Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...