Homeಕರ್ನಾಟಕಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ವಿಧಿಸಲಾಗಿದ್ದ ಸೆಕ್ಷನ್ 144 ಉಲ್ಲಂಘಿಸಿ ಮೃತದೇಹದ ಮೆರವಣಿಗೆ ನಡೆಸಿದ್ದು, ಅದರಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಎಂಬುವವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್‌ಗೆ ದೂರು ಸಲ್ಲಿಸಿದ್ದಾರೆ.

ಹರ್ಷ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ 144 ನಿಷೇದಾಜ್ಞೆ ಜಾರಿಯಲ್ಲಿದ್ದಾಗ ನಡೆದ ಮೆರವಣಿಗೆ ವೇಳೆ ಸಚಿವರಾದ ಕೆ.ಎಸ್.ಈಶ್ವರಪ್ಪ ಮತ್ತು ಸಂಸದರಾದ ರಾಘವೇಂದ್ರ ಅವರು ಭಾಗವಹಿಸಿದ್ದಾರೆ. ಇದು ಗಲಭೆ, ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲು ಕಾರಣವಾಗಿದ್ದು, ಇವರ ಮೇಲೆ ದೂರು ದಾಖಲಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಫೆಬ್ರವರಿ 20 ರ ಭಾನುವಾರ ತಡರಾತ್ರಿ ಶಿವಮೊಗ್ಗದ ಭಾರತಿ ಕಾಲೋನಿಯಲ್ಲಿ ಹರ್ಷ ಎಂಬ 26 ವರ್ಷದ ಬಜರಂಗದಳದ ಸದಸ್ಯನನ್ನು ಕಾರಿನಲ್ಲಿ ಬಂದ ಯುವಕರ ತಂಡವೊಂದು ಕೊಲೆ ಮಾಡಿದೆ. ದಾಳಿಯ ನಂತರ ಗಾಯಾಳು ಹರ್ಷನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಹರ್ಷ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣವು ನಗರದಲ್ಲಿ ಹೆಚ್ಚಿನ ಉದ್ವಿಗ್ನತೆಗೆ ಕಾರಣವಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ಎನ್.ಹನುಮೇಗೌಡ ನಿಡಿರುವ ದೂರಿನಲ್ಲಿ, ’ಸರ್ಕಾರವೇ ಹೊರಡಿಸಿದ್ದ ನಿಷೇದಾಜ್ಞೆಯನ್ನು ಅವರ ಸಚಿವರೇ ಉಲ್ಲೇಝಿಸಿದ್ದಾರೆ. ತಮ್ಮ ಸರ್ಕಾರದ ಆದೇಶಗಳಿಗೆ ತಾವೇ ಧಿಕ್ಕಾರ ಹೇಳಿದ್ದಾರೆ. ನಗರದ ತುಂಬಾ ಪೊಲೀಸರು ತುಂಬಿಕೊಂಡಿದ್ದ ಸಂದರ್ಭದಲ್ಲಿ ಸಚಿವರು ಭಾಗವಹಿಸಿದ್ದ ಮೆರವಣಿಗೆಯಲ್ಲಿ, ಪೊಲೀಸರ ಕಣ್ಣೇದುರೆ ರಸ್ತೆಗಳಲ್ಲಿನ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸಾರ್ವಜನಿಕರ ಆಸ್ತಿಗಳಿಗೆ ಹಾನಿ ಮಾಡಿದ್ದಾರೆ’ ಎಂದು ಹೇಳಲಾಗಿದೆ.

“ರಾಜ್ಯದ ಜನತೆಯ ಹಿತ ಕಾಪಾಡಬೇಕಾದ ಸಚಿವರು ಜವಾಬ್ದಾರಿ ಮರೆತು ಬೇಜವಾಬ್ದಾರಿ ತೋರಿದ ಕಾರಣದಿಂದ ಶಿವಮೊಗ್ಗದಲ್ಲಿ ಕೋಮು ಕಾಡ್ಗಿಚ್ಚು ಹೆಚ್ಚಾಗಿದೆ. ಹೀಗಾಗಿ ಜಾತಿ, ಮತ, ಕೋಮು ವೈಷಮ್ಯದ ವಿರುದ್ಧ ಕ್ರಮಕೈಗೊಳ್ಳಬೇಕಾದ ಸಚಿವ, ಸಂಸದರ ಬೇಜವಾಬ್ದಾರಿ ನಡೆ, ಕೋಮು ಪ್ರಚೋದನೆ, ಕಾನೂನು ಸುಮ್ಯವಸ್ಥೆಗೆ ಭಂಗದಂತಹ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ದೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಅವರ ಹೆಸರನ್ನು ಸೇರಿಸಲಾಗಿದೆ.

ನಗರದಲ್ಲಿ ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನಕ ಸೆಕ್ಷನ್ 144 ರ ಅಡಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಈವರೆಗೆ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...