Homeಕರ್ನಾಟಕಮುಖ್ಯಮಂತ್ರಿ ಸೇರಿ ಶಾಸಕರಿಗೆ 50% ವೇತನ ಹೆಚ್ಚಳ

ಮುಖ್ಯಮಂತ್ರಿ ಸೇರಿ ಶಾಸಕರಿಗೆ 50% ವೇತನ ಹೆಚ್ಚಳ

ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, “ಕಳೆದ 7 ವರ್ಷಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಮನೆ ಬಾಡಿಗೆ, ಇತರ ವೆಚ್ಚಗಳು ಜಾಸ್ತಿಯಾಗುತ್ತಿದೆ, ಜನಪ್ರತಿನಿಧಿಗಳು ಕಷ್ಟಪಡುತ್ತಿದ್ದಾರೆ" ಎಂದಿದ್ದಾರೆ.

- Advertisement -
- Advertisement -

ಕರ್ನಾಟಕ ಸರ್ಕಾರವು ಮಂಗಳವಾರದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಸಂಬಳವನ್ನು 50% ಹೆಚ್ಚಿಸುವ ಮಸೂದೆಯನ್ನು ಮಂಡಿಸಿದ್ದು, ಮಸೂದೆಯನ್ನು ಅಂಗೀಕರಿಸಲಾಗಿದೆ.

ವೇತನ ಮತ್ತು ಭತ್ಯೆಗಳ 2022 (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಗಿದೆ. ಇದು ಕಾಯ್ದೆಯಾದರೆ, ಇದರ ಪ್ರಕಾರ, ಮುಖ್ಯಮಂತ್ರಿ, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಭಾಪತಿ, ಉಪ ಸಭಾಪತಿಗಳು, ಅಧ್ಯಕ್ಷರು ಮತ್ತು ಉಪ ಅಧ್ಯಕ್ಷರು ತಮ್ಮ ಮನೆ ಭತ್ಯೆ, ಪ್ರಯಾಣ ಮತ್ತು ಸವಲತ್ತುಗಳಲ್ಲಿ ಹೆಚ್ಚಳಕ್ಕೆ ಅರ್ಹರಾಗಿರುತ್ತಾರೆ.

ಈ ಪರಿಷ್ಕರಣೆಯ ಪ್ರಕಾರ, ಮುಖ್ಯಮಂತ್ರಿಗಳ ಮಾಸಿಕ ವೇತನ 50,000 ರೂ.ಗಳಿಂದ 75,000 ರೂ.ಗಳಿಗೆ ಹೆಚ್ಚಳವಾಗಲಿದೆ. ಸಚಿವರ ವೇತನವು 40,000 ರೂ.ಗಳಿಂದ 60,000 ರೂ.ಗೆ ಏರುತ್ತದೆ. ಇದರ ಹೊರತಾಗಿ ಮುಖ್ಯಮಂತ್ರಿಗಳ ಮನೆ ಭತ್ಯೆಯು ರೂ. 80,000 ರಿಂದ ರೂ 1.2 ಲಕ್ಷಕ್ಕೆ ಏರಿಕೆಯಾಗಲಿದೆ. 20,000 ಫೋನ್ ಬಿಲ್‌ಗಳು, ರೂ 40,000 ಕ್ಷೇತ್ರದ ಭತ್ಯೆಗಳು, ರೂ 5000 ಅಂಚೆ ಶುಲ್ಕಗಳು ಮತ್ತು ಇತರ ಅನೇಕ ವೆಚ್ಚಗಳಲ್ಲಿಯೂ ಏರಿಕೆಯಾಗಲಿದೆ. ಶಾಸಕರ ವೇತನವು ಮಾಸಿಕ 25,000 ರೂ.ನಿಂದ 40,000 ರೂ. ಹೆಚ್ಚಳವಾಗುತ್ತದೆ.

ಮಂತ್ರಿಗಳ ಸಂಬಳ ಮತ್ತು ಭತ್ಯೆ (ತಿದ್ದುಪಡಿ) ಮಸೂದೆಯು 25.4 ಕೋಟಿ ರೂಪಾಯಿಗಳ ಹೆಚ್ಚುವರಿ ಆರ್ಥಿಕ ಹೊರೆಯನ್ನು ರಾಜ್ಯ ಬೊಕ್ಕಸದ ಮೇಲೆ ಬೀಳಲಿದೆ. ಅಲ್ಲದೆ, ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು ಮತ್ತು ಭತ್ಯೆಗಳು (ತಿದ್ದುಪಡಿ) ಮಸೂದೆ 2022ರ ಪ್ರಕಾರ, ವಾರ್ಷಿಕವಾಗಿ 67 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚವಾಗಲಿದೆ.

ಸದನದ ಮುಂದೆ ವಿಧೇಯಕ ಮಂಡಿಸಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ “2015ರಿಂದ ರಾಜ್ಯ ಸರ್ಕಾರ ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಿಸಿಲ್ಲ, ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಮನೆ ಬಾಡಿಗೆ ಮತ್ತು ಇತರ ವೆಚ್ಚಗಳು ಜಾಸ್ತಿಯಾಗುತ್ತಿದೆ, ಶಾಸಕರು ಕಷ್ಟಪಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಹೊಸ ತಿದ್ದುಪಡಿಯ ಪ್ರಕಾರ ಶಾಸಕರು ಮತ್ತು ಮಂತ್ರಿಗಳು ತಿಂಗಳಿಗೆ 1000 ಲೀಟರ್ ಪೆಟ್ರೋಲ್, ಡೀಸೆಲ್ ಬದಲಿಗೆ 1500 ಲೀಟರ್ ಪೆಟ್ರೋಲ್, ಡೀಸೆಲ್ ಪಡೆಯಲು ಅವಕಾಶವಿದೆ.


ಇದನ್ನೂ ಓದಿರಿ: ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಜನಗಳು ಕೊರೋನ ಮಹಾಮಾರಿಯೆಂದು ನೀವೇ ಹೇಳುತ್ತೀರಾ ಇಲ್ಲಿ ಎಷ್ಟೂ ಬಡವರು ತಿನೋಕು ಗತಿಯಿಂಳದ್ದೆ ಸಾಯುತಿದಾರೆ ಹಾಗೆ ಈ ಕೊರೋನ ಹೆಸರಿನಲ್ಲಿ ಎಷ್ಟೋ ಹಣವನ್ನು ಲೂಟಿ ಮಾಡಿದರೆ ಈಗಾ ಮತ್ತೆ ನಿಮ್ಮ ನಿಮ್ಮ ವೇತನಕ್ಕೆ ಇಷ್ಟಲ್ಲ ವೆಚ್ಚ ಹೇಳುತಿದೀರಾ ಹಾಗಾದರೆ ಇಲ್ಲಿ ಇರುವ ಬಡುವರಿಗೆ ಯಾವ ತರ…. 🙄🙄🙄🙄

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...