Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...