Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...