Homeಮುಖಪುಟಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಯು ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಉತ್ತರ ಪ್ರದೇಶದ 59 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ಬರೇಲಿಯ ಐದು ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.

59 ಕ್ಷೇತ್ರಗಳ ಪೈಕಿ 2017ರಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು. ನಾಲ್ಕು ಸ್ಥಾನಗಳು ಸಮಾಜವಾದಿ ಪಕ್ಷಕ್ಕೆ, ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರ್‌ ಖೇರಿ ಕುತೂಹಲಕಾರಿ: ಅಕ್ಟೋಬರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಆರೋಪಿಯಾಗಿದ್ದಾರೆ. ಹೀಗಾಗಿ ರೈತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅಜಯ್‌ ಮಿಶ್ರಾ ಅವರಿಗೂ ಪ್ರತಿಷ್ಠೆಯ ಕಣವಾಗಿದೆ.

ರೈತರ ಮೇಲೆ ವಾಹನವನ್ನು ಹತ್ತಿಸಿ ನಾಲ್ಕು ಜನ ರೈತರ ಹತ್ಯೆಗೆ ಆಶಿಶ್ ಮಿಶ್ರಾ ಕಾರಣವಾಗಿದ್ದು, ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಆಶಿಶ್ ಮಿಶ್ರಾ ಅವರಿಗೆ ದೊರೆತಿರುವ ಜಾಮೀನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರದ ವಿವಾದಿತ ಕೃಷಿ ಕಾನೂನುಗಳಿಂದಾಗಿ ರೈತರಲ್ಲಿ ಅಸಮಾಧಾನವಿದೆ. ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ, ಎಂಎಸ್‌ಪಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವೂ ರೈತರ ಕೋಪಕ್ಕೆ ಕಾರಣವಾಗಿದೆ.

ಲಖಿಂಪುರ್‌ ಖೇರಿಯ ಎಲ್ಲಾ 8 ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಪುನರಾವರ್ತಿಸಿವೆ. 2017ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ ಹಾಗೂ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ತ್ರಿವೇದಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ರಾಜ್ಯದ ರಾಜಧಾನಿ ಲಕ್ನೋದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಸರೋಜಿನಿ ನಗರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಅಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್, ಮಾಜಿ ಐಐಎಂ ಪ್ರೊಫೆಸರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಅಭಿಷೇಕ್ ಮಿಶ್ರಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ರಾಜ್ಯ ಸಚಿವ ಅಶುತೋಷ್ ಟಂಡನ್ ಅವರು ಲಕ್ನೋ ಪೂರ್ವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನುರಾಗ್ ಬದೌರಿಯಾ ವಿರುದ್ಧ ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಸಂಸದೀಯ ಸ್ಥಾನದ ಭಾಗವಾಗಿರುವ ರಾಯ್‌ಬರೇಲಿ ಸದರ್‌ನಲ್ಲಿ ಹಾಲಿ ಪಕ್ಷದ ಶಾಸಕಿ ಅದಿತಿ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮನೀಶ್ ಚೌಹಾಣ್ ಅವರು ಅದಿತಿ ಸಿಂಗ್‌ ವಿರುದ್ಧ ಸ್ಪರ್ಧಿಸಿದ್ದಾರೆ. ಅದಿತಿ ಸಿಂಗ್ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ದಿವಂಗತ ಅಖಿಲೇಶ್ ಸಿಂಗ್ ಅವರ ಪುತ್ರಿ. ಸಮಾಜವಾದಿ ಪಕ್ಷ ಆರ್ ಪಿ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇವುಗಳನ್ನು ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು, ಮತ ಚಲಾಯಿಸುವ ಪೋಷಕರ ಮಕ್ಕಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯಲ್ಲಿ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.


ಇದನ್ನೂ ಓದಿರಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...