Homeಮುಖಪುಟನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

- Advertisement -
- Advertisement -

ಜನಪರ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘ, ‘ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘ ಆರೋಪಿಸಿದ್ದಾರೆ.

ಪೊಲೀಸರು ಮಾಡಿದ ದೊಡ್ಡ ಅನ್ಯಾಯ ಇದಾಗಿದೆ. ಚೇತನ್‌ರವರ ಫೋನ್‌ಅನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ನಾನು ಶೇ‍ಷಾದ್ರಿಪುರಂ ಪೊಲೀಸ್ ಠಾಣೆಯೆದುರು ಬಂದಿದ್ದೇನೆ. ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಬಂದು ನ್ಯಾಯದ ಪರ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಚೇತನ್ ಬಂಧನ ಏಕೆ?

ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಡೆಸುತ್ತಿರುವ ಕುರಿತಾಗಿ ಎರಡು ವರ್ಷದ ಹಿಂದೆ ನಟ ಚೇತನ್‌ರವರು ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿರುದ್ಧ ದೂರು ದಾಖಲಾದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೇತನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’

ಈ ಟ್ವೀಟ್ ಅನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್‌ನ ತೀರ್ಪಿನ ಬಗ್ಗೆ ಬರೆದಿದ್ದೆ.
ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ?” ಎಂದು ಚೇತನ್‌ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೇತನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಬೆಂಬಲಿಗರು, ಸಾಮಾಜಿಕ ಕಾರ್ಯಕರ್ತರು ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದರು ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೇತನ್ ಅವರ ನಿಯಮಬಾಹಿರ ಬಂದನ ಕಂಡನಾರ್ಹ. ವ್ಯವಸ್ಥೆಯ ಉಳುಕುಗಳ ವಿರುದ್ಧ ದನಿ ಎತ್ತುವವರ ನಿಯಮಬಾಹಿರ ಬಂದನ, ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದೆ.

  2. ಚೇತನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಅವರನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಏನೇನು ನೀಡಬೇಕು ಬೇಕು ಅದನ್ನು ನೀಡಿದ್ದಾರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...