Homeಮುಖಪುಟಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

ಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾವು ಎರಡನೇ ದಿನವೂ ಮಿಲಿಟರಿ ಕಾರ್ಯಾಚರಣೆ ಮುಂದುವರೆಸಿದ್ದು ರಾಜಧಾನಿ ಕೈವ್‌ವರೆಗೂ ತಲುಪಿದೆ ಎನ್ನಲಾಗಿದೆ. ರಾಜಧಾನಿಯಲ್ಲಿ ಎರಡು ಸ್ಫೋಟಗಳಾದ ವರದಿಯಾಗಿದ್ದು,  ಗುರುವಾರದಿಂದ ಕನಿಷ್ಠ 137 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಹೇಳಿದೆ

ಶುಕ್ರವಾರ ಮುಂಜಾನೆ ಕೇಂದ್ರ ಕೈವ್‌ನಲ್ಲಿ ಎರಡು ದೊಡ್ಡ ಸ್ಫೋಟಗಳು ಕೇಳಿಬಂದವು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಕೈವ್‌ನ ನಾಗರಿಕ ಪ್ರದೇಶಗಳ ಮೇಲೆ ರಷ್ಯಾ ಗುಂಡು ಹಾರಿಸಿದೆ ಆದರೆ ಉಕ್ರೇನ್‌ನ ವಾಯುಸೇನೆಯು ತಿರುಗೇಟು ನೀಡಿದೆ ಎಂದು ಉಕ್ರೇನ್ ಸೇನೆಯು ಹೇಳಿಕೊಂಡಿದೆ.

“ಕೈವ್ ಮೇಲೆ ಭಯಾನಕ ರಷ್ಯಾದ ರಾಕೆಟ್ ದಾಳಿಗಳು ನಡೆಯುತ್ತಿವೆ. ಕಳೆದ ಬಾರಿ ನಮ್ಮ ರಾಜಧಾನಿಯು 1941 ರಲ್ಲಿ ನಾಜಿ ಜರ್ಮನಿಯಿಂದ ದಾಳಿಗೊಳಗಾದಾಗ ಈ ರೀತಿಯ ಪರಿಸ್ಥಿತಿಯನ್ನು ಅನುಭವಿಸಿತು. ಉಕ್ರೇನ್ ಆ ದುಷ್ಟರನ್ನು ಸೋಲಿಸಿತು ಮತ್ತು ಇದನ್ನೂ ಸೋಲಿಸುತ್ತದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎರಡನೆಯ ಮಹಾಯುದ್ಧದ ನಂತರ ಯುರೋಪಿಯನ್ ರಾಜ್ಯದ ಮೇಲೆ ನಡೆದ ಅತಿದೊಡ್ಡ ದಾಳಿಯಲ್ಲಿ ರಷ್ಯಾದ ಆಕ್ರಮಣಕಾರರ ವಿರುದ್ಧ ತನ್ನ ಪಡೆಗಳು ಹೋರಾಡುತ್ತಿರುವಾಗ ತಾನು ಸಹ ರಾಜಧಾನಿ ಕೈವ್‌ನಲ್ಲಿ ಉಳಿಯುವುದಾಗಿ ಪ್ರತಿಜ್ಞೆ ಮಾಡಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.  ಶತ್ರುಗಳು ನನ್ನನ್ನು ನಂಬರ್ ಒನ್ ಗುರಿ, ನನ್ನ ಕುಟುಂಬ ಎರಡನೇ ಗುರಿ ಎಂದು ಪರಿಗಣಿಸಿದ್ದಾರೆ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಎಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿ, “ತಕ್ಷಣ ಹಿಂಸಾಚಾರವನ್ನು ನಿಲ್ಲಿಸುವಂತೆ” ಮನವಿ ಮಾಡಿದರು ಎಂದು ವರದಿಯಾಗಿದೆ.

ಉಕ್ರೇನ್‌ನಲ್ಲಿ ಜನಾಂಗೀಯ ಹತ್ಯೆಗೆ ಒಳಗಾದ ರಷ್ಯಾದ ನಾಗರಿಕರು ಸೇರಿದಂತೆ ಜನರನ್ನು ರಕ್ಷಿಸಲು ರಷ್ಯಾ “ವಿಶೇಷ ಮಿಲಿಟರಿ ಕಾರ್ಯಾಚರಣೆ” ನಡೆಸುತ್ತಿದೆ ಎಂದು ಪುಟಿನ್ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.


ಇದನ್ನೂ ಓದಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...