Homeಕರ್ನಾಟಕಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

ಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

- Advertisement -
- Advertisement -

ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಶವದ ಮೆರವಣಿಗೆ ಸಂದರ್ಭದಲ್ಲಿ ಆದ ಸಾರ್ವಜನಿಕ ಆಸ್ತಿ ನಷ್ಟವನ್ನು ಸಚಿವ ಕೆ.ಎಸ್‌.ಈಶ್ವರಪ್ಪನವರಿಂದ ವಸೂಲಿ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.

“ಕೊಲೆಯಾದ ಬಜರಂಗದಳದ ಕಾರ್ಯಕರ್ತನ ಶವದ ಮೆರವಣಿಗೆಯನ್ನು ಮುನ್ನಡೆಸಿದ ಈಶ್ವರಪ್ಪನವರಿಂದಾಗಿ ಹಿಂಸಾಚಾರ ನಡೆದಿದೆ” ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

“ಗಲಭೆಯಿಂದಾದ ಸಾರ್ವಜನಿಕ ಆಸ್ತಿಗೆ ಉಂಟಾದ ಹಾನಿಯನ್ನು ಪಡೆಯಲು ಬಿಜೆಪಿ ಹೆಮ್ಮೆಪಡುತ್ತದೆ. ಅದೇ ಅಳತೆಗೋಲನ್ನು ಅನುಸರಿಸಿ ಸರ್ಕಾರವು ಮೆರವಣಿಗೆಯ ಮುಂದಾಳತ್ವ ವಹಿಸಿದ್ದ ಈಶ್ವರಪ್ಪನವರಿಂದ ಪರಿಹಾರವನ್ನು ವಸೂಲಿ ಮಾಡಬೇಕು” ಎಂದು ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪ್ರತಿಭಟನಾಕಾರರಿಂದಾಗಿ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ ಎಂದು ಆರೋಪಿಸಿದ್ದ ಉತ್ತರ ಪ್ರದೇಶ ಯುಪಿ ಸರ್ಕಾರ ವಸೂಲಿಗೆ ಮುಂದಾಗಿತ್ತು. ಆದರೆ ವಸೂಲಿ ಮಾಡಲಾದ ಕೋಟ್ಯಂತರ ರೂಪಾಯಿಗಳನ್ನು ಮರುಪಾವತಿ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನಿರ್ದೇಶಿಸಿದೆ.

ಕೆ.ಎಸ್.ಈಶ್ವರಪ್ಪ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಇತ್ತೀಚಿನ ಮಾತಿನ ಸಮರಕ್ಕೆ ಕಾರಣವಾದ ಎರಡನೇ ವಿಷಯ ಇದಾಗಿದೆ. ‘ಕೇಸರಿ ಧ್ವಜವು ರಾಷ್ಟ್ರಧ್ವಜವಾಗಬಹುದು’ ಎಂದು ಈಶ್ವರಪ್ಪ ಅವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ಮತ್ತೆ ನಾಲ್ವರ ಬಂಧನ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಗರದಲ್ಲಿ ಮಂಗಳವಾರವೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,200 ಪೊಲೀಸ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ನಗರದಲ್ಲಿ ಗಸ್ತು ತಿರುಗುತ್ತಿದೆ. ಆದರೆ ಕೆಲ ಕಿಡಿಗೇಡಿಗಳು ಮಂಗಳವಾರ ಮುಂಜಾವಿನಲ್ಲಿ ಮೂರು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತರನ್ನು ಆಸಿಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮೊಹಮ್ಮದ್ ಖಾಸಿಫ್ (30) ಮತ್ತು ಸೈಯದ್ ನದೀಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಮೊಹಮ್ಮದ್ ಖಾಸಿಫ್ ಪ್ರಮುಖ ಆರೋಪಿಯಾಗಿದ್ದು, ನದೀಮ್ ಆರೋಪಿ ನಂ.2 ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಸಿಫ್ ಉಲ್ಲಾ ಖಾನ್ – ಆರೋಪಿ ನಂ.3, ರಿಹಾನ್ ಷರೀಫ್- ಆರೋಪಿ ನಂ.4, ನಿಹಾನ್- ಆರೋಪಿ ನಂ.5 ಮತ್ತು ಅಫ್ನಾನ್ -ಆರೋಪಿ ನಂ.6. ಖಾಸಿಫ್ ಹೊರತುಪಡಿಸಿ ಉಳಿದ ಆರೋಪಿಗಳು 21 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.

“ಎಲ್ಲಾ ಆರೋಪಿಗಳು ಶಿವಮೊಗ್ಗ ನಗರದ ನಿವಾಸಿಗಳು. ನಾವು 12 ಜನರನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಆರು ಮಂದಿ ಕೊಲೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆರು ಮಂದಿಯಲ್ಲಿ ನಾಲ್ವರು ಹಲ್ಲೆ, ಕೊಲೆ ಯತ್ನ ಮತ್ತು ಗಲಭೆ ಸೇರಿದಂತೆ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮೃತ ಹರ್ಷ 2016 ಮತ್ತು 2017ರಲ್ಲಿ ದಾಖಲಾದ ಗಲಭೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...