Homeಕರ್ನಾಟಕರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

ರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

- Advertisement -
- Advertisement -

ಜಾನುವಾರಗಳ ಕಳ್ಳಸಾಗಣಿಕೆ ಹೆಸರಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಘಟನೆಯನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು “ಕಳೆದ ಭಾನುವಾರ ರಾತ್ರಿ ಹಾಸನ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕದಬಳ್ಳಿ (ಬಿಂಡಿಗನವಿಲೆ ಹೋಬಳಿ, ನಾಗಮಂಗಲ ತಾಲ್ಲೂಕು) ಬಳಿ ಗಂಡಸಿ ಹೋಬಳಿಯ ಜಾನುವಾರು ಜಾತ್ರೆಯಲ್ಲಿ ಎತ್ತುಗಳನ್ನು ಖರೀದಿಸಿಕೊಂಡು ಹೋಗುತ್ತಿದ್ದ ರೈತರನ್ನು ಅದೇ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ದೆಹಲಿ ಮೂಲದ ಜನರು ಕಸಾಯಿ ಖಾನೆಗೆ ಸಾಗಿಸುತ್ತಿದ್ದಾರೆಂದು ತಪ್ಪಾಗಿ ಅರ್ಥೈಸಿಕೊಂಡಿದ್ದಲ್ಲದೆ ಗಲಾಟೆ ಮಾಡಿ ಎತ್ತುಗಳಿದ್ದ ವಾಹನ ತಡೆದಿದ್ದರು” ಎಂದಿದ್ದಾರೆ.

“ಸ್ಥಳಕ್ಕೆ ಬಂದ ಬಿಂಡಿಗನವಿಲೆ ಪೊಲೀಸರಿಗೆ ರೈತರು ವಾಸ್ತವ ಮನವರಿಕೆ ಮಾಡಿಕೊಟ್ಟರೂ ಸಹ ಎತ್ತು ಹಾಗೂ ವಾಹನ ಬಿಡದಿದ್ದಾಗ ಪೊಲೀಸರ ವಿರುದ್ಧ ಆಕ್ರೋಶಗೊಂಡು ಪ್ರತಿಭಟನೆಯ ರೂಪಕ್ಕೆ ತಿರುಗಿತು. ಘಟನೆಯ ಬಗ್ಗೆ ಸ್ಥಳೀಯ ಮುಖಂಡರಿಂದ ಮಾಹಿತಿ ತಿಳಿದು ಪ್ರತಿಭಟನಾ ನಿರತ ಸ್ಥಳಕ್ಕೆ ಧಾವಿಸಿದೆ. ಪೊಲೀಸರೊಂದಿಗೆ ರೈತರ ಪರಿಸ್ಥಿತಿಯ ಹಾಗೂ ವಾಸ್ತವದ ಬಗ್ಗೆ ಮನವರಿಕೆ ಮಾಡಿಕೊಟ್ಟು ಜಾನುವಾರುಗಳನ್ನು ಬಿಡಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಸ್ಪರ್ಧೆ ಇಲ್ಲ, ನಾನು ಚಾಮುಂಡೇಶ್ವರಿಗೆ ಹೋಗುತ್ತೇನೆ- ಎಚ್‌.ಡಿ.ಕೆ: ರಾಮನಗರಕ್ಕೆ ನಿಖಿಲ್ ಫಿಕ್ಸ್?

 

’ಜಾನುವಾರು ಕಳ್ಳಸಾಗಾಣಿಕೆ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ, ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳದಲ್ಲಿದ್ದ ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ’ ಎಂದು ತಮ್ಮ ಫೋಸ್ಟ್‌ಗಳಲ್ಲಿ ತಿಳಿಸಿದ್ದಾರೆ.

ಟ್ವೀಟ್‌ಗಳ ಜೊತೆಗೆ ಪ್ರತಿಭಟನಾ ಸ್ಥಳದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ರೈತರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವುದು ಕಾಣಿಸುತ್ತದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಸದ ಪ್ರಜ್ವಲ್ ರೇವಣ್ಣ ಪರಿಸ್ಥಿತಿಯನ್ನು ತಿಳಿಸುತ್ತಿದ್ದಾರೆ.

“ಅರಸಿಕೆರೆಯಲ್ಲಿಯೂ ಇದೇ ತಂಡ ರೈತರನ್ನು ಹಿಡಿದು ಪ್ರಕರಣದ ದಾಖಲಿಸಲು ಒತ್ತಡ ಹೇರಿದ್ದು, ಅದಕ್ಕೆ ಪೊಲೀಸರು ಒಪ್ಪದಿದ್ದಾಗ ಇಲ್ಲಿಗೆ ಬಂದು ಮತ್ತೆ ಇಂತಹದ್ದೆ ಕೆಲಸ ಮಾಡಿದ್ದಾರೆ. ಬಜರಂಗದಳದ ಒಂದು ಕಾರ್ಡ್ ತೋರಿಸುವುದು ರೈತರನ್ನು ಹಿಡಿದು ಜಾನುವಾರು ಕಳ್ಳ ಸಾಗಾಣಿಕೆ ಅಂತ ಆರೋಪ ಮಾಡುವುದು ಇದೆ ನಡೆಯುತ್ತಿದೆ. ಅವರಿಗೆ ಅಂತಹ ಅನುಮಾನಗಳಿದ್ದರೆ..ಸೀದಾ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು ಅವರು ಅದರ ಸತ್ಯಾಸತ್ಯತೆ ತನಿಖೆ ಮಾಡುತ್ತಾರೆ. ಆದರೆ, ಅದು ಬಿಟ್ಟು ಅವರೇ ಗಾಡಿಗಳನ್ನು ಹಿಡಿಯುವುದು 30, 40 ಸಾವಿರ ಕಿತ್ತುಕೊಳ್ಳುವುದು ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇವರು ಹೇಗೆ ರೈತರ ಮೇಲೆ ಕ್ರಮ ತೆಗೆದುಕೊಳ್ಲುತ್ತಾರೆ. ಇವರು ಯಾರು ರೈತರನ್ನು ಅಡ್ಡ ಹಾಕುವವರು…? ಅದಕ್ಕೆ ಅಂತ ಪೊಲಿಸ್ ಇಲಾಖೆಯಿದೆ. ನೀವು ಇವರ ಮೇಲೆ ಕಠಿಣ ಕ್ರಮ ತೆಗೆದುಬೇಕು. ಇವರೇ ಎಲ್ಲಾ ಮಾಡುವುದಾದರೇ ಪೊಲೀಸರು ಯಾಕೆ ಬೇಕು…? ಸಿವಿಲ್ ಪೊಲೀಸಿಂಗ್‌ಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ. ಇತ್ತೀಚೆಗೆ ಇದು ಅತಿಯಾಗುತ್ತಿದೆ. ಇದು ನಿಲ್ಲಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...