Homeಅಂಕಣಗಳುಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

ಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

- Advertisement -
- Advertisement -

ಅಟ್ಯಾಕ್ ಹನ್ಮಂತ |

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ.

ಮಿಷಿನ್ 150, ಮಿಷಿನ್ 150 ಎಂದು ಹೋದಲ್ಲಿ ಬಂದಲ್ಲಿ ಊಳಿಡುತ್ತಿದ್ದ ಬಿಜೇಪೀಪಿ ಪಕ್ಷದ ಧಡಿಯೂರಪ್ಪನ ಮುಸುಡಿಗೆ ಕರ್ನಾಟಕದ ಮತದಾರರು ಎಗರಿಸಿ ಎಡಗಾಲಲ್ಲಿ ಒದ್ದಿರುವ ಸುದ್ದಿ ಇದೀಗಷ್ಟೇ ಲಭ್ಯವಾಗಿದೆ. 150 ಮಿಷೀನು ಅಡ್ಡಡ್ಡ ಮಲಗಿಕೊಂಡು 104 ಸೀಟುಗಳನ್ನ ಮಾತ್ರ ಗೆಲ್ಲಲು ಶಕ್ತವಾದ ಧಡಿಯೂರಪ್ಪನ ಗೋಳಾಟ ಚಾಮರಾಜಪೇಟೆ ಸ್ಮಶಾಣದವರೆಗೂ ತಲುಪಿದೆ. ಅಲ್ಲೇ ಸ್ಮಶಾಣದ ಪಕ್ಕದಲ್ಲಿ `ಹೇ ಶವ ಕೃಪ’ ಎಂಬ ಲಡಾಸು ಮುದುಕರ ಅನಾಥಾಶ್ರಮದಲ್ಲಿ ಚೌಕಾಬಾರ ಆಡುತ್ತಿದ್ದ ಕಂತ್ರಿ-ಕುತಂತ್ರಿಗಳಿಗೂ ಹಾರ್ಟ್ ಅಟ್ಯಾಕ್ ಆಗಿ, ಜೈ ಶ್ರೀಮಾಮ್ ಎಂಬ ಉದ್ಘೋಷದೊಂದಿಗೆ ತಲೆತಿರುಗಿ ಬಿದ್ದಿದ್ದಾರೆಂದು ಬ್ರೇಕಿಂಗ್ ನ್ಯೂಸ್ ಲಭ್ಯವಾಗಿದೆ.

* * * * *

ಬಡವರ ಪರವಾದ ಹತ್ತಾರು ಯೋಜನೆಗಳನ್ನು ಕೊಟ್ಟು, ಸಮಾಜವಾದದ ಆಲದಮರದಂತೆ ಗಟ್ಟಿಯಾಗಿ ನಿಂತಿದ್ದ ಶಿದ್ರಾಮಯ್ಯನ ಪಾರ್ಟಿಗೂ ಈ ಚುನಾವಣೆಯಲ್ಲಿ ಜನರ ಆಶೀರ್ವಾದ ಅರ್ಧಕ್ಕರ್ಧ ಸಿಕ್ಕಿರುವುದು ಆಶ್ಚರ್ಯ ಹುಟ್ಟಿಸಿದೆ. ಎತ್ತಲೂ ಇಲ್ಲದಂತೆ ಇರೋ ಮೂರು ಪಾರ್ಟಿಗಳಿಗೂ ಇಷ್ಟಿಷ್ಟು ಎಂದು ಓಟು ಹಂಚಿರುವ ಮತದಾರರ ಪ್ಲಾನು ಅಸಲಿಗೆ ಏನಾಗಿತ್ತೆಂಬುದು ಯಾರಿಗೂ ತಿಳಿಯದೆ ಎಲ್ಲರೂ ಅವರವರ ಸ್ವಂತ ತಲೆಯ ಮೇಲೆ ಅವರದ್ದೇ ಕೈ ಹೊತ್ತುಕೊಂಡು ಕುಂತಿರುವ ಸನ್ನಿವೇಶ ನಿರ್ಮಾಣವಾಗಿದೆ. ಆಗಿದ್ದಾಗಲೆಂದು ಕೈ ಪಾರ್ಟಿ ಮತ್ತು ದೊಡ್ಡಗೌಡರ ಪಾರ್ಟಿಯು ಫ್ರೆಂಡ್ಶಿಪ್ ಮಾಡಿಕೊಂಡು ಬಿಜೆಪೀಪಿ ಪಕ್ಷಕ್ಕೆ ಈ ಸಲ ಉಣ್ಣಬಾರದ್ದನ್ನು ಉಣ್ಣಿಸೋಣವೆಂದು ತೊಡೆ ತಟ್ಟಿ ನಿಂತ ಸಂದರ್ಭವೂ ಜನರಲ್ಲಿ ಆತಂಕಭರಿತ ಸಂತೋಷವನ್ನು ಹುಟ್ಟಿಸಿದೆ.

* * * * *

ನಾನು ಗೆದ್ದರೆ ಮೋದಿ ಗೆದ್ದಂತೆ, ನಾನು ಗೆದ್ದರೆ ಹಿಂದೂ ಗೆದ್ದಂತೆ, ನಾನು ಗೆದ್ದರೆ ಗುಡೇಮಾರನಳ್ಳಿ ಬಾರ್ ಸಪ್ಲೈಯರ್ ಯಂಕಟಣ್ಣ ಗೆದ್ದಂತೆ ಅಂತ ಕೂಗಾಡಿಕೊಂಡು ತಿರುಗುತ್ತಿದ್ದ ಚಿತ್ರನಟ ಗುಗ್ಗೇಶ್ ಚುನಾವಣೆಯಲ್ಲಿ ಮಕಾಡೆ ಮಲಗಿಕೊಂಡಿದ್ದಾರೆ. ಮೊದಲಿಗೆ ಕೈ ಪಕ್ಷದಲ್ಲಿದ್ದು ನಂತರ ವ್ಯಾಸೆಕ್ಟಮಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡು ಬಿಜೆಪೀಪಿಗೆ ಪಲ್ಟಿ ಹೊಡೆದಿದ್ದ ನಟ ಗುಗ್ಗೇಶ್ ಪೃಷ್ಠಕ್ಕೆ ಬೆಂಗಳೂರಿನ ಯಶವಂತಪುರದ ಮತದಾರರು ಹಾರೆಕೋಲು ಹೆಟ್ಟಿದ್ದಲ್ಲದೇ ಗಾಯಕ್ಕೆ ಬ್ಯಾಂಡೇಜನ್ನೂ ಹಾಕಿಸದೆ ಮನೆಗೆ ಕಳಿಸಿದ್ದಾರೆ. ಎಲ್ಲ ರಾಯರ ಆಶೀರ್ವಾದ ಅಂತ ತಮ್ಮ ಹೀನಾಯ ಸೋಲನ್ನು ಮಂತ್ರಾಲಯಕ್ಕೆ ಅರ್ಪಿಸಿರುವ ಗುಗ್ಗೇಶ್ ಸದ್ಯಕ್ಕೆ ಯಾರಿಗೂ ಮುಖ ತೋರಿಸುವುದು ಬೇಡವೆಂದು ಆಫಘನಿಸ್ಥಾನಕ್ಕೆ ಬೊಬ್ಬೆಯೆದ್ದ ಕಾಲುಗಳಲ್ಲಿ ಪಾದಯಾತ್ರೆ ಹೊರಟಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

* * * * *

ಗೋವಾ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ ಇವೆಲ್ಲ ಕಡೆಗಳಲ್ಲಿ ಜುಜುಬಿ ಸೀಟು ಗೆದ್ದ ಬಿಜೆಪೀಪಿ ಪಕ್ಷವು ಒಬ್ಬನಿಗೇ ಹುಟ್ಟಿದ ಹಲ್ಕಾ ಆಟವಾಡಿ ಆ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವುದನ್ನು ಮರೆತಂತೆ ಕಾಣುತ್ತಿದೆಯೆಂದು ಹಾದಿಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆಂಬ ಸುದ್ದಿ ಬಂದಿದೆ. ಅದೆಲ್ಲವನ್ನೂ ಮರೆತು, ಇದೀಗ ಕೈ ಮತ್ತು ತೆನೆಮಹಿಳೆ ಪಕ್ಷಗಳು ಒಟ್ಟಿಗೇ ಹೋಗುವುದನ್ನು ಸಹಿಸದ ಬಿಜೆಪೀಪಿ ಪಕ್ಷವು ಇದು ಹೊಲಸು ರಾಜಕೀಯ ಎಂದು ಅರಚಾಡುತ್ತಿದೆ. ಇದೇ ಹೊಲಸು ಸೆಗಣಿಯನ್ನು 4 ರಾಜ್ಯಗಳಲ್ಲಿ ಬಾಚಿಬಾಚಿ ತಿನ್ನುವಾಗ ಏನೂ ಅನ್ನಿಸದಿದ್ದ ಈ ಪಕ್ಷಕ್ಕೆ ಇದೀಗ ನಾಚಿಕೆ-ಮಾನ-ಮರ್ಯಾದೆಗಳು ಸಟಾರೆಂದು ನೆನಪಾಗಿರುವುದು ಜಗತ್ತಿನ 9ನೇ ಅದ್ಭುತ ಎಂದು ಭಾವೀ ಪ್ರಧಾನಿ `ಹುಚ್ಚ ಸಂಕಟ್’ ಅಳುತ್ತ ನುಡಿದಿದ್ದಾರೆ. ಈಗಿರುವ ಪಕೋಡೇಂದ್ರನನ್ನು ಕಿಡ್ನಾಪ್ ಮಾಡಿ ಅರಬ್ಬೀಸಮುದ್ರದಲ್ಲಿ ಬಚ್ಚಿಟ್ಟು ತಾನೇ ಪ್ರಧಾನಿಯಾಗುತ್ತೇನೆಂದು ಹೊರಟಿರುವ ಹುಚ್ಚ ಸಂಕಟ್ ಅವರ ಗೋಳಾಟಕ್ಕೆ ನಾಡಿನ ಎಲ್ಲ ಮಾನಸಿಕ ಅಸ್ವಸ್ಥರೂ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ.

* * * * *

ತಾನು ಈ ಬಾರಿ ಮುಖ್ಯಮಂತ್ರಿಯಾಗದೆ ಇದ್ದರೆ ನಿನ್ನ ಬುರುಡೆಗೆ ನನ್ನ ಬುರುಡೆಯನ್ನು ಜಜ್ಜಿ ಜಜ್ಜಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ ಧಡಿಯೂರಪ್ಪನನ್ನು ಸಂಭಾಳಿಸುವುದು ಹೇಗೆಂದು ತಿಳಿಯದೆ ಬಿಜೆಪೀಪಿ ಪಕ್ಷದ ಏಕೈಕ ಕುಮಾರಿ ಕೋಭಾ ಶರಂದ್ಲಾಜೆಯವರು ಚಿಂತೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಇದೇ ದುಃಖದಲ್ಲಿ ತನ್ನ ಸಂಕಟವನ್ನು ಚೀಟಿ ರವಿ ಜೊತೆಗೆ ವಾಟ್ಸಾಪ್ ಚಾಟ್ ಮಾಡುವಾಗ ಚೀಟಿ ರವಿಯು `ಚಿಂತೆ ಮಾಡಬೇಡ, ನಾನಿದ್ದೇನೆ… … …’ ಎಂದು ಕೋಭಕ್ಕನಿಗೆ ಪ್ರಾಮಿಸ್ ಮಾಡಿರುವುದು ಬಯಲಾಗಿದೆ. ಈ ವಾಟ್ಸಾಪ್ ಚಾಟ್‍ನ ಸ್ಕ್ರೀನ್ ಶಾಟನ್ನು ಯಾರೋ ದುರುಳರು ಧಡಿಯೂರಪ್ಪನಿಗೆ ಕಳಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

* * * * *

ಬಿಜೆಪೀಪಿಯ ವಯೋವೃದ್ಧ ಕೋಣದಂತಿರುವ ಗುಜರಾತಿ ಗುಜ್ಜೂವಾಲಾನನ್ನು ವ್ಯಾಜ್ಯಪಾಲನೆಂದು ಕರ್ನಾಟಕಕ್ಕೆ ಕುಕ್ಕರಿಸಿದ್ದ ಭಂಡಾಟ ಜನರ ಪಕ್ಷದವರು ಇದೀಗ ಅದೇ ವೃದ್ಧಕೋಣದ ಮೂಗಿಗೆ ಹಗ್ಗ ಹಾಕಿ ಕರ್ನಾಟಕದ ಗದ್ದುಗೆ ಹಿಡಿಯಲು ಮುಂದಾಗಿದ್ದಾರೆ. ಈ ಅವಕಾಶ ಕೈಜಾರಿ ಹೋಗಲು ಬಿಟ್ಟರೆ, ವೃದ್ದಾಪ್ಯದಲ್ಲಿ ಪುನರ್ವಸತಿ ಕಲ್ಪಿಸಿದ ತನ್ನವರ ಋಣ ತೀರಿಸಲು ಇದಕ್ಕಿಂತ ಸದಾವಕಾಶ ಈ ಜನ್ಮದಲ್ಲೇ ಮತ್ತೆ ಸಿಗುವುದಿಲ್ಲ ಎಂದು ಮನದಲ್ಲೇ ಲೆಕ್ಕ ಹಾಕಿದ ಈ ಗುಜ್ಜು ಋಣ ತೀರಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ಇವರ ಒಳಮರ್ಮ ಏನೆಂದು ಹಿನ್ನೆಲೆ ಕೆದಕಿ ನೋಡಲಾಗಿ ಈ ಆಸಾಮಿಯ ಜಾತಕವೂ, ಜೈಲುಹಕ್ಕಿಗಳ ಬ್ಲೂಜೇಪಿಗಳ ಜಾತಕವೂ ಒಂದೇ ಆಗಿದೆಯೆಂಬ ಮಾಹಿತಿ ಲಭ್ಯವಾಗಿದೆ.

* * * * *

ತಾನು ನಡೆಸಿದ ಕೊಲೆಗಳ ವಿರುದ್ಧ ತೀರ್ಪು ಕೊಡಲು ಹೊರಟ ನ್ಯಾಯಾಧೀಶರನ್ನೇ ಕೊಂದು ಬಿಸಾಕಿದ ಆರೋಪ ಹೊತ್ತಿರುವ ಗುಜರಾತ್ ಮಾರ್ವಾಡಿ, ಹಳೇ ರೌಡಿ ಶೀಟರ್ `ಸುಮಿತ್ ಶಾ’ ಕುದುರೆಲದ್ದಿ ವ್ಯಾಪಾರ ಮಾಡಲು ಕರ್ನಾಟಕಕ್ಕೆ ಬರುತ್ತಿರುವ ಸುದ್ದಿ ತಿಳಿದುಬಂದಿದೆ. ಈ ಸುದ್ದಿ ತಿಳಿದ ಕುಮಾರಣ್ಣನಿಗೆ ಪಿತ್ಥ ಕೆದರಿ ತಲೆಯೊಳಗಿನ ಹುಳುಗಳೆಲ್ಲ ಥಕಥಕಥಕನೆಂದು ಕುಣಿದು, ನನ್ನ ಪಕ್ಷದ ಒಬ್ಬನನ್ನು ಕದ್ದೊಯ್ದರೆ ಬಿಜೆಪೀಪಿಯ ಒಬ್ಬ ನರಪಿಳ್ಳೆಯನ್ನೂ ಬಿಡದೆ ಕಸತುಂಬಿಕೊಂಡು ಬಂದಂತೆ ಲಾರಿಯಲ್ಲಿ ಅಪಹರಿಸಿಬಿಡುತ್ತೇನೆಂದು ಗುಟುರು ಹಾಕಿದ್ದಾರೆ. ಈ ಗುಟುರಿಗೆ ಉಟ್ಟ ಲಂಗೋಟಿ ಒದ್ದೆ ಮಾಡಿಕೊಂಡ ಸುಮಿತ್‍ಶಾಗೆ ವಾಂತಿ-ಬೇಧಿ ಎರಡೂ ಒಟ್ಟಿಗೇ ಆದ ಸುದ್ದಿ ಇನ್ನೂ ಲಭ್ಯವಾಗಿಲ್ಲ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನೊಂದಷ್ಟು ಎದೆಯೊಡುವ ಸುದ್ದಿಗಳೊಂದಿಗೆ ಮತ್ತೆ ಮುಂದಿನ ವಾರ ಭೇಟಿಯಾಗೋಣ. ಜೈ ಶ್ರೀಮಾಮ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...