Homeಅಂತರಾಷ್ಟ್ರೀಯವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

- Advertisement -
- Advertisement -

ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆ ಮತ್ತು ಬಹುಭಾಷೆಯನ್ನು ಉತ್ತೇಜಿಸಲು ಫೆಬ್ರವರಿ 21 ರಂದು (ಸೋಮವಾರ) ಅಂತರರಾಷ್ಟ್ರೀಯ ಮಾತೃಭಾಷಾ ದಿನವನ್ನು (ತಾಯ್ನುಡಿ ದಿನ) ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನದ ಆಚರಣೆಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (UNESCO) 1999 ರಲ್ಲಿ ಅನುಮೋದಿಸಿತು.

“ಮಾತೃಭಾಷೆ ಆಧಾರಿತ ಬಹುಭಾಷಾ ಶಿಕ್ಷಣವು ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಗೌರವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದರೆ ವಿಶ್ವದ ಜನಸಂಖ್ಯೆಯ ಶೇಕಡಾ 40 ರಷ್ಟು ಜನ ತಾವು ಮಾತನಾಡುವ ಅಥವಾ ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಶಿಕ್ಷಣವನ್ನು ಹೊಂದಿಲ್ಲ” ಎಂದು ಯುನೆಸ್ಕೊ ಕಳವಳ ವ್ಯಕ್ತಪಡಿಸಿದೆ.

ಹೀಗಾಗಿ 2022 ರ ಅಂತರರಾಷ್ಟ್ರೀಯ ಮಾತೃಭಾಷಾ ದಿನದ ಧ್ಯೇಯ ವಾಕ್ಯವಾಗಿ “ಬಹುಭಾಷಾ ಕಲಿಕೆಗೆ ತಂತ್ರಜ್ಞಾನ ಬಳಕೆ- ಸವಾಲುಗಳು ಮತ್ತು ಅವಕಾಶಗಳು” ಎಂಬ ಥೀಮ್​ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

UNESCO ವೆಬ್‌ಸೈಟ್‌ನ ಪ್ರಕಾರ 2000 ನೇ ವರ್ಷದಿಂದ ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಭಾಷೆಗಳು ಕಣ್ಮರೆಯಾಗುತ್ತಿರುವ ಬಗ್ಗೆ ಯುನೆಸ್ಕೋ ಕಳವಳ ವ್ಯಕ್ತಪಡಿಸಿದೆ.  “ಸುಸ್ಥಿರ ಸಮಾಜಗಳ ಉಳಿವಿಗೆ ಸಾಂಸ್ಕೃತಿಕ ಮತ್ತು ಭಾಷಾ ವೈವಿಧ್ಯತೆಯ ಪ್ರಾಮುಖ್ಯತೆ ಹೆಚ್ಚಿದೆ ಎಂದು ಯುನೆಸ್ಕೊ ನಂಬುತ್ತದೆ” ಎಂದು ತಿಳಿಸಿದೆ.

ವಿಶೇಷವಾಗಿ ಆರಂಭಿಕ ಶಾಲಾ ಶಿಕ್ಷಣದಲ್ಲಿ ಮಾತೃಭಾಷೆಯ (ತಾಯ್ನುಡಿ) ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ ಯುನೆಸ್ಕೋ ಈ ದಿನವನ್ನು ಆಚರಿಸಲು ನಿರ್ಧರಿಸಿತು. ಅಂತರಾಷ್ಟ್ರೀಯ ಮಾತೃಭಾಷಾ ದಿನವು ಸಾರ್ವಜನಿಕ ಜೀವನದಲ್ಲಿ ಮಾತೃಭಾಷೆಯ ಬೆಳವಣಿಗೆಗೆ ತಾವು ನೀಡಬೇಕಾದ ಬದ್ಧತೆಯೆಡೆಗೆ ಒಂದು ಹೆಜ್ಜೆಯಾಗಿದೆ.

ಇತ್ತೀಚಿನ ಜನಗಣತಿ ಮಾಹಿತಿಯ ಪ್ರಕಾರ ಭಾರತದಲ್ಲಿ 19,500 ಕ್ಕೂ ಹೆಚ್ಚು ಭಾಷೆಗಳು ಅಥವಾ ಉಪಭಾಷೆಗಳನ್ನು ಮಾತೃಭಾಷೆಯಾಗಿ ಮಾತನಾಡುತ್ತಾರೆ. ಭಾರತದಲ್ಲಿ 10,000 ಅಥವಾ ಅದಕ್ಕಿಂತ ಹೆಚ್ಚು ಜನರು ಮಾತನಾಡುವ 121 ಭಾಷೆಗಳಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

Image

 

10,000 ಅಥವಾ ಅದಕ್ಕಿಂತ ಹೆಚ್ಚು ಜನರು ಮಾತನಾಡುವ 121 ಭಾಷೆಗಳನ್ನು ಎರಡು ಭಾಗಗಳಲ್ಲಿ ವಿಭಾಗಿಸಲಾಗಿದೆ. ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ 22 ಭಾಷೆಗಳಿದ್ದು ಇದು ಒಂದು ವಿಭಾಗವಾಗಿದೆ. ಎರಡನೇ ವಿಭಾಗದಲ್ಲಿ, ಎಂಟನೇ ಶೆಡ್ಯೂಲ್‌ನಲ್ಲಿ ಸೇರಿಸದ ಭಾಷೆಗಳು 99 ಭಾಷೆಗಳಿವೆ.

ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾಗಿರುವ ಅನುಸೂಚಿತ ಭಾಷೆಗಳು: ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ಸಿಂಧಿ, ತಮಿಳು, ತೆಲುಗು, ಉರ್ದು, ಬೋಡೋ, ಸಂತಾಲಿ, ಮೈಥಿಲಿ ಮತ್ತು ಡೋಗ್ರಿ.

ಇವುಗಳಲ್ಲಿ 14 ಭಾಷೆಗಳನ್ನು ಮಾತ್ರ ಸಂವಿಧಾನದಲ್ಲಿ ಮೊದಲು ಸೇರಿಸಲಾಗಿತ್ತು. 1967 ರಲ್ಲಿ ಸಿಂಧಿ ಭಾಷೆಯನ್ನು ಸೇರಿಸಲಾಯಿತು. ನಂತರ 1992 ರಲ್ಲಿ ಕೊಂಕಣಿ, ಮಣಿಪುರಿ ಮತ್ತು ನೇಪಾಳಿ ಮೂರು ಭಾಷೆಗಳನ್ನು ಸೇರಿಸಲಾಯಿತು. ಬೋಡೋ, ಡೋಗ್ರಿ, ಮೈಥಿಲಿ ಮತ್ತು ಸಂತಾಲಿ ಭಾಷೆಗಳನ್ನು 2004 ರಲ್ಲಿ ಸೇರಿಸಲಾಗಿದೆ.


ಇದನ್ನೂ ಓದಿ: ಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...