Homeಅಂಕಣಗಳುಶುರುವಾದ ಮಹೇಶ ಜೋಶಿ ಮಂತ್ರಗಳು!

ಶುರುವಾದ ಮಹೇಶ ಜೋಶಿ ಮಂತ್ರಗಳು!

- Advertisement -
- Advertisement -

ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಛದ್ಮವೇಶದವರ ಅವಿರತ ಶ್ರಮದಿಂದ ಆರಿಸಿಬಂದ ಜೋಶಿ ತಮ್ಮ ಜೋಳಿಗೆಯಿಂದ ಒಂದೊಂದೇ ಅಸ್ತ್ರವನ್ನ ತೆಗೆಯತೊಡಗಿದ್ದಾರಲ್ಲ! ಈತ ಆರಿಸಿ ಬಂದ ಆರಂಭದಲ್ಲಿ ಶುದ್ಧ ಕನ್ನಡ ಮಾತಾಡಲು ಕರೆಕೊಟ್ಟರು. ಶುದ್ಧ ಕನ್ನಡ ಎಂದರೆ ಯಾವುದು? ಈ ನಾಡಿನ ಮೂವತ್ತು ಜಿಲ್ಲೆಗಳಲ್ಲೂ ಮೂವ್ವತ್ತು ವರಸೆಯಲ್ಲಿ ಕನ್ನಡ ಮಾತನಾಡುತ್ತಾರೆ ಎಂದಾಗ ಈತನ ಪ್ರೌಢಿಮೆ ಬಾಯಿ ಮುಚ್ಚಿಕೊಂಡಿತು. ತುಂಬ ಪ್ರಜಾಸತ್ತಾತ್ಮಕವಾಗಿ ನಡೆದುಕೊಂಡು ಬರುತ್ತಿದ್ದ ಸಾಹಿತ್ಯ ಪರಿಷತ್‌ನ ಆಡಳಿತವನ್ನು ಕೇಂದ್ರಿಕರಿಸಲು ಹೊರಟಿರುವ ಈತ ಸಾಹಿತ್ಯ ಪರಿಷತ್ ಸದಸ್ಯರಿಗೆ ಎಸೆಸೆಲ್ಸಿ ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ಶಾಲೆಗೆ ಹೋಗದೆ ಸಾವಿರಾರು ಜಾನಪದ ಹಾಡು ಹೇಳುವ, ಕತೆ ಹೇಳುವ, ಜಾನಪದ ಕುಣಿತಗಳನ್ನು ಪ್ರದರ್ಶಿಸುವ ಮತ್ತು ಡೊಳ್ಳುಬಡಿಯುವವರು ಜೋಶಿಗೆ ಭೂತ ಬಿಡಿಸಬೇಕಷ್ಟೇ. ಕನ್ನಡಿಗರು ಎಚ್ಚೆತ್ತುಕೊಳ್ಳದಿದ್ದರೆ ಸಾಹಿತ್ಯ ಪರಿಷತ್ ಕಾರ್ಯಾಲಯವು ಪೂರ್ಣವಾಗಿ ಕೇಶವಕೃಪವಾಗುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಪ್ರಖರ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕ ಡಿ.ಎಸ್ ನಾಗಭೂಷಣ ತರುತ್ತಿದ್ದ ಹೊಸ ಮನುಷ್ಯ ಎಂಬ ಮಾಸಪತ್ರಿಕೆ ನಿಲ್ಲಿಸುವುದಾಗಿ ಹೇಳಿದ್ದಾರಲ್ಲಾ! ಸದ್ಯ ಗರಹೊಡೆದ ಸ್ಥಿತಿಯಲ್ಲಿ ಪ್ರಜ್ಞಾವಂತರನ್ನು ಎಚ್ಚರಿಸುತ್ತಿದ್ದ ಹೊಸ ಮನುಷ್ಯ ಒಂದು ದಶಕವಾದರೂ ಹಳೆ ಮನುಷ್ಯನಾಗಿ ಉಳಿದಿದ್ದು ಹಳೆ ವಿಷಯ. ಆದರೆ ಹೊಸ ಮನುಷ್ಯನ ಒಗರು ದನಿ ಇರಬೇಕಿತ್ತು. ಅವನ್ನ ಹೊರತರಲು ಹಣಕಾಸಿನ ಸಮಸ್ಯೆಯಿಲ್ಲವಂತೆ, ಆದರೆ ಸಂಪಾದಕರ ಆರೋಗ್ಯ ಸಹಕರಿಸುತ್ತಿಲ್ಲವಂತೆ. ಸಮಾಜವಾದಿಗಳ ಅನಾರೋಗ್ಯದಿಂದ ಈ ಸಮಾಜಕ್ಕೆ ನಷ್ಟ. ಆಳುವ ಸರಕಾರಕ್ಕೆ ಅನಧಿಕೃತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದ ಹೊಸ ಮನುಷ್ಯ ಪ್ರತಿ ತಿಂಗಳೂ ಸಿದ್ದರಾಮಯ್ಯನ ಸರಕಾರಕ್ಕೆ ಭೂತ ಬಿಡಿಸುತ್ತಿದ್ದು ಒಂದು ವಿಶೇಷ. ಆದರೆ ಕುಮಾರಣ್ಣ ಮತ್ತು ಎಡೂರಪ್ಪನ ಸರಕಾರಕ್ಕೆ ಛಾಟಿ ಬೀಸುವ ಬದಲು ಸಪ್ಪಗಾದದ್ದೂ ಒಂದು ವಿಶೇಷ. ಪ್ರಖರ ಚಿಂತನೆಯ ನಿಷ್ಠುರ ವಿಮರ್ಶೆಯ ಮತ್ತು ನಾಡಿನ ಸಂಸ್ಕೃತಿ ಚಿಂತಕರಿಗೆ, ಬೌದ್ಧಿಕವಾಗಿ ಕೆಲಸ ಕೊಡುತ್ತಿದ್ದ ಹೊಸ ಮನುಷ್ಯ ನಿಲ್ಲಬಾರದಿತ್ತು, ಯಾರಾದರೂ ನಡೆಸಿಕೊಂಡು ಹೋಗಲು ಅನುವುಮಾಡಿಕೊಡಬೇಕಿತ್ತು. ಆದರೆ ಅಂತ ತೀರ್ಮಾನ ಇಂತವರಿಂದ ಸಾಧ್ಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಜನಪ್ರಿಯ ಪ್ರಧಾನಿ ಯಾಕೋ ಈಶ್ವರಪ್ಪನಂತೆ ಮಾತನಾಡತೊಡಗಿದ್ದಾರಲ್ಲಾ ಕುಮಾರಣ್ಣ ಮತ್ತು ದೇವೇಗೌಡರ ಕೃಪಾಕಟಾಕ್ಷದಿಂದ ಮಂತ್ರಿಯಾದ ಅಮಲಿನಲ್ಲಿ ಈಶ್ವರಪ್ಪ ಇನ್ನೂ ಹದಿನೈದು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದುಬಿಟ್ಟರು. ಈ ಬಗ್ಗೆ ಯಾರೂ ಅವರನ್ನ ವಿವರ ಕೇಳಲಿಲ್ಲ. ಆದರೇನು, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದುದಲ್ಲದೆ ಅವರ ಬಂಧುಬಾಂಧವರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಇದೀಗ ಮೋದಿಯವರು ಕಾಂಗ್ರೆಸ್ ಇನ್ನ ನೂರು ವರ್ಷಗಳವರೆಗೆ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಈ ಕಾಲಜ್ಞಾನಿಯ ಮಾತನ್ನು ನೆನೆಸಿಕೊಂಡು ಸ್ಮರಿಸಲು ಯಾರಿರುತ್ತಾರೆ? ಅದಿರಲಿ, ಜಗತ್ತಿನ ತಾಪಮಾನ ಕುರಿತು ನಮ್ಮ ವಿಜ್ಞಾನಿಗಳು ಎಚ್ಚರಿಸುವ ಮಾತಿನ ಪ್ರಕಾರ, ಇನ್ನ ಹದಿನೈದು ವರ್ಷದಲ್ಲಿ ಏನಾಗುತ್ತದೊ ಏನೋ! ಅಂಥಾದ್ದರಲ್ಲಿ ನೂರುವರ್ಷದ ಭವಿಷ್ಯ ಹೇಳಿರುವ ಕಾಲಜ್ಞಾನಿ ಪ್ರಧಾನಿ ಈವರೆಗೆ ಬೀದಿಯಲ್ಲಾಡುತ್ತಿದ್ದ ಮಾತನ್ನ ಲೋಕಸಭೆಯಲ್ಲಾಡುತ್ತಾರೆ, ಲೋಕಸಭೆಯ ಮಾತನ್ನು ಅಮೆರಿಕದಲ್ಲಿ ಬಿತ್ತರಿಸುತ್ತಾರೆ. ಇದನ್ನೆಲ್ಲಾ ಗಮನಿಸಿದರೆ ನಮ್ಮ ಈಶ್ವರಪ್ಪನ ಜೊತೆ ಸ್ಪರ್ಧೆಗಿಳಿದಂತಿದ್ದಾರಲ್ಲಾ ಥೂತ್ತೆರಿ.

****

ಮತೀಯವಾಗಿ ಜೋರುಗಂಟಲಿನಿಂದ ಕೂಗಿದವರ ಕಡೆ ಬಿಜೆಪಿ ಪಕ್ಷದ ದೃಷ್ಟಿ ಬೇಗ ಬೀಳುತ್ತದೆ ಮತ್ತು ಅಂಥವರು ಮಾತ್ರ ನಮ್ಮ ಪಾರ್ಟಿ ಉಳಿಸಿ ಬೆಳೆಸಬಲ್ಲ ಎಂಬ ಮೂಢನಂಬಿಕೆಗೆ ತುತ್ತಾದ ಹಲವರು ಗಂಟಲು ಹರಿದುಕೊಳ್ಳುವ ಕೂಗುಮಾರಿಗಳಾಗಿದ್ದಾರಂತಲ್ಲಾ. ಈ ಪೈಕಿ ಬಸನಗೌಡ ಪಾಟೀಲ ಯತ್ನಾಳ, ಮೈಸೂರಿನ ಪ್ರತಾಪಸಿಮ್ಮ ಹಾಗೂ ಶಿವಮೊಗ್ಗದ ಈಶ್ವರಪ್ಪ ಹಳೆಯಗಂಟಲು. ಅವರದ್ದು ನೈನ್‌ಟೀನ್ ಫಾರ್ಟಿ ಸೆವೆನ್ ಮಾಡೆಲಿನ ಗಾಡಿಯ ಸೈಲೆನ್ಸರ್ ಪೈಪು. ಅದು ಶಬ್ದ ಮಾಡಿದರೆ ಉಳಿದ ಯಾವುದೇ ಶಬ್ದ ಕೇಳುವುದಿಲ್ಲ. ಅಂತಹ ಗಂಟಲಿನಲ್ಲಿ ದೇಶದ ಬಾವುಟ ಹಾರಾಡುವ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜವನ್ನ ಹಾರಿಸುತ್ತೇವೆ, ಜೊತೆಗೆ ಕೆಂಪುಕೋಟೆಯ ಮೇಲೂ ಹಾರಿಸುತ್ತೇವೆ ಎಂದು ಅಬ್ಬರಿಸಿದ್ದಾರಲ್ಲಾ. ಈ ಅಬ್ಬರವು ಅಭದ್ರತೆಯ ಮೂಲದ್ದು. ಎಡೂರಪ್ಪನ ನಂತರ ಈಶ್ವರಪ್ಪ ನಿವೃತ್ತಿಯ ಸಾಲಿನಲ್ಲಿ ನಿಂತಿರುವಾಗ ನನ್ನಂತವನು ನಿವೃತ್ತಿಗೆ ಯೋಗ್ಯನಲ್ಲ ಪಾರ್ಟಿಗೆ ಅನಿವಾರ್ಯ ಎಂಬುದು ಭಗವಾಧ್ವಜದ ದನಿಯಲ್ಲಿದೆಯಂತಲ್ಲಾ. ಅದೇನಾದರಾಗಲಿ ಎಡೂರಪ್ಪನವರ ನಿರ್ಗಮನದ ನಂತರ ಈಶ್ವರಪ್ಪ ಅನಿವಾರ್ಯವಾಗಿ ಆಕಡೆ ಸರಿದು ನಿಲ್ಲಬೇಕಿದೆ. ಏಕೆಂದರೆ ಎಡೂರಪ್ಪನ ಮುಖ ನೋಡಿ ಈಶ್ವರಪ್ಪನಿಗೆ ಓಟು ಮಾಡುತ್ತಿದ್ದ ಶಿವಮೊಗ್ಗದ ಲಿಂಗಾಯಿತರಿಗೆ ಪುನಹ ಈಶ್ವರಪ್ಪನಿಗೆ ಓಟು ಮಾಡುವ ಅಗತ್ಯ ಕಾಣುತ್ತಿಲ್ಲವಂತಲ್ಲಾ

ಥೂತ್ತೆರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...