Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...