HomeಮುಖಪುಟNSE ಮಾಜಿ ಉನ್ನತ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧಿಸಿದ CBI

NSE ಮಾಜಿ ಉನ್ನತ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧಿಸಿದ CBI

- Advertisement -
- Advertisement -

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (NSE) ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್‌ ಆನಂದ್ ಸುಬ್ರಮಣಿಯನ್ ಅವರನ್ನು 2018 ರಲ್ಲಿ ಷೇರುಗಳನ್ನು ತಿರುಚಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. “ಗುರುವಾರ ತಡರಾತ್ರಿ ಚೆನ್ನೈನಲ್ಲಿ ಅಧಿಕಾರಿಗಳ ತಂಡ ಸುಬ್ರಮಣಿಯನ್ ಅವರನ್ನು ಬಂಧಿಸಿದೆ. ಇಂದು ಅವರನ್ನು ಸಕ್ಷಮ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಿಬಿಐ ಫೆಬ್ರವರಿ 21 ರಂದು ಮೂರು ದಿನಗಳ ಕಾಲ ಸುಬ್ರಮಣಿಯನ್ ಅವರನ್ನು ವಿಚಾರಣೆ ನಡೆಸಿ ತನ್ನ ವಿಚಾರಣೆಯನ್ನು ಅಂತ್ಯಗೊಳಿಸಿತ್ತು. ಸಿಬಿಐ ಈಗಾಗಲೇ NSEನ ಮಾಜಿ ಎಂಡಿ-ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಸಿಇಒ ರವಿ ನರೇನ್‌ ಅವರನ್ನು ಪ್ರಶ್ನಿಸಿತ್ತು. ಚಿತ್ರಾ ರಾಮಕೃಷ್ಣ ಅವರ ವಿಚಾರಣೆ ಕಳೆದ ಶುಕ್ರವಾರ ನಡೆದರೆ, ಶನಿವಾರ ರವಿ ನರೇನ್ ಅವರನ್ನು ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ: NSEಯ ಮಹಾ ಹಗರಣ: ಸಿಇಒ ಚಿತ್ರಾ ರಾಮಕೃಷ್ಣರನ್ನು ಕೈಗೊಂಬೆ ಮಾಡಿಕೊಂಡಿದ್ದ ‘ಯೋಗಿ’ ಯಾರು? 

ಈ ವಾರದ ಆರಂಭದಲ್ಲಿ, ಸಿಬಿಐ ತಂಡವು ಮುಂಬೈನಲ್ಲಿರುವ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿದೆ.

ಸಿಬಿಐ ಪ್ರಕಾರ, ಸೆಬಿ ವರದಿಯ ಹಿನ್ನಲೆಯಲ್ಲಿ ವಿಚಾರಣೆಗಳನ್ನು ಮಾಡಲಾಗುತ್ತಿದೆ. NSE ವಿಚಾರವಾಗಿ ಚಿತ್ರಾ ಅವರು “ಹಿಮಾಲಯದ ಯೋಗಿ” ಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದು, ನಿಯಮಗಳಿಗೆ ವಿರುದ್ಧವಾಗಿ ಆನಂದ್‌ ಸುಬ್ರಮಣಿಯನ್ ಅವರ ನೇಮಕಾತಿ ಮಾಡಿದ್ದಾರೆ ಎಂದು ದೋಷಾರೋಪಣೆ ಮಾಡಲಾಗಿದೆ.

ಆನಂದ್‌ ಸುಬ್ರಮಣಿಯನ್ ಅವರನ್ನು ಜಿಒಒ ಮತ್ತು ಎಂಡಿ ಸಲಹೆಗಾರರನ್ನಾಗಿ ನೇಮಿಸುವಲ್ಲಿ ಸೆಕ್ಯುರಿಟೀಸ್ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಚಿತ್ರಾ ಮತ್ತು ಇತರ ಕೆಲವರಿಗೆ ಸೆಬಿ ಎರಡು ವಾರಗಳ ಹಿಂದೆ ದಂಡ ವಿಧಿಸಿತ್ತು. ಆನಂದ್‌ ಸುಬ್ರಮಣಿಯನ್ ಅವರ ನೇಮಕಾತಿ ಮಾಡುವಂತೆ ತನಗೆ ಒಬ್ಬ “ಯೋಗಿ” ಸಲಹೆ ನೀಡಿದ್ದರು ಎಂದು ಚಿತ್ರಾ ಸೆಬಿ ತನಿಖೆಯನ್ನು ಹೇಳಿದ್ದಾರೆ. ಆನಂದ್‌ ಸುಬ್ರಮಣಿಯನ್ ಅವರೇ ಈ ಅಪರಿಚಿತ ಯೋಗಿ ಆಗಿದ್ದರು ಎಂದು ಕೂಡಾ ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜನಾಥ್ ಸಿಂಗ್‌ ಮಾತು ಕಡೆಗಣಿಸಿ ಮತ್ತೆ ಜಿನ್ನಾ ಹೆಸರು ಬಳಸಿದ ಸಿಎಂ ಯೋಗಿ ಆದಿತ್ಯನಾಥ್

ಈ ವರದಿಯ ನಂತರ, ಆದಾಯ ತೆರಿಗೆ ಇಲಾಖೆಯು NSE ಆಂತರಿಕ ವಿಚಾರವನ್ನು ಹೊರಗಿನ ವ್ಯಕ್ತಿಗೆ ಮಾಹಿತಿ ರವಾನಿಸುವ ಮೂಲಕ ಅಕ್ರಮ ಲಾಭ ಮಾಡಿದ್ದಾರೆ ಎಂಬ ಆರೋಪ ಮೇಲೆ ಚಿತ್ರಾ ಮತ್ತು ಆನಂದ್‌ ಸುಬ್ರಮಣಿಯನ್ ಅವರ ನಿವಾಸಗಳಲ್ಲಿ ಶೋಧ ನಡೆಸಿತ್ತು.

NSE ಯಲ್ಲಿ ಕೆಲವು ದಳ್ಳಾಳಿಗಳಿಗೆ ಅನುಕೂಲವಾಗಿವಂತೆ ವ್ಯವಸ್ಥೆ ಮಾಡಿಕೊಡಲಾಗಿತ್ತು ಎಂದು 2018 ರಲ್ಲಿ ಪ್ರಕರಣ ದಾಖಲಾಗಿತ್ತು. ದೆಹಲಿ ಮೂಲದ ಒಪಿಜಿ ಸೆಕ್ಯುರಿಟೀಸ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಮತ್ತು ಪ್ರವರ್ತಕ ಸಂಜಯ್ ಗುಪ್ತಾ ಮತ್ತು ಇತರರ ವಿರುದ್ಧ ಕೂಡಾ ಸಿಬಿಐ ಪ್ರಕರಣ ದಾಖಲಿಸಿದೆ.

2010 ಮತ್ತು 2014 ರ ನಡುವೆ, ಸಂಜಯ್‌ ಗುಪ್ತಾ NSEಯ ಸರ್ವರ್ ಆರ್ಕಿಟೆಕ್ಚರ್ ಅನ್ನು ದುರುಪಯೋಗಪಡಿಸಿಕೊಂಡು, NSE ಯ ಅಪರಿಚಿತ ಅಧಿಕಾರಿಗಳೊಂದಿಗೆ ಕ್ರಿಮಿನಲ್ ಪಿತೂರಿ ನಡೆಸಿದ್ದು, ಸೆಬಿ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂದು ಸಿಬಿಐ ಹೇಳಿದೆ.

ಚಿತ್ರಾ ರಾಮಕೃಷ್ಣ ಅವರು ಏಪ್ರಿಲ್ 2013 ರಿಂದ ಡಿಸೆಂಬರ್ 2016 ರವರೆಗೆ NSEಯ ಎಂಡಿ ಮತ್ತು ಸಿಇಒ ಆಗಿದ್ದರು, ನರೇನ್ ಅವರು ಏಪ್ರಿಲ್ 1994 ರಿಂದ ಮಾರ್ಚ್ 2013 ರವರೆಗೆ ಆ ಹುದ್ದೆಯಲ್ಲಿದ್ದರು.

ಇದನ್ನೂ ಓದಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...