Homeಮುಖಪುಟತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

- Advertisement -
- Advertisement -

ತಮಿಳುನಾಡಿನಲ್ಲಿ ಫೆಬ್ರವರಿ 19 ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಜನಿಕಾಂತ್, ಅಜಿತ್ ಸೇರಿದಂತೆ ತಮಿಳು ಸ್ಟಾರ್‌ ನಟರು ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿದೆ.

ಸೂಪರ್‌ ಸ್ಟಾರ್‌ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ತ್ರಿಶಾ ಕೃಷ್ಣನ್ ಮತದಾನಕ್ಕೆ ಬರುತ್ತಾರೆ ಎಂದು ಅವರ ಅಭಿಮಾನಿಗಳು ತಮ್ಮ ತಮ್ಮ ಬೂತ್‌ಗಳಲ್ಲಿ ಕಾಯುತ್ತಿದ್ದರು. ಆದರೆ, ಅವರು ಮತ ಚಲಾಯಿಸಲು ಬಂದಿಲ್ಲ. ಇದರಿಂದ ಜನ ನಿರಾಶರಾಗಿದ್ದಾರೆ.

ಚೆನ್ನೈನ ಕಾಲೇಜೊಂದರ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾಗಿರುವ ರಾಜಕೀಯ ವಿಶ್ಲೇಷಕ ಎಂ.ಚಿದಂಬರೇಶನ್ ಅವರನ್ನು ಉಲ್ಲೇಖಿಸಿರುವ IANS, “ಕಮಲ್ ಹಾಸನ್, ಸೀಮಾನ್‌ನಂತಹ ತಾರೆಯರು ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿಲ್ಲ ಎಂಬುದು ತಿಳಿದು ಬರುತ್ತದೆ. ನಟ ವಿಜಯ್ ಅವರನ್ನು ಹೊರತುಪಡಿಸಿ, ತಮಿಳುನಾಡಿನಲ್ಲಿ ಈಗ ಸಾಮಾಜಿಕ ಮತ್ತು ರಾಜಕೀಯ ವಿಷಯಗಳಿಗೆ ಪ್ರತಿಕ್ರಿಯಿಸುವ ಯಾವುದೇ ಸ್ಟಾರ್ ಇಲ್ಲ. ಇದು ಚುನಾವಣೆಯಲ್ಲಿ ಮತ ಚಲಾಯಿಸಲು ಅವರ ಆಸಕ್ತಿಯ ಕೊರತೆಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ತಮಿಳು ನಟ ವಿಜಯ್ ಬೆಳಗ್ಗೆಯೇ ಚೆನ್ನೈನ ನಂಗೇರಾಣಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದರು. 2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ವಿಜಯ್ ಅವರು ತಮ್ಮ ಮನೆಯಿಂದ ಮತಗಟ್ಟೆಗೆ ಬೈಸಿಕಲ್ ಮೂಲಕ ತೆರಳುವ ಮೂಲಕ ಸಾಕಷ್ಟು ಚರ್ಚೆಗೆ ಹುಟ್ಟುಹಾಕಿದ್ದರು. ದೇಶದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಸಂದೇಶವನ್ನು ತಿಳಿಸಲು ಬೂತ್‌ಗೆ ಸೈಕಲ್‌ನಲ್ಲಿ ಇಳಿದಿದ್ದಾರೆ ಎನ್ನಲಾಗಿತ್ತು.

ಮತ ಚಲಾಯಿಸಿಸಲು ಬಂದಿದ್ದ ನಟ ವಿಜಯ್

ಚೆನ್ನೈನ ಅಶೋಕ್ ನಗರದ ಟೀ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ ರತ್ನಕುಮಾರ್, “ರಾಜ್ಯ ಚುನಾವಣಾ ಆಯೋಗವು ನಮ್ಮಂತಹ ಸ್ಥಳೀಯರಿಗೆ ಮತ ಚಲಾಯಿಸುವಂತೆ ಪ್ರೇರೇಪಿಸುತ್ತಿರುವಾಗ, ಸೆಲೆಬ್ರಿಟಿಗಳೂ ಮತ ಚಲಾಯಿಸುವಂತೆ ಅವರು ಏಕೆ ತಿಳಿಸುವುದಿಲ್ಲ? ಮತದಾನ ನನ್ನಂತಹ ಸಾಮಾನ್ಯ ಜನರಿಗೆ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದೇವೆ ಎಂಬ ಭಾವನೆಯನ್ನು ನೀಡುತ್ತದೆ. ಆದರೆ, ಈಗ ಅವರು ಬೇರೆ ವರ್ಗ ಮತ್ತು ನಾವು ಕೀಳು ಎಂಬುದನ್ನು ತೋರಿಸಿದಂತಾಗುತ್ತದೆ” ಎಂದಿದ್ದಾರೆ.

ಸ್ಟಾರ್‌ ನಟ, ನಟಿಯರು ಚುನಾವಣೆಯಲ್ಲಿ ಮತ ಚಲಾಯಿಸಲು ಬರದಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗವೂ ಟೀಕೆ ಮಾಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಆಯೋಗವು, ಇಂತಹ ಚುನಾವಣೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವುದಿಲ್ಲ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಮತದಾನವಾಗಿಲ್ಲ, ಶೇಕಡಾ 61 ರಷ್ಟು ಮತದಾನವಾಗಿದ್ದು, ಚೆನ್ನೈ ಕಾರ್ಪೋರೇಶನ್‌ನಲ್ಲಿ ಶೇಕಡಾ 43 ರಷ್ಟು ಮತದಾನವಾಗಿದೆ.


ಇದನ್ನೂ ಓದಿ: ಒಟಿಟಿ ವೇದಿಕೆಗಳಿಂದ ಮುಕ್ತ ಅವಕಾಶ: ವೈಜ್ಞಾನಿಕ ಕಲ್ಪನೆಯ ಸಿನಿಮಾಗಳಿಗೆ ಹೆಚ್ಚಿದ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...