Homeಮುಖಪುಟಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಯು ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಉತ್ತರ ಪ್ರದೇಶದ 59 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ಬರೇಲಿಯ ಐದು ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.

ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ.

59 ಕ್ಷೇತ್ರಗಳ ಪೈಕಿ 2017ರಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು. ನಾಲ್ಕು ಸ್ಥಾನಗಳು ಸಮಾಜವಾದಿ ಪಕ್ಷಕ್ಕೆ, ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರ್‌ ಖೇರಿ ಕುತೂಹಲಕಾರಿ: ಅಕ್ಟೋಬರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಆರೋಪಿಯಾಗಿದ್ದಾರೆ. ಹೀಗಾಗಿ ರೈತರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಅಜಯ್‌ ಮಿಶ್ರಾ ಅವರಿಗೂ ಪ್ರತಿಷ್ಠೆಯ ಕಣವಾಗಿದೆ.

ರೈತರ ಮೇಲೆ ವಾಹನವನ್ನು ಹತ್ತಿಸಿ ನಾಲ್ಕು ಜನ ರೈತರ ಹತ್ಯೆಗೆ ಆಶಿಶ್ ಮಿಶ್ರಾ ಕಾರಣವಾಗಿದ್ದು, ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಆಶಿಶ್ ಮಿಶ್ರಾ ಅವರಿಗೆ ದೊರೆತಿರುವ ಜಾಮೀನು ಪ್ರಶ್ನಿಸಿ ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರದ ವಿವಾದಿತ ಕೃಷಿ ಕಾನೂನುಗಳಿಂದಾಗಿ ರೈತರಲ್ಲಿ ಅಸಮಾಧಾನವಿದೆ. ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ, ಎಂಎಸ್‌ಪಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವೂ ರೈತರ ಕೋಪಕ್ಕೆ ಕಾರಣವಾಗಿದೆ.

ಲಖಿಂಪುರ್‌ ಖೇರಿಯ ಎಲ್ಲಾ 8 ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಪುನರಾವರ್ತಿಸಿವೆ. 2017ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ ಹಾಗೂ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ತ್ರಿವೇದಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ರಾಜ್ಯದ ರಾಜಧಾನಿ ಲಕ್ನೋದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಸರೋಜಿನಿ ನಗರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಅಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್, ಮಾಜಿ ಐಐಎಂ ಪ್ರೊಫೆಸರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಅಭಿಷೇಕ್ ಮಿಶ್ರಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ರಾಜ್ಯ ಸಚಿವ ಅಶುತೋಷ್ ಟಂಡನ್ ಅವರು ಲಕ್ನೋ ಪೂರ್ವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅನುರಾಗ್ ಬದೌರಿಯಾ ವಿರುದ್ಧ ಕಣದಲ್ಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಸಂಸದೀಯ ಸ್ಥಾನದ ಭಾಗವಾಗಿರುವ ರಾಯ್‌ಬರೇಲಿ ಸದರ್‌ನಲ್ಲಿ ಹಾಲಿ ಪಕ್ಷದ ಶಾಸಕಿ ಅದಿತಿ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮನೀಶ್ ಚೌಹಾಣ್ ಅವರು ಅದಿತಿ ಸಿಂಗ್‌ ವಿರುದ್ಧ ಸ್ಪರ್ಧಿಸಿದ್ದಾರೆ. ಅದಿತಿ ಸಿಂಗ್ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ದಿವಂಗತ ಅಖಿಲೇಶ್ ಸಿಂಗ್ ಅವರ ಪುತ್ರಿ. ಸಮಾಜವಾದಿ ಪಕ್ಷ ಆರ್ ಪಿ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇವುಗಳನ್ನು ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು, ಮತ ಚಲಾಯಿಸುವ ಪೋಷಕರ ಮಕ್ಕಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯಲ್ಲಿ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.


ಇದನ್ನೂ ಓದಿರಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....