Homeಮುಖಪುಟನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

- Advertisement -
- Advertisement -

ಟ್ವೀಟ್ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ಬಂಧಿಸಿರುವ ನಟ ಚೇತನ್ ಪರ ನಟಿ ಮತ್ತು ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ದನಿಯೆತ್ತಿದ್ದಾರೆ. ಚೇತನ್ ಮಾಡಿರುವ ಟ್ವೀಟ್‌ನಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಚೇತನ್ ಮಾಡಿದ್ದ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ನಟಿ, “ಚೇತನ್‌ರನ್ನು ಪೊಲೀಸರಿಗೆ ಬಂಧಿಸಲು ಈ ಟ್ವೀಟ್‌ನಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿ ಚೇತನ್‌ ಅವರನ್ನು ಟ್ಯಾಗ್ ಮಾಡಿದ್ದಾರೆ.

ಅದೇ ರೀತಿ ಮತ್ತೊರ್ವ ಚಿತ್ರನಟ, ಕ್ರಿಕೆಟ್ ವೀಕ್ಷಕ ವಿವರಣೆಗಾರರಾದ ಕಿರಣ್ ಶ್ರೀನಿವಾಸ್ ಸಹ “ಚೇತನ್‌ರವರೆ ನಿಮ್ಮ ಜೊತೆ ನಾನು ಹಾಗು ಲಕ್ಷಾಂತರ ಕನ್ನಡಿಗರ ಬೆಂಬಲವಿದೆ” ಎಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ “ಆತ್ಮೀಯ ಗೆಳೆಯ ಚೇತನ್ ಇಂದು ನಿಮ್ಮ ಜನ್ಮದಿನ. ಇಂದು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ನಿಮ್ಮನ್ನು ಪ್ರೀತಿಸುವವರೊಂದಿಗೆ ನೀವಿರಬೇಕಿತ್ತು. ಆದರೆ ಪೊಲೀಸರು ನಿಮ್ಮನ್ನು ಬಂಧಿಸಿದ್ದಾರೆ. ಇದರಿಂದ ನನಗೆ ಹಾಗೂ ಲಕ್ಷಾಂತರ ಅಭಿಮಾನಿಗೆ ಬೇಜಾರು, ದುಃಖ, ನೋವಾಗಿದೆ. ಯಾಕೆ ನಿಮ್ಮ ಮೇಲೆ ಈ ಕ್ರಮ ತೆಗೆದುಕೊಂಡಿದ್ದಾರೆ ಎಂಬ ಅರಿವು ನನಗಿದೆ. ನಿಮ್ಮ ಹೋರಾಟ, ನಿಮ್ಮ ದನಿ, ಸತ್ಯದ ಪರ, ಸಮಾಜದ ಪರ, ಜನರ ಪರ ಹೋರಾಟ ಏನಿದೆ ಅದು ಬೆಳೆದುಬಂದು ರಾಜ್ಯ ಮಾತ್ರವಲ್ಲದೆ ಇಡೀ ದೇಶಕ್ಕೆ ಹಬ್ಬಿದೆ. ಇದರಿಂದ ಭದ್ರಕೋಟೆಯಲ್ಲಿ ಕೂತು ದಂಧೆ ನಡೆಸುತ್ತಿರುವವರ ಗೋಡೆಯಲ್ಲಿ ಬಿರುಕುಗಳು ಉಂಟಾಗಿವೆ. ಅದರಿಂದ ಭಯಗೊಂಡಿದ್ದಾರೆ. ಅದಕ್ಕೆ ಕಾರಣ ನೀವು ಮತ್ತು ನಿಮ್ಮ ಜೊತೆ ನಿಂತಿರುವ ಲಕ್ಷಾಂತರ ಹೋರಾಟಗಾರರು ಮತ್ತು ಅದರಲ್ಲಿ ನಾನು ಒಬ್ಬನಾಗಿದ್ದೇನೆ. ನಿಮ್ಮ ಈ ಜನ್ಮದಿನ ನಿಮ್ಮ ಹೋರಾಟದ ಮುಖ್ಯ ಜನ್ಮದಿನವಾಗಿ ಮೂಡಿಬರಲಿದೆ. ಇಲ್ಲಿಂದ ಮುಂದೆ ಏನೇ ಆಗಲಿ ನಿಮ್ಮ ಹೋರಾಟದೊಂದಿಗೆ ನಾನು ಮತ್ತು ಲಕ್ಷಾಂತರ ಜನರು ನಿಂತೇ ನಿಲ್ಲುತ್ತೇವೆ. ನಿಮಗೆ ಜನ್ಮದಿನದ ಶುಭಾಶಯಗಳು. ಜೈ ಭಾರತ್, ಜೈಭೀಮ್” ಎಂದು ಕಿರಣ್ ಶ್ರೀನಿವಾಸ್ ಹೇಳಿದ್ದಾರೆ.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್‌ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ. ಅವರ ಜಾಮೀನು ವಿಚಾರನೆಯ ವಾದಗಳು ಮುಗಿದಿದ್ದು ಫೆಬ್ರವರಿ 25 ರಂದು ತೀರ್ಪು ಹೊರಬರಲಿದೆ.


ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...