Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...