Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...