ಅವಕಾಶಗಳನ್ನು ನೀಡುವ ದೊಡ್ಡ ಯೋಜನೆ ರೂಪಿಸಲಾಗಿದೆ ಎಂದು ನಂದ್ ಕುಮಾರ್ ದೂರುತ್ತಾರೆ.

“ಅವರು ಅಯೋಧ್ಯೆಯಿಂದ ಇತರ ಆಟಗಾರರನ್ನು ಹೊರ ಹಾಕಲು ಬಯಸುತ್ತಾರೆ. ಏಕಾಂಗಿಯಾಗಿ ಆಡಳಿತ ನಡೆಸಲು ಇಚ್ಛಿಸುತ್ತಾರೆ” ಎನ್ನುವ ನಂದಕುಮಾರ್‌, “ಬುಲ್ಡೋಜರ್ ಪೆ ಸೈಕಲ್ ಭರಿ (ಬುಲ್ಡೋಜರ್‌ಅನ್ನು ಸೈಕಲ್ ಸೋಲಿಸುತ್ತದೆ)” ಎಂದಿದ್ದಾರೆ.

“ನಾವೂ ರಾಮನ ಸೇವೆ ಮಾಡಿದ್ದೇವೆ…”

ರಾಮಮಂದಿರ ಚಳವಳಿಯ ನಂತರ ಅಯೋಧ್ಯೆ ಅವಕಾಶಗಳ ಕೇಂದ್ರವಾಗಿದೆ ಎಂದು ಮುಖಂಡ ಅಭಯ್ ಕುಮಾರ್ ಪಾಂಡೆ ಅಭಿಪ್ರಾಯಪಡುತ್ತಾರೆ.

ಹಲವು ತಲೆಮಾರಿನ ಕುಟುಂಬಗಳ ಒಡೆತನದ ಈ ಅಂಗಡಿಗಳ ಭಾವನಾತ್ಮಕ ಮೌಲ್ಯವನ್ನು ಹಣದಿಂದ ಸರಿದೂಗಿಸಲು ಸಾಧ್ಯವಿಲ್ಲವಾದರೂ, ಅಯೋಧ್ಯೆಯ ಅಭಿವೃದ್ಧಿಯಿಂದ ವ್ಯಾಪಾರಿಗಳು ಸಹ ಪ್ರಯೋಜನ ಪಡೆಯುವಂತೆ ಆಡಳಿತವು ಖಾತ್ರಿಪಡಿಸಬೇಕು ಎಂದು ಪಾಂಡೆ ಹೇಳುತ್ತಾರೆ.

“ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಕರಸೇವಕರಿಗೆ ನೀರು, ಅನ್ನ ಬಡಿಸಿದ್ದು ನಾವು. ಶ್ರೀರಾಮನನ್ನು ಗೌರವಿಸಿದ ಜನರಿಗೆ ಜೀವನೋಪಾಯದ ಮಾರ್ಗವಿಲ್ಲವಾದರೆ, ಅವರು ಬಿಜೆಪಿಗೆ ಏಕೆ ಮತ ಹಾಕುತ್ತಾರೆ?” ಎಂದು ಅವರು ಪ್ರಶ್ನಿಸುತ್ತಾರೆ.

“ಮೆಹೆಂಗಾಯಿ ತೋ ರೋಕ್ ನಹೀಂ ಪಯೇಂಗೇ, ಮಗರ್ ಹುಮಾರಾ ಉತ್ಪಿದನ್ ರೋಕ್ ಸಕ್ತೇ ಹೈಂ (ಅವರು ಯಾವಾಗಲೂ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಅವರು ಮಾಡಬಹುದಾದ ಕೆಲಸವೆಂದರೆ ನಮ್ಮ ಸಂಕಟವನ್ನು ತಡೆಯುವುದು)” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿವೇಕ್ ಪ್ರಕಾಶ್ ಗುಪ್ತಾ, ಎಸ್‌ಪಿಯ ತೇಜ್ ನಾರಾಯಣ ಪಾಂಡೆ ಮತ್ತು ಬಿಎಸ್‌ಪಿಯ ರವಿ ಮೌರ್ಯ ನಡುವೆ ಹಣಾಹಣಿ ನಡೆಯಲಿದೆ. ಕಾಂಗ್ರೆಸ್‌ನ ರೀತಾ ಮೌರ್ಯ ಮತ್ತು ಆಪ್‌ನ ಶುಭಂ ಶ್ರೀವಾಸ್ತವ ಕೂಡ ಕಣದಲ್ಲಿದ್ದಾರೆ.

ಮೂಲ: ದಿ ವೈರ್‌ (ಇಸ್ಮತ್ ಅರಾ)


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಬ್ರಿ ಮಸೀದಿ ಧ್ವಂಸ ಮಾಡಿದ ಕರಸೇವಕರಿಗೆ ಸಕಲ ಸವಲತ್ತು ಪೂರೈಸಿದ ಬೀದಿ ವ್ಯಾಪಾರಿಗಳಿಗೆ ಶ್ರೀ ರಾಮನೇ ಶಿಕ್ಷೆ ವಿಧಿಸುತ್ತಿದ್ದಾನೆಂದು ಆತ್ಮ ವಿಮರ್ಶೆ ಮಾಡಿ ಕೊಳ್ಳುವುದು.

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...