Homeಕರ್ನಾಟಕರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

’ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ಸಹಿಸುವುದಿಲ್ಲ.’

- Advertisement -
- Advertisement -

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಇದೇ ವೇಳೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಚಿವರಿಗೆ ಈ ಕುರಿತು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು.

 ಇಂಡಿಯಾ ಟುಡೇ ನ್ಯೂಸ್ ನಿರ್ದೇಶಕ ರಾಹುಲ್ ಕನ್ವಾಲ್ ಅವರಿಗೆ ನೀಡಿರುವ ಸಂದರ್ಶನದಲ್ಲಿ ಜೆ.ಪಿ.ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

“ಇದು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ.. ಕೆಲವೊಮ್ಮೆ ಏನಾಗುತ್ತದೆ ಎಂದರೆ ಜನ ಅತಿ ಉತ್ಸಾಹಿಗಳಾಗಿ ಬಿಡುತ್ತಾರೆ. ಅವರಿಗೆ ಗೊತ್ತಿರುತ್ತದೆ ಈಗ ಪೋನ್ ಬರುತ್ತದೆ ಎಂದು. ನಾನು ಕರೆ ಮಾಡಿದೆ ಅವರು ಏನೇನೋ ಹೇಳಲು ಆರಂಭಿಸಿದ್ದರು ಶಿವಕುಮಾರ್‌ ಹಾಗಂದರು.. ಅದು ಇದು ಎಂದು. ತಕ್ಷಣ ನಾನು ಏನು ಹೇಳಬೇಡಿ ಎಂದು ಖಡಕ್ ಆಗಿ ತಿಳಿಸಿದೆ” ಎಂದು ಹೇಳಿದ್ದಾರೆ.

ಬಳಿಕ ನೀವು ಅವರನನ್ನು ಟೈಟ್ ಮಾಡಿದ್ರಿ ಎಂಬ ರಾಹುಲ್ ಕನ್ವಾಲ್ ಹೇಳಿಕೆಗೆ ಹೌದು. ಆದರೆ, ಅದನ್ನು ಟೈಟ್ ಎನ್ನುವ ಹಾಗಿಲ್ಲ. ಅವರು ಹಿರಿಯ ನಾಯಕರು. ಅವರೇ ಹೀಗೆಲ್ಲಾ ತಪ್ಪು ತಪ್ಪಾಗಿ ಹೇಳಿ ನೀಡಬಾರದು ಎಂದಿದ್ದಾರೆ.

“ಮುಖ್ಯಮಂತ್ರಿಗಳು ಸ್ವಯಂ ಪ್ರೇರಿತ ಕ್ರಮ ಕೈಗೊಂಡು ಈಶ್ವರಪ್ಪ ಅವರನ್ನು ಈಗಲೇ ವಜಾ ಮಾಡಬೇಕಿತ್ತು. ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದನ್ನು ದೇಶದ್ರೋಹವೆಂದು ಗುರುತಿಸಿ ಜೈಲು ಶಿಕ್ಷೆ ವಿಧಿಸಬೇಕು. ಕೂಡಲೇ ಈಶ್ವರಪ್ಪ ಅವರನ್ನು ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.


ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...