Homeಕರ್ನಾಟಕರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

ರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

- Advertisement -
- Advertisement -

ಜಾನುವಾರಗಳ ಕಳ್ಳಸಾಗಣಿಕೆ ಹೆಸರಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಘಟನೆಯನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು “ಕಳೆದ ಭಾನುವಾರ ರಾತ್ರಿ ಹಾಸನ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕದಬಳ್ಳಿ (ಬಿಂಡಿಗನವಿಲೆ ಹೋಬಳಿ, ನಾಗಮಂಗಲ ತಾಲ್ಲೂಕು) ಬಳಿ ಗಂಡಸಿ ಹೋಬಳಿಯ ಜಾನುವಾರು ಜಾತ್ರೆಯಲ್ಲಿ ಎತ್ತುಗಳನ್ನು ಖರೀದಿಸಿಕೊಂಡು ಹೋಗುತ್ತಿದ್ದ ರೈತರನ್ನು ಅದೇ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ದೆಹಲಿ ಮೂಲದ ಜನರು ಕಸಾಯಿ ಖಾನೆಗೆ ಸಾಗಿಸುತ್ತಿದ್ದಾರೆಂದು ತಪ್ಪಾಗಿ ಅರ್ಥೈಸಿಕೊಂಡಿದ್ದಲ್ಲದೆ ಗಲಾಟೆ ಮಾಡಿ ಎತ್ತುಗಳಿದ್ದ ವಾಹನ ತಡೆದಿದ್ದರು” ಎಂದಿದ್ದಾರೆ.

“ಸ್ಥಳಕ್ಕೆ ಬಂದ ಬಿಂಡಿಗನವಿಲೆ ಪೊಲೀಸರಿಗೆ ರೈತರು ವಾಸ್ತವ ಮನವರಿಕೆ ಮಾಡಿಕೊಟ್ಟರೂ ಸಹ ಎತ್ತು ಹಾಗೂ ವಾಹನ ಬಿಡದಿದ್ದಾಗ ಪೊಲೀಸರ ವಿರುದ್ಧ ಆಕ್ರೋಶಗೊಂಡು ಪ್ರತಿಭಟನೆಯ ರೂಪಕ್ಕೆ ತಿರುಗಿತು. ಘಟನೆಯ ಬಗ್ಗೆ ಸ್ಥಳೀಯ ಮುಖಂಡರಿಂದ ಮಾಹಿತಿ ತಿಳಿದು ಪ್ರತಿಭಟನಾ ನಿರತ ಸ್ಥಳಕ್ಕೆ ಧಾವಿಸಿದೆ. ಪೊಲೀಸರೊಂದಿಗೆ ರೈತರ ಪರಿಸ್ಥಿತಿಯ ಹಾಗೂ ವಾಸ್ತವದ ಬಗ್ಗೆ ಮನವರಿಕೆ ಮಾಡಿಕೊಟ್ಟು ಜಾನುವಾರುಗಳನ್ನು ಬಿಡಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಸ್ಪರ್ಧೆ ಇಲ್ಲ, ನಾನು ಚಾಮುಂಡೇಶ್ವರಿಗೆ ಹೋಗುತ್ತೇನೆ- ಎಚ್‌.ಡಿ.ಕೆ: ರಾಮನಗರಕ್ಕೆ ನಿಖಿಲ್ ಫಿಕ್ಸ್?

 

’ಜಾನುವಾರು ಕಳ್ಳಸಾಗಾಣಿಕೆ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ, ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳದಲ್ಲಿದ್ದ ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ’ ಎಂದು ತಮ್ಮ ಫೋಸ್ಟ್‌ಗಳಲ್ಲಿ ತಿಳಿಸಿದ್ದಾರೆ.

ಟ್ವೀಟ್‌ಗಳ ಜೊತೆಗೆ ಪ್ರತಿಭಟನಾ ಸ್ಥಳದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ರೈತರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವುದು ಕಾಣಿಸುತ್ತದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಸದ ಪ್ರಜ್ವಲ್ ರೇವಣ್ಣ ಪರಿಸ್ಥಿತಿಯನ್ನು ತಿಳಿಸುತ್ತಿದ್ದಾರೆ.

“ಅರಸಿಕೆರೆಯಲ್ಲಿಯೂ ಇದೇ ತಂಡ ರೈತರನ್ನು ಹಿಡಿದು ಪ್ರಕರಣದ ದಾಖಲಿಸಲು ಒತ್ತಡ ಹೇರಿದ್ದು, ಅದಕ್ಕೆ ಪೊಲೀಸರು ಒಪ್ಪದಿದ್ದಾಗ ಇಲ್ಲಿಗೆ ಬಂದು ಮತ್ತೆ ಇಂತಹದ್ದೆ ಕೆಲಸ ಮಾಡಿದ್ದಾರೆ. ಬಜರಂಗದಳದ ಒಂದು ಕಾರ್ಡ್ ತೋರಿಸುವುದು ರೈತರನ್ನು ಹಿಡಿದು ಜಾನುವಾರು ಕಳ್ಳ ಸಾಗಾಣಿಕೆ ಅಂತ ಆರೋಪ ಮಾಡುವುದು ಇದೆ ನಡೆಯುತ್ತಿದೆ. ಅವರಿಗೆ ಅಂತಹ ಅನುಮಾನಗಳಿದ್ದರೆ..ಸೀದಾ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು ಅವರು ಅದರ ಸತ್ಯಾಸತ್ಯತೆ ತನಿಖೆ ಮಾಡುತ್ತಾರೆ. ಆದರೆ, ಅದು ಬಿಟ್ಟು ಅವರೇ ಗಾಡಿಗಳನ್ನು ಹಿಡಿಯುವುದು 30, 40 ಸಾವಿರ ಕಿತ್ತುಕೊಳ್ಳುವುದು ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇವರು ಹೇಗೆ ರೈತರ ಮೇಲೆ ಕ್ರಮ ತೆಗೆದುಕೊಳ್ಲುತ್ತಾರೆ. ಇವರು ಯಾರು ರೈತರನ್ನು ಅಡ್ಡ ಹಾಕುವವರು…? ಅದಕ್ಕೆ ಅಂತ ಪೊಲಿಸ್ ಇಲಾಖೆಯಿದೆ. ನೀವು ಇವರ ಮೇಲೆ ಕಠಿಣ ಕ್ರಮ ತೆಗೆದುಬೇಕು. ಇವರೇ ಎಲ್ಲಾ ಮಾಡುವುದಾದರೇ ಪೊಲೀಸರು ಯಾಕೆ ಬೇಕು…? ಸಿವಿಲ್ ಪೊಲೀಸಿಂಗ್‌ಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ. ಇತ್ತೀಚೆಗೆ ಇದು ಅತಿಯಾಗುತ್ತಿದೆ. ಇದು ನಿಲ್ಲಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...