Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...