Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...