Homeಕರ್ನಾಟಕರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

ರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

- Advertisement -
- Advertisement -

ಜಾನುವಾರಗಳ ಕಳ್ಳಸಾಗಣಿಕೆ ಹೆಸರಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಘಟನೆಯನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು “ಕಳೆದ ಭಾನುವಾರ ರಾತ್ರಿ ಹಾಸನ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕದಬಳ್ಳಿ (ಬಿಂಡಿಗನವಿಲೆ ಹೋಬಳಿ, ನಾಗಮಂಗಲ ತಾಲ್ಲೂಕು) ಬಳಿ ಗಂಡಸಿ ಹೋಬಳಿಯ ಜಾನುವಾರು ಜಾತ್ರೆಯಲ್ಲಿ ಎತ್ತುಗಳನ್ನು ಖರೀದಿಸಿಕೊಂಡು ಹೋಗುತ್ತಿದ್ದ ರೈತರನ್ನು ಅದೇ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ದೆಹಲಿ ಮೂಲದ ಜನರು ಕಸಾಯಿ ಖಾನೆಗೆ ಸಾಗಿಸುತ್ತಿದ್ದಾರೆಂದು ತಪ್ಪಾಗಿ ಅರ್ಥೈಸಿಕೊಂಡಿದ್ದಲ್ಲದೆ ಗಲಾಟೆ ಮಾಡಿ ಎತ್ತುಗಳಿದ್ದ ವಾಹನ ತಡೆದಿದ್ದರು” ಎಂದಿದ್ದಾರೆ.

“ಸ್ಥಳಕ್ಕೆ ಬಂದ ಬಿಂಡಿಗನವಿಲೆ ಪೊಲೀಸರಿಗೆ ರೈತರು ವಾಸ್ತವ ಮನವರಿಕೆ ಮಾಡಿಕೊಟ್ಟರೂ ಸಹ ಎತ್ತು ಹಾಗೂ ವಾಹನ ಬಿಡದಿದ್ದಾಗ ಪೊಲೀಸರ ವಿರುದ್ಧ ಆಕ್ರೋಶಗೊಂಡು ಪ್ರತಿಭಟನೆಯ ರೂಪಕ್ಕೆ ತಿರುಗಿತು. ಘಟನೆಯ ಬಗ್ಗೆ ಸ್ಥಳೀಯ ಮುಖಂಡರಿಂದ ಮಾಹಿತಿ ತಿಳಿದು ಪ್ರತಿಭಟನಾ ನಿರತ ಸ್ಥಳಕ್ಕೆ ಧಾವಿಸಿದೆ. ಪೊಲೀಸರೊಂದಿಗೆ ರೈತರ ಪರಿಸ್ಥಿತಿಯ ಹಾಗೂ ವಾಸ್ತವದ ಬಗ್ಗೆ ಮನವರಿಕೆ ಮಾಡಿಕೊಟ್ಟು ಜಾನುವಾರುಗಳನ್ನು ಬಿಡಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಸ್ಪರ್ಧೆ ಇಲ್ಲ, ನಾನು ಚಾಮುಂಡೇಶ್ವರಿಗೆ ಹೋಗುತ್ತೇನೆ- ಎಚ್‌.ಡಿ.ಕೆ: ರಾಮನಗರಕ್ಕೆ ನಿಖಿಲ್ ಫಿಕ್ಸ್?

 

’ಜಾನುವಾರು ಕಳ್ಳಸಾಗಾಣಿಕೆ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ, ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳದಲ್ಲಿದ್ದ ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ’ ಎಂದು ತಮ್ಮ ಫೋಸ್ಟ್‌ಗಳಲ್ಲಿ ತಿಳಿಸಿದ್ದಾರೆ.

ಟ್ವೀಟ್‌ಗಳ ಜೊತೆಗೆ ಪ್ರತಿಭಟನಾ ಸ್ಥಳದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ರೈತರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವುದು ಕಾಣಿಸುತ್ತದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಸದ ಪ್ರಜ್ವಲ್ ರೇವಣ್ಣ ಪರಿಸ್ಥಿತಿಯನ್ನು ತಿಳಿಸುತ್ತಿದ್ದಾರೆ.

“ಅರಸಿಕೆರೆಯಲ್ಲಿಯೂ ಇದೇ ತಂಡ ರೈತರನ್ನು ಹಿಡಿದು ಪ್ರಕರಣದ ದಾಖಲಿಸಲು ಒತ್ತಡ ಹೇರಿದ್ದು, ಅದಕ್ಕೆ ಪೊಲೀಸರು ಒಪ್ಪದಿದ್ದಾಗ ಇಲ್ಲಿಗೆ ಬಂದು ಮತ್ತೆ ಇಂತಹದ್ದೆ ಕೆಲಸ ಮಾಡಿದ್ದಾರೆ. ಬಜರಂಗದಳದ ಒಂದು ಕಾರ್ಡ್ ತೋರಿಸುವುದು ರೈತರನ್ನು ಹಿಡಿದು ಜಾನುವಾರು ಕಳ್ಳ ಸಾಗಾಣಿಕೆ ಅಂತ ಆರೋಪ ಮಾಡುವುದು ಇದೆ ನಡೆಯುತ್ತಿದೆ. ಅವರಿಗೆ ಅಂತಹ ಅನುಮಾನಗಳಿದ್ದರೆ..ಸೀದಾ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು ಅವರು ಅದರ ಸತ್ಯಾಸತ್ಯತೆ ತನಿಖೆ ಮಾಡುತ್ತಾರೆ. ಆದರೆ, ಅದು ಬಿಟ್ಟು ಅವರೇ ಗಾಡಿಗಳನ್ನು ಹಿಡಿಯುವುದು 30, 40 ಸಾವಿರ ಕಿತ್ತುಕೊಳ್ಳುವುದು ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇವರು ಹೇಗೆ ರೈತರ ಮೇಲೆ ಕ್ರಮ ತೆಗೆದುಕೊಳ್ಲುತ್ತಾರೆ. ಇವರು ಯಾರು ರೈತರನ್ನು ಅಡ್ಡ ಹಾಕುವವರು…? ಅದಕ್ಕೆ ಅಂತ ಪೊಲಿಸ್ ಇಲಾಖೆಯಿದೆ. ನೀವು ಇವರ ಮೇಲೆ ಕಠಿಣ ಕ್ರಮ ತೆಗೆದುಬೇಕು. ಇವರೇ ಎಲ್ಲಾ ಮಾಡುವುದಾದರೇ ಪೊಲೀಸರು ಯಾಕೆ ಬೇಕು…? ಸಿವಿಲ್ ಪೊಲೀಸಿಂಗ್‌ಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ. ಇತ್ತೀಚೆಗೆ ಇದು ಅತಿಯಾಗುತ್ತಿದೆ. ಇದು ನಿಲ್ಲಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...