Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...