Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

- Advertisement -
- Advertisement -

ದಲಿತ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ನ್ಯಾಯಕ್ಕಾಗಿ ಆಗ್ರಹಿಸಿ, ರಸ್ತೆಯಲ್ಲಿ ಮೃತದೇಹವಿಟ್ಟು ಬೃಹತ್‌ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಮಧ್ಯಪ್ರದೇಶದ ಶಾಜಾಪುರದ ಮಕ್ಸಿ ಪೊಲೀಸ್ ಠಾಣೆಯ ರೋಜ್ವಾಸ್ ಸರ್ಕಲ್‌ನಲ್ಲಿ ನಡೆದಿದೆ.

ಯುವತಿಯ ಮೃತದೇಹವನ್ನು ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರೋಜ್ವಾಸ್ ಟೋಲ್ ಪ್ಲಾಜಾ ಬಳಿ ಇಟ್ಟು, ಇಡೀ ರಸ್ತೆಯನ್ನು ವಶಕ್ಕೆ ಪಡೆದಿದ್ದ ಸಾವಿರಾರು ಸಂಖ್ಯೆಯ ಗ್ರಾಮಸ್ಥರು ರಸ್ತೆಯ ಮೇಲೆ ಕುಳಿತು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರಿಂದ ಟೋಲ್ ಪ್ಲಾಜಾದಲ್ಲಿ ಕಿಲೋ ಮೀಟರ್‌ಗಟ್ಟಲೆ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದ ತಕ್ಷಣ ಶಾಜಾಪುರ ಹೆಚ್ಚುವರಿ ಎಸ್ಪಿ ಟಿ.ಎಸ್.ಬಘೇಲ್, ಎಸ್‌ಡಿಒಪಿ ದೀಪಾ ದೊಡ್ವೆ, ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ನ್ಯಾಯ ನೀಡುವ ಭರವಸೆ ನೀಡಿದ್ದರು. ಏಳು ದಿನಗಳಲ್ಲಿ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರವೇ ಪ್ರತಿಭಟನಾಕಾರರು ಒಪ್ಪಿದ್ದಾರೆ. ಆದರೂ ಕೂಡ ಸಂಜೆ 5ರ ನಂತರವೂ ಟ್ರಾಫಿಕ್‌ ಜಾಮ್ ಮುಂದುವರಿದಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಉದ್ದನೆಯ ಸರತಿ ಸಾಲು ನಿರ್ಮಾಣವಾಗಿತ್ತು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ಯುವತಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹತ್ಯೆಯನ್ನು ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತು ಆಕೆಯ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಅದೇ ಸಮಯದಲ್ಲಿ, ಮಕ್ಸಿ ಪೊಲೀಸರು ಹೆದ್ದಾರಿ ತಡೆ ನಡೆಸಿದಕ್ಕಾಗಿ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನೆಲೆ:

ಉಜ್ಜಯಿನಿ ಜಿಲ್ಲೆಯ ಕನಾರ್ಡಿ ಗ್ರಾಮದಲ್ಲಿ ಕಳೆದ ರಾತ್ರಿ 22 ವರ್ಷದ ಭಗವತಿ ಬಾಯಿ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಹಮ್ಮಾಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿ ಇಲ್ಲದಿರುವುದು ತಿಳಿದು ಬಂದಿದೆ. ಅಕ್ಕಪಕ್ಕದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದು, ಆಕೆ ಅಲ್ಲಿಗೆ ಹೋಗಿರಬೇಕು ಎಂದುಕೊಂಡಿದ್ದಾರೆ. ರಾತ್ರಿ ಬಹಳ ಹೊತ್ತಾದರೂ ಪತ್ನಿ ಹಿಂತಿರುಗದಿದ್ದಾಗ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಹುಡುಕಾಟದಲ್ಲಿ ಯುವತಿಯ ಮೃತದೇಹ ಮನೆ ಸಮೀಪದ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ಕಲ್ಲುಗಳಿಂದ ಜಜ್ಜಿ ಗುರುತು ಸಿಗದಂತೆ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗಾಗಿ ಹಿಂತಿರುಗಿಸಿದ್ದರು. ಆದರೆ,ಅಂತ್ಯಕ್ರಿಯೆಗೆ ಒಪ್ಪದ ಕುಟುಂಬಸ್ತರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂಪೂರ್ಣ ಪ್ರಕರಣದಲ್ಲಿ ತರಾನಾ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ರಾತ್ರಿ ಹತ್ತು ಗಂಟೆಗೆ ಯುವತಿಯೊಂದಿಗೆ ಮಾತನಾಡಿದ್ದು, ಪೊಲೀಸರು ಕರೆತಂದಿದ್ದ ಶ್ವಾನದಳ ಸೀದಾ ಈ ವ್ಯಕ್ತಿಯ ನಿರ್ಮಾಣ ಹಂತದ ಮನೆಗೆ ನುಗ್ಗಿದೆ. ಇದರ ಆಧಾರದ ಮೇಲೆ ಕುಟುಂಬ ಸದಸ್ಯರು ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಮಾತನಾಡಿ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ, ತನಿಖೆಯ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

 


ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...