Homeಕರ್ನಾಟಕಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಗರದಲ್ಲಿ ಮಂಗಳವಾರವೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,200 ಪೊಲೀಸ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ನಗರದಲ್ಲಿ ಗಸ್ತು ತಿರುಗುತ್ತಿದೆ. ಆದರೆ ಕೆಲ ಕಿಡಿಗೇಡಿಗಳು ಮಂಗಳವಾರ ಮುಂಜಾವಿನಲ್ಲಿ ಮೂರು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತರನ್ನು ಆಸಿಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮೊಹಮ್ಮದ್ ಖಾಸಿಫ್ (30) ಮತ್ತು ಸೈಯದ್ ನದೀಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಮೊಹಮ್ಮದ್ ಖಾಸಿಫ್ ಪ್ರಮುಖ ಆರೋಪಿಯಾಗಿದ್ದು, ನದೀಮ್ ಆರೋಪಿ ನಂ.2 ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ಆಸಿಫ್ ಉಲ್ಲಾ ಖಾನ್ – ಆರೋಪಿ ನಂ.3, ರಿಹಾನ್ ಷರೀಫ್- ಆರೋಪಿ ನಂ.4, ನಿಹಾನ್- ಆರೋಪಿ ನಂ.5 ಮತ್ತು ಅಫ್ನಾನ್ -ಆರೋಪಿ ನಂ.6. ಖಾಸಿಫ್ ಹೊರತುಪಡಿಸಿ ಉಳಿದ ಆರೋಪಿಗಳು 21 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.

“ಎಲ್ಲಾ ಆರೋಪಿಗಳು ಶಿವಮೊಗ್ಗ ನಗರದ ನಿವಾಸಿಗಳು. ನಾವು 12 ಜನರನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಆರು ಮಂದಿ ಕೊಲೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆರು ಮಂದಿಯಲ್ಲಿ ನಾಲ್ವರು ಹಲ್ಲೆ, ಕೊಲೆ ಯತ್ನ ಮತ್ತು ಗಲಭೆ ಸೇರಿದಂತೆ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮೃತ ಹರ್ಷ 2016 ಮತ್ತು 2017ರಲ್ಲಿ ದಾಖಲಾದ ಗಲಭೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕೊಲೆಯ ಉದ್ದೇಶವನ್ನು ತಿಳಿದುಕೊಳ್ಳಲು ನಾವು ಎಲ್ಲಾ ಆರು ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದೇವೆ. ಈಗಾಗಲೇ ನಾಲ್ವರು ಆರೋಪಿಗಳ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, ಉಳಿದ ಇಬ್ಬರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎಡಿಜಿಪಿಗಳಾದ ಪ್ರತಾಪ್ ರೆಡ್ಡಿ, ಎಸ್. ಮುರುಗನ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಶಿವಮೊಗ್ಗ ಎಸ್‌ಪಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸೇರಿದಂತೆ ಮೂವರು ಪೊಲೀಸ್ ವರಿಷ್ಠಾಧಿಕಾರಿಗಳು, ಒಬ್ಬರು ಹೆಚ್ಚುವರಿ ಎಸ್ಪಿ ಮತ್ತು 12 ಡೆಪ್ಯುಟಿ ಎಸ್ಪಿಗಳು ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಹರ್ಷ ಹತ್ಯೆಯ ನಂತರ ಗಲಭೆ, ಬೆಂಕಿ ಹಚ್ಚುವಿಕೆ ಮತ್ತು ಕಲ್ಲು ತೂರಾಟದ ಘಟನೆಗಳಿಗೆ ಸಂಬಂಧಿಸಿದಂತೆ 14 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...