Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...