Homeಕರ್ನಾಟಕಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಮೈಸೂರು ವಿವಿ: ಸಂಶೋಧಕರಿಗಿಲ್ಲ ಹಾಸ್ಟೆಲ್‌; ಚಾಪೆ, ದಿಂಬಿನೊಂದಿಗೆ ಪ್ರತಿಭಟನೆ

ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ವ್ಯವಸ್ಥೆ ಇಲ್ಲವಾಗಿದೆ. ಹಾಸ್ಟೆಲ್‌ನಲ್ಲಿ ಕೊಠಡಿ ಕೊರತೆ ಇರುವುದೇ ಸಮಸ್ಯೆಗೆ ಕಾರಣ ಎಂದು ಡೀನ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸಿಸ್ಟ್‌ ಪ್ರವೇಶಾತಿ ಪಡೆದವರಿಗೆ ಹಾಸ್ಟೆಲ್‌ ಸೌಲಭ್ಯ ನೀಡಿಲ್ಲ” ಎಂದು ಮೈಸೂರು ವಿವಿ ಸಂಶೋಧನಾರ್ಥಿಗಳು ಹಾಗೂ ಸಿಸ್ಟ್‌ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಚಾಪೆ, ದಿಂಬಿನೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಸೇರಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಎಸ್‌.ಮರಿದೇವಯ್ಯ ಮಾತನಾಡಿ, “ಸಿಸ್ಟ್‌ಗೆ ಪ್ರವೇಶಾತಿ ಪಡೆದಿರುವ 150 ವಿದ್ಯಾರ್ಥಿಗಳಿಗೆ, ಸಂಶೋಧನಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಡೀನ್‌‌ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

“ಹಾಸ್ಟೆಲ್‌ ಪ್ರವೇಶಾತಿಗಾಗಿ ಕಳೆದ ನಾಲ್ಕೈದು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾಗಿರುವ ಡಾ.ರಾಮಚಂದ್ರ ಅವರೇ ಈ ಅವಾಂತರಗಳಿಗೆ ಕಾರಣ. ಹೀಗಾಗಿ ರಾಮಚಂದ್ರ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಹಲವು ಭಾರಿ ಪ್ರತಿಭಟನೆ ಮಾಡಲಾಗಿದೆ.  ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ದುರ್ಬಲವಾಗಿದೆ. ಎಲ್ಲರನ್ನು ಹೆದರಿಸುವ ಗೂಂಡಾಗಿರಿಯನ್ನು ರಾಮಚಂದ್ರ ಅವರು ಮಾಡುತ್ತಿದ್ದಾರೆ. ಈಗಲೂ ಕೂಡ ಹೀಗೆಯೇ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಕೂಡಲೇ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭ್ರಷ್ಟ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗೆ ಹಾಗೂ ಭ್ರಷ್ಟ ವಿವಿಗೆ ಧಿಕ್ಕಾರ” ಎಂದು ಹಾಸ್ಟೆಲ್‌ ವಂಚಿತ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ.

ವಿದ್ಯಾರ್ಥಿಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್‌.ಟಿ.ರಾಮಚಂದ್ರ ಅವರು, ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈಗ ಹೆಚ್ಚಾಗಿದೆ. ಸಿಸ್ಟ್‌ನವರಿಗೆ ಪ್ರವೇಶಾತಿ ನೀಡಲು ಕೊಠಡಿಗಳ ಕೊರತೆ ಇದೆ. ಈಗ ಇರುವ ಕೊಠಡಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಲಾಗಿದೆ” ಎಂದು ತಿಳಿಸಿದರು.

“ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿದ್ಧವಾಗುತ್ತಿದೆ. ಹೊಸ ಹಾಸ್ಟೆಲ್‌ ಮುಂದಿನ ತಿಂಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಸಿಸ್ಟ್‌ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕೊಡಲು ಕೊಠಡಿಗಳಿಲ್ಲ. ಹಿಂದಿನ ವರ್ಷಗಳಲ್ಲಿ ಮಾಸ್ಟರ್‌ ಡಿಗ್ರಿ ಪ್ರವೇಶಾತಿ ಕಡಿಮೆ ಇತ್ತು. ಹೀಗಾಗಿ ಸಿಸ್ಟ್‌ನವರಿಗೆ ಪ್ರವೇಶಾತಿಯನ್ನು ನೀಡಲಾಗಿತ್ತು” ಎಂದರು.

“ಬಹುತೇಕರು ಮಾಸ್ಟರ್ ಡಿಗ್ರಿ ಮುಗಿಸಿಕೊಂಡು ಡಿಪ್ಲೊಮೊ ಸೇರಿದ್ದಾರೆ. ಆದರೆ ಸ್ನಾತಕೋತ್ತರ ಪದವಿ ಸೇರುತ್ತಿರುವವರಿಗೆ ಮೊದಲ ಆದ್ಯತೆ ನೀಡಬೇಕು. ಪ್ರವೇಶಾತಿ ಹೆಚ್ಚಿದಂತೆ ಹಾಸ್ಟೆಲ್‌ಗಳ ಮೇಲೆ ಒತ್ತಡವೂ ಹೆಚ್ಚುತ್ತದೆ. ಹೊಸ ಹಾಸ್ಟೆಲ್‌ಗಳ ಅಗತ್ಯವಿದೆ. ಇರುವ ಹಾಸ್ಟೆಲ್‌ನಲ್ಲಿಯೇ ಪ್ರವೇಶಾತಿ ನೀಡುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

ಹಾಸ್ಟೆಲ್‌ಗಳ ಸಾಮಾರ್ಥ್ಯದ ಕುರಿತು ಮಾಹಿತಿ ನೀಡಿದ ಅವರು, “ಬಾಯ್ಸ್‌ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌-1ರಲ್ಲಿ 232 ಕೊಠಡಿ ಇದೆ. 270 ಜನರಿಗೆ ಪ್ರವೇಶಾತಿ ನೀಡಬಹುದು. 427 ಜನರಿಗೆ ನೀಡಲಾಗಿದೆ. ಬ್ಲಾಕ್‌ 2ರಲ್ಲಿ 228 ಕೊಠಡಿಗಳಿವೆ. ಕಚೇರಿ ಉಪಯೋಗಕ್ಕೆ ಕೆಲವು ಕೊಠಡಿ ಬಳಸಲಾಗುತ್ತಿದೆ. 220 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬಹುದು. ಆದರೆ 330 ಜನರನ್ನು ತುಂಬಿದ್ದೇವೆ. ಬ್ಲಾಕ್‌ 3ರಲ್ಲಿ 38 ರೂಮ್‌ಗಳಿವೆ. ಆರು ಜನರನ್ನು ಒಂದು ಕೊಠಡಿಗೆ ತುಂಬಬಹುದು. ಒಟ್ಟು 180 ಜನರಿಗೆ ಪ್ರವೇಶಾತಿ ನೀಡಬೇಕು. ನಾವು 232 ಜನರಿಗೆ ನೀಡಿದ್ದೇವೆ. ಗರ್ಲ್ಸ್ ಹಾಸ್ಟೆಲ್‌ಗಳ ಪೈಕಿ ಬ್ಲಾಕ್‌ 1ರಲ್ಲಿ 146 ಕೊಠಡಿಗಳಿವೆ. 420 ಜನರಿಗೆ ಪ್ರವೇಶಾತಿ ನೀಡಬಹುದು, 455 ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 2ರಲ್ಲಿ 120 ರೂಮ್‌ಗಳಿವೆ. 275 ಜನರಿಗೆ ಪ್ರವೇಶಾತಿ ನೀಡಬಹುದು, 375 ವಿದ್ಯಾರ್ಥಿನಿಯರಿಗೆ ಪ್ರವೇಶಾತಿ ನೀಡಿದ್ದೇವೆ. ಬ್ಲಾಕ್‌ 3ರಲ್ಲಿ  46 ಕೊಠಡಿಗಳಿವೆ. ಆರು ಜನರು ಒಂದು ಕೊಠಡಿಯಲ್ಲಿ ಇರಬಹುದು. 280 ಜನರಿಗೆ ಪ್ರವೇಶ ನೀಡುವಲ್ಲಿ 323 ಜನರಿಗೆ ನೀಡಿದ್ದೇವೆ. ಇನ್ನು ಸಿಸ್ಟ್‌ನವರರನ್ನು ಎಲ್ಲಿಗೆ ತುಂಬಲಿ?” ಎಂದು ಪ್ರಶ್ನಿಸಿದರು.

“ಕಳೆದ ವರ್ಷ ಎಷ್ಟು ಪ್ರವೇಶಾತಿ ನೀಡಲಾಗಿದೆ” ಎಂಬುದನ್ನು ನಾನುಗೌರಿ.ಕಾಂ ಪರಿಶೀಲಿಸಲು ಯತ್ನಿಸಿದೆ. ಮಾಹಿತಿ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...