Homeಮುಖಪುಟತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

- Advertisement -
- Advertisement -

ತಮಿಳುನಾಡಿನಲ್ಲಿ ಒಂದು ದಶಕದ ನಂತರ ಶನಿವಾರ (ಫೆ.19) ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಡಳಿತಾರೂಢ ಡಿಎಂಕೆ ದೊಡ್ಡ ಗೆಲುವಿನತ್ತ ಮುನ್ನುಗ್ಗುತ್ತಿದೆ.

ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಎಐಎಡಿಎಂಕೆಯಿಂದ ಬಿಜೆಪಿ ಬೇರ್ಪಟ್ಟು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಈ ಚುನಾವಣೆಯ ಫಲಿತಾಂಶವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಒಂಬತ್ತು ತಿಂಗಳ ಕಾರ್ಯಕ್ಷಮತೆಯ ರಿಪೋರ್ಟ್ ಕಾರ್ಡ್‌ನಂತೆ ನೋಡಲಾಗು‌ತ್ತಿದೆ.

ರಾಜ್ಯದ ಒಟ್ಟು 1,374 ಕಾರ್ಪೊರೇಷನ್ ವಾರ್ಡ್‌ಗಳಲ್ಲಿ, ಡಿಎಂಕೆ ಇದುವರೆಗೆ 289, ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ 49, ಡಿಎಂಕೆಯ ಮಿತ್ರಪಕ್ಷ ಸಿಪಿಐ(ಎಂ) 11 ಗೆದ್ದಿದ್ದರೆ, ಪ್ರತಿಸ್ಪರ್ಧಿ ಬಿಜೆಪಿ 3 ರಲ್ಲಿ ಗೆಲುವು ಸಾಧಿಸಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಪುರಸಭೆಗಳಲ್ಲಿ (ಒಟ್ಟು ವಾರ್ಡ್ ಸದಸ್ಯ ಸ್ಥಾನಗಳು 3,843), ಡಿಎಂಕೆ 1,211 ಮತ್ತು ಎಐಎಡಿಎಂಕೆ 320, ಕಾಂಗ್ರೆಸ್ 80, ಸಿಪಿಐ 10, ಸಿಪಿಎಂ 24, ಬಿಜೆಪಿ 29 ಮತ್ತು ಡಿಎಂಡಿಕೆ 5 ಸ್ಥಾನಗಳನ್ನು ಗೆದ್ದಿವೆ.

ಪಟ್ಟಣ ಪಂಚಾಯಿತಿಗಳಲ್ಲಿ ಡಿಎಂಕೆ 3,782 ವಾರ್ಡ್‌ಗಳಲ್ಲಿ, ಎಐಎಡಿಎಂಕೆ 1,070, ಕಾಂಗ್ರೆಸ್ 258, ಬಿಜೆಪಿ 132, ಸಿಪಿಎಂ 58 ಮತ್ತು ಸಿಪಿಐ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಫೆಬ್ರವರಿ 19 ರಂದು ನಗರ ನಾಗರಿಕ ಚುನಾವಣೆ ನಡೆದಿದ್ದು, ಇಂದು ರಾಜ್ಯದ 268 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಿದೆ.

ರಾಜಧಾನಿ ಚೆನ್ನೈ ಸೇರಿದಂತೆ 21 ನಗರಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯತ್‌ಗಳ 12,000 ಕ್ಕೂ ಹೆಚ್ಚು ಸದಸ್ಯರನ್ನು ಈ ಚುನಾವಣೆ ಆಯ್ಕೆ ಮಾಡುತ್ತವೆ. ಕಳೆದ ಐದು ವರ್ಷಗಳಲ್ಲಿ, ಈ ಸಂಸ್ಥೆಗಳಿಗೆ ಚುನಾವಣೆ ನಡೆಯದ ಕಾರಣ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ.

ಎಂ.ಕೆ ಸ್ಟಾಲಿನ್ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಸಮೀಕ್ಷೆ ಇದಾಗಿದೆ. ಈ ಬಾರಿ, ಆಡಳಿತಾರೂಢ ಡಿಎಂಕೆ ಫೆಡರಲಿಸಂನ ರಾಷ್ಟ್ರೀಯ ಸಮಸ್ಯೆಗಳು ಮತ್ತು ರಾಜ್ಯ ಸ್ವಾಯತ್ತತೆ ವಿಷಯಗಳನ್ನು ಮುಖ್ಯವಾಗಿರಿಸಿಕೊಂಡಿತ್ತು.

ಇನ್ನು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮಿಳು ಸ್ಟಾರ್‌ ನಟರಾದ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ನಟಿ ತ್ರಿಶಾ ಕೃಷ್ಣನ್ ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿತ್ತು.


ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...