Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...