HomeಮುಖಪುಟNSE ಮಾಜಿ ಉನ್ನತ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧಿಸಿದ CBI

NSE ಮಾಜಿ ಉನ್ನತ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧಿಸಿದ CBI

- Advertisement -
- Advertisement -

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (NSE) ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್‌ ಆನಂದ್ ಸುಬ್ರಮಣಿಯನ್ ಅವರನ್ನು 2018 ರಲ್ಲಿ ಷೇರುಗಳನ್ನು ತಿರುಚಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. “ಗುರುವಾರ ತಡರಾತ್ರಿ ಚೆನ್ನೈನಲ್ಲಿ ಅಧಿಕಾರಿಗಳ ತಂಡ ಸುಬ್ರಮಣಿಯನ್ ಅವರನ್ನು ಬಂಧಿಸಿದೆ. ಇಂದು ಅವರನ್ನು ಸಕ್ಷಮ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಿಬಿಐ ಫೆಬ್ರವರಿ 21 ರಂದು ಮೂರು ದಿನಗಳ ಕಾಲ ಸುಬ್ರಮಣಿಯನ್ ಅವರನ್ನು ವಿಚಾರಣೆ ನಡೆಸಿ ತನ್ನ ವಿಚಾರಣೆಯನ್ನು ಅಂತ್ಯಗೊಳಿಸಿತ್ತು. ಸಿಬಿಐ ಈಗಾಗಲೇ NSEನ ಮಾಜಿ ಎಂಡಿ-ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಸಿಇಒ ರವಿ ನರೇನ್‌ ಅವರನ್ನು ಪ್ರಶ್ನಿಸಿತ್ತು. ಚಿತ್ರಾ ರಾಮಕೃಷ್ಣ ಅವರ ವಿಚಾರಣೆ ಕಳೆದ ಶುಕ್ರವಾರ ನಡೆದರೆ, ಶನಿವಾರ ರವಿ ನರೇನ್ ಅವರನ್ನು ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ: NSEಯ ಮಹಾ ಹಗರಣ: ಸಿಇಒ ಚಿತ್ರಾ ರಾಮಕೃಷ್ಣರನ್ನು ಕೈಗೊಂಬೆ ಮಾಡಿಕೊಂಡಿದ್ದ ‘ಯೋಗಿ’ ಯಾರು? 

ಈ ವಾರದ ಆರಂಭದಲ್ಲಿ, ಸಿಬಿಐ ತಂಡವು ಮುಂಬೈನಲ್ಲಿರುವ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿದೆ.

ಸಿಬಿಐ ಪ್ರಕಾರ, ಸೆಬಿ ವರದಿಯ ಹಿನ್ನಲೆಯಲ್ಲಿ ವಿಚಾರಣೆಗಳನ್ನು ಮಾಡಲಾಗುತ್ತಿದೆ. NSE ವಿಚಾರವಾಗಿ ಚಿತ್ರಾ ಅವರು “ಹಿಮಾಲಯದ ಯೋಗಿ” ಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದು, ನಿಯಮಗಳಿಗೆ ವಿರುದ್ಧವಾಗಿ ಆನಂದ್‌ ಸುಬ್ರಮಣಿಯನ್ ಅವರ ನೇಮಕಾತಿ ಮಾಡಿದ್ದಾರೆ ಎಂದು ದೋಷಾರೋಪಣೆ ಮಾಡಲಾಗಿದೆ.

ಆನಂದ್‌ ಸುಬ್ರಮಣಿಯನ್ ಅವರನ್ನು ಜಿಒಒ ಮತ್ತು ಎಂಡಿ ಸಲಹೆಗಾರರನ್ನಾಗಿ ನೇಮಿಸುವಲ್ಲಿ ಸೆಕ್ಯುರಿಟೀಸ್ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಚಿತ್ರಾ ಮತ್ತು ಇತರ ಕೆಲವರಿಗೆ ಸೆಬಿ ಎರಡು ವಾರಗಳ ಹಿಂದೆ ದಂಡ ವಿಧಿಸಿತ್ತು. ಆನಂದ್‌ ಸುಬ್ರಮಣಿಯನ್ ಅವರ ನೇಮಕಾತಿ ಮಾಡುವಂತೆ ತನಗೆ ಒಬ್ಬ “ಯೋಗಿ” ಸಲಹೆ ನೀಡಿದ್ದರು ಎಂದು ಚಿತ್ರಾ ಸೆಬಿ ತನಿಖೆಯನ್ನು ಹೇಳಿದ್ದಾರೆ. ಆನಂದ್‌ ಸುಬ್ರಮಣಿಯನ್ ಅವರೇ ಈ ಅಪರಿಚಿತ ಯೋಗಿ ಆಗಿದ್ದರು ಎಂದು ಕೂಡಾ ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜನಾಥ್ ಸಿಂಗ್‌ ಮಾತು ಕಡೆಗಣಿಸಿ ಮತ್ತೆ ಜಿನ್ನಾ ಹೆಸರು ಬಳಸಿದ ಸಿಎಂ ಯೋಗಿ ಆದಿತ್ಯನಾಥ್

ಈ ವರದಿಯ ನಂತರ, ಆದಾಯ ತೆರಿಗೆ ಇಲಾಖೆಯು NSE ಆಂತರಿಕ ವಿಚಾರವನ್ನು ಹೊರಗಿನ ವ್ಯಕ್ತಿಗೆ ಮಾಹಿತಿ ರವಾನಿಸುವ ಮೂಲಕ ಅಕ್ರಮ ಲಾಭ ಮಾಡಿದ್ದಾರೆ ಎಂಬ ಆರೋಪ ಮೇಲೆ ಚಿತ್ರಾ ಮತ್ತು ಆನಂದ್‌ ಸುಬ್ರಮಣಿಯನ್ ಅವರ ನಿವಾಸಗಳಲ್ಲಿ ಶೋಧ ನಡೆಸಿತ್ತು.

NSE ಯಲ್ಲಿ ಕೆಲವು ದಳ್ಳಾಳಿಗಳಿಗೆ ಅನುಕೂಲವಾಗಿವಂತೆ ವ್ಯವಸ್ಥೆ ಮಾಡಿಕೊಡಲಾಗಿತ್ತು ಎಂದು 2018 ರಲ್ಲಿ ಪ್ರಕರಣ ದಾಖಲಾಗಿತ್ತು. ದೆಹಲಿ ಮೂಲದ ಒಪಿಜಿ ಸೆಕ್ಯುರಿಟೀಸ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಮತ್ತು ಪ್ರವರ್ತಕ ಸಂಜಯ್ ಗುಪ್ತಾ ಮತ್ತು ಇತರರ ವಿರುದ್ಧ ಕೂಡಾ ಸಿಬಿಐ ಪ್ರಕರಣ ದಾಖಲಿಸಿದೆ.

2010 ಮತ್ತು 2014 ರ ನಡುವೆ, ಸಂಜಯ್‌ ಗುಪ್ತಾ NSEಯ ಸರ್ವರ್ ಆರ್ಕಿಟೆಕ್ಚರ್ ಅನ್ನು ದುರುಪಯೋಗಪಡಿಸಿಕೊಂಡು, NSE ಯ ಅಪರಿಚಿತ ಅಧಿಕಾರಿಗಳೊಂದಿಗೆ ಕ್ರಿಮಿನಲ್ ಪಿತೂರಿ ನಡೆಸಿದ್ದು, ಸೆಬಿ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂದು ಸಿಬಿಐ ಹೇಳಿದೆ.

ಚಿತ್ರಾ ರಾಮಕೃಷ್ಣ ಅವರು ಏಪ್ರಿಲ್ 2013 ರಿಂದ ಡಿಸೆಂಬರ್ 2016 ರವರೆಗೆ NSEಯ ಎಂಡಿ ಮತ್ತು ಸಿಇಒ ಆಗಿದ್ದರು, ನರೇನ್ ಅವರು ಏಪ್ರಿಲ್ 1994 ರಿಂದ ಮಾರ್ಚ್ 2013 ರವರೆಗೆ ಆ ಹುದ್ದೆಯಲ್ಲಿದ್ದರು.

ಇದನ್ನೂ ಓದಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...