Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....