Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...