Homeಮುಖಪುಟನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

- Advertisement -
- Advertisement -

ಜನಪರ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘ, ‘ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘ ಆರೋಪಿಸಿದ್ದಾರೆ.

ಪೊಲೀಸರು ಮಾಡಿದ ದೊಡ್ಡ ಅನ್ಯಾಯ ಇದಾಗಿದೆ. ಚೇತನ್‌ರವರ ಫೋನ್‌ಅನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ನಾನು ಶೇ‍ಷಾದ್ರಿಪುರಂ ಪೊಲೀಸ್ ಠಾಣೆಯೆದುರು ಬಂದಿದ್ದೇನೆ. ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಬಂದು ನ್ಯಾಯದ ಪರ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಚೇತನ್ ಬಂಧನ ಏಕೆ?

ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಡೆಸುತ್ತಿರುವ ಕುರಿತಾಗಿ ಎರಡು ವರ್ಷದ ಹಿಂದೆ ನಟ ಚೇತನ್‌ರವರು ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿರುದ್ಧ ದೂರು ದಾಖಲಾದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೇತನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’

ಈ ಟ್ವೀಟ್ ಅನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್‌ನ ತೀರ್ಪಿನ ಬಗ್ಗೆ ಬರೆದಿದ್ದೆ.
ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ?” ಎಂದು ಚೇತನ್‌ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೇತನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಬೆಂಬಲಿಗರು, ಸಾಮಾಜಿಕ ಕಾರ್ಯಕರ್ತರು ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದರು ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೇತನ್ ಅವರ ನಿಯಮಬಾಹಿರ ಬಂದನ ಕಂಡನಾರ್ಹ. ವ್ಯವಸ್ಥೆಯ ಉಳುಕುಗಳ ವಿರುದ್ಧ ದನಿ ಎತ್ತುವವರ ನಿಯಮಬಾಹಿರ ಬಂದನ, ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದೆ.

  2. ಚೇತನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಅವರನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಏನೇನು ನೀಡಬೇಕು ಬೇಕು ಅದನ್ನು ನೀಡಿದ್ದಾರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...