Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...