Homeಕರ್ನಾಟಕಮಾನವತಾವಾದಿ ಕವಿಯ ಕಣ್ಮರೆ

ಮಾನವತಾವಾದಿ ಕವಿಯ ಕಣ್ಮರೆ

- Advertisement -
- Advertisement -

ನಾನು ಎಂ.ಎ. ಕಲಿಯುವಾಗ ಗುರುಗಳಾದ ಜಿ.ಎಚ್. ನಾಯಕರು ತರಗತಿಗಳಲ್ಲಿ ಬೇಂದ್ರೆ ಮತ್ತು ಅಡಿಗರನ್ನು ವಿಶೇಷವಾಗಿ ಚರ್ಚಿಸುತ್ತಿದ್ದರು. ಕಣವಿ-ನರಸಿಂಹಸ್ವಾಮಿ ಮುಂತಾದವರನ್ನು ಪ್ರಸ್ತಾಪಿಸಿದರೂ ಅವರನ್ನು ಮೈನರ್ ಕವಿಗಳೆಂದು ಕರೆಯುತ್ತಿದ್ದರು. ಅದೊಂದು ಬಗೆಯಲ್ಲಿ ಗಂಭೀರ ಚರ್ಚೆಗೆ ಅರ್ಹರಲ್ಲ ಎಂಬ ಉಪೇಕ್ಷಿತ ದನಿಯನ್ನು ಒಳಗೊಂಡಿತ್ತು. ಅಡಿಗರು ರೂಪಿಸಿದ ಈ ಕ್ಲಾಸಿಕಲ್ ಕಾವ್ಯಧೋರಣೆಯು ನವ್ಯವಿಮರ್ಶೆಯ ಬಹುತೇಕ ನಿಲುವಾಗಿತ್ತು. ಇದು ತರುಣರಾದ ನಮಗ ಗಾಢವಾಗಿ ಆವರಿಸಿಕೊಂಡಿತ್ತು. ಹೀಗಿರುತ್ತ ಕಣವಿಯವರ ‘ಜೀವಧ್ವನಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿತು. ಶಿವಮೊಗ್ಗೆಯಲ್ಲಿ ಒಂದು ವಿಚಾರಸಂಕಿರಣ (1988) ಏರ್ಪಟ್ಟಿತು. ಆಗ ಸಾಹಿತ್ಯ ವಿಮರ್ಶೆಯ ಹತ್ಯಾರಗಳನ್ನು ಮಸೆಯುತ್ತ ತಿರುಗುತ್ತಿದ್ದ ಮತ್ತು ಆ ಕ್ಷೇತ್ರಕ್ಕೆ ಹೊಸಬನಾಗಿದ್ದ ನಾನು, ಪ್ರಬಂಧ ಮಂಡನೆ ಮಾಡಲೆಂದು ಕಣವಿಯವರ ಕಾವ್ಯವನ್ನು ಮೊದಲ ಸಲಕ್ಕೆ ಓದಿದೆ. ನವ್ಯವಿಮರ್ಶೆಯು ಹೇಗೆ ನಮ್ಮ ಕಾವ್ಯದ ಬಹುತ್ವವನ್ನು ಕಾಣಲು ಕಣ್ಣಿಗೆ ಪೊರೆಯನ್ನು ಕವಿಸಿದೆ ಎಂದು ಅರಿವಾಯಿತು.

‘ಕುಸುಮಾದಪಿ ಮೃದೂನಿ ವಜ್ರಾದಪಿ ಕಠೋರಾಣಿ’ ಎಂಬ ಮಾತಿದೆ. ವಜ್ರ ಮತ್ತು ಹೂವುಗಳ ಮೃದುತ್ವ ಮತ್ತು ಕಾಠಿಣ್ಯಗಳನ್ನು ಮಾನವ ಸ್ವಭಾವದ ಎರಡು ಅತ್ಯಂತಿಕ ರೂಪಕಗಳಾಗಿ ನೋಡುವ ಮಾತಿದು. ಈ ಅರ್ಥದಲ್ಲಿ ನರಸಿಂಹಸ್ವಾಮಿ, ಚೆನ್ನವೀರ ಕಣವಿ, ಹೂಮನಸ್ಸಿನ ಕವಿಗಳು. ಕಣವಿ ಕಾವ್ಯದಲ್ಲಿರುವ ಸಾರ್ವಜನಿಕರನ್ನು ಕುರಿತ ವ್ಯಕ್ತಿಚಿತ್ರಗಳು, ಸಮಾಜದ ಕೇಡುಗಳಿಗೆ ಮಾಡಿದ ಪ್ರತಿಕ್ರಿಯೆಗಳು, ನಿಸರ್ಗದ ವರ್ಣನೆಗಳು, ಸಾವಿನ ಧ್ಯಾನಗಳು ಎಲ್ಲವೂ ಅವರ ಸೌಮ್ಯತನದ ಗುಣವನ್ನು ಕಾಣಿಸುತ್ತವೆ. ತಾವು ಕೇಡೆಂದು ಪರಿಭಾವಿಸಿದ್ದನ್ನು ಆಕ್ರೋಶದಿಂದ ಮುಖಾಮುಖಿ ಮಾಡುವ ಕುವೆಂಪು-ಅಡಿಗ-ಲಂಕೇಶರಿಗೆ ಹೋಲಿಸಿದರೆ, ಕಣವಿ ಅವರದು ನವಿರಾದ ವಿಡಂಬನೆ. ಉದಾಹರಣೆಗೆ ಶಿಲಾವಿಗ್ರಹಗಳಿಗೆ ಕ್ಷೀರಾಭಿಷೇಕ ಮಾಡುವ ಆಚರಣೆಯನ್ನು ಮೌಢ್ಯವೆಂದು ಆರ್ಭಟಿಸಿ ಖಂಡಿಸುವುದಿಲ್ಲ. ಬದಲಿಗೆ “ಒಂದು ಹಾನಿಯೂ ಚೆಲ್ಲದಂತೆ ಬಯಲ ಬೊಗಸೆಯಲ್ಲಿ ಹಿಡಿದು ದೂರದೂರದ ಕಪ್ಪುಮಕ್ಕಳನೆಲ್ಲ ಕರೆದು ಬೆಳ್ಳಗೆ ಕುಡಿಸಿದಂತೆ ನಾನೊಂದು ಕನಸುಕಂಡೆ” ಎಂದು ಬರೆದು, ಅದನ್ನು ನೋಡುವ ಇನ್ನೊಂದು ನೋಟವನ್ನು ಕೊಟ್ಟುಬಿಡುತ್ತಾರೆ. ಇಲ್ಲಿ ‘ನಾನೊಂದು’ ಎನ್ನುವಲ್ಲಿ ನೊಂದ ಭಾವವೂ ಇರುವುದು ಗಮನಾರ್ಹ. ಈ ಸೌಮ್ಯತನ ಅವರ ಕಾವ್ಯವನ್ನು ಮತ್ತೊಂದು ಎತ್ತರಕ್ಕೆ ಹೋಗದಂತೆ ತಡೆದ ತೊಡಕೂ ಆಯಿತು. ಬಾಳನ್ನು ಲೋಕವನ್ನು ಒಂದು ಕೇಡಿನ ಭಾವವಿಲ್ಲದೆ, ಅದರೊಳಗಿನ ಸಮೃದ್ಧಿಯ ಮೂಲಕ ಬದುಕಬೇಕೆಂದು ಸದಾ ಹಂಬಲಿಸಿದವರು ಅವರು. ಹೀಗಾಗಿಯೇ ಅವರಲ್ಲಿ ನಿಸರ್ಗ ಕವಿತೆಗಳು ಪ್ರಕೃತಿವರ್ಣನೆಗೆ ಸೀಮಿತವಾಗುವುದಿಲ್ಲ. ಅವು ಬದುಕಿನ ರಹಸ್ಯವನ್ನು ಹೇಳುವ ಪ್ರತೀಕಗಳಾಗುತ್ತವೆ:

ನೆಲಕುದುರಿ ಬಿದ್ದ ಹಣ್ಣೆಲೆಯ ಮಣ್ಣುಗೊಬ್ಬರ ಮಾಡಿ
ತನ್ನೊಳಗೆ ರುಬ್ಬುವುದು
ಹೂವು-ಹಣ್ಣು ಗಿಡದ ಎಡೆಬಿಡದ ಕಾಣಿಕೆ
ಸಾವು-ನೋವು ನಮ್ಮ ದಿನದ ಹೊಂದಾಣಿಕೆ

ಇಲ್ಲಿ ಅಡಗಿರುವ ಜೀವನ ದರ್ಶನ ಗಮನಿಸಬೇಕು. ಈ ಲೋಕದ ಯಾವ ವಸ್ತುವೂ, ಕ್ರಿಯೆಯೂ ವ್ಯರ್ಥವಲ್ಲ. ಅವುಗಳಲ್ಲಿ ಬದುಕು ಚಲಿಸುವ ಯಾವುದೊ ಅರ್ಥಪೂರ್ಣವಾದ ಒಂದು ಸತ್ಯವಿರುತ್ತದೆ. ಹೀಗಾಗಿ ಎಲ್ಲವನ್ನು ಸೂಕ್ಷ್ಮವಾಗಿ ನಿರುಕಿಸುವ ಸಂವೇದನೆಯನ್ನು ಅವರ ಕಾವ್ಯ ಓದುಗರಿಗೆ ದಾಟಿಸುತ್ತದೆ. ಮರವು ಮಾಗಿದ ಫಲವನ್ನು ಬಿಡಲು ಕಾಯುವಂತೆ, ಹೆಪ್ಪುಂಡ ಹಾಲು ತುಪ್ಪವಾಗಲು ಕಾಯುವಂತೆ, ಕಾಯುವಿಕೆಯಲ್ಲಿ ಜೀವನದ ಅರ್ಥವಿದೆ ಎಂದು ಕಾಣಿಸುತ್ತದೆ. ಕಣವಿಯವರಷ್ಟು ನೆಲಮುಗಿಲುಗಳ ಸಂಬಂಧವನ್ನು ಶೋಧಿಸಿದವರು ಬೇರೆಯಿಲ್ಲ. ಮಗು ದುಂಬಿಯಂತೆ ಗುಂಜನ ಮಾಡುವಂತೆ ಆಡುವುದನ್ನು ಸಂಭ್ರಮದಿಂದಲೂ, ನಿರ್ದಯವಾದ ಮೃತ್ಯು ಜೀವವನ್ನು ಸೆಳೆದುಕೊಂಡು ಹೋಗಬಲ್ಲ ಕಟುತ್ವವನ್ನು ಅಸಹಾಯಕ ವಿಷಾದದಿಂದಲೂ ಏಕಕಾಲಕ್ಕೆ ಅವರ ಕಾವ್ಯ ಹೇಳಬಲ್ಲದಾಗಿತ್ತು.

ಚನ್ನವೀರ ಕಣವಿ

ಕನ್ನಡದಲ್ಲಿ ಉತ್ತರ ಕರ್ನಾಟಕದ ಕೃಷಿಕ ಜನಪದ ಪರಂಪರೆಯ ಸತ್ವವನ್ನು ಚೆನ್ನಾಗಿ ದುಡಿಸಿಕೊಂಡ ಕವಿಗಳಲ್ಲಿ ಬೇಂದ್ರೆಯವರಂತೆ ಕಣವಿಯವರೂ ಬರುತ್ತಾರೆ. ತಮ್ಮದೇ ಪರಿಸರದಲ್ಲಿ ತಮ್ಮದೇ ಪ್ರಕಾರದಲ್ಲಿ ಪ್ರಭಾವಶಾಲಿಯಾಗಿದ್ದ ಬೇಂದ್ರೆಯವರ ಅನುಕರಣೆ ಆಗದಂತೆ, ತಮ್ಮದೇ ಹಾದಿಯನ್ನು ರೂಪಿಸಿಕೊಳ್ಳಲು ಮಾಡಿದ ಸೆಣಸಾಟವು ಅವರ ಕಾವ್ಯದ ಚಹರೆಯನ್ನು ರೂಪಿಸಿತು. ಇದಕ್ಕಾಗಿ ಅವರು ಭೌತಿಕವಾಗಿ ದೂರದ ಮೈಸೂರಲ್ಲಿದ್ದ ಕುವೆಂಪು ಅವರ ವಿಶ್ವಮಾನವ ಪ್ರಜ್ಞೆಯನ್ನು ಸ್ವೀಕರಿಸಿದರು. ಕಾಲದ ದೃಷ್ಟಿಯಿಂದ ದೂರದಲ್ಲಿದ್ದ ಶರಣರ ತತ್ವಗಳನ್ನು ತಮ್ಮ ಕಾವ್ಯದಲ್ಲಿ ಮರುಶೋಧ ಮಾಡಿದರು. ಮಹತ್ವಾಕಾಂಕ್ಷೆಯಿಲ್ಲದೆ, ತಾನು ಕಂಡ ಲೋಕವನ್ನು ಉಂಡ ಅನುಭವವನ್ನು ಸೂಕ್ಷ್ಮಸಂವೇದನೆಯ ಕಾವ್ಯವಾಗಿ ರೂಪಿಸಿದ ಕಣವಿಯವರ ಕವನಗಳು, ಸಾಗರದಲೆಗಳಲ್ಲ. ಕಾಡಿನಂಚಿನಲ್ಲಿ ಜುಳುಜುಳು ಹರಿವ ತಣ್ಣನೆಯ ತೊರೆಗಳು. ಕೈಮಗ್ಗದಲ್ಲಿ ನೇದ ಬಣ್ಣಬಣ್ಣದ ಕರವಸ್ತ್ರಗಳು. ಲೋಕವನ್ನು ಬಿಟ್ಟು ತೆರಳುವ ಎಲ್ಲ ದೊಡ್ಡಲೇಖಕರು, ಸಾಧಕರು, ಸಾಂಪ್ರದಾಯಿಕ ಶ್ರದ್ಧಾಂಜಲಿಯನ್ನು ಹೊಸತಲೆಮಾರಿನಿಂದ ಬಯಸುವುದಿಲ್ಲ. ತಮ್ಮ ಕಾವ್ಯವನ್ನು ಅಥವಾ ಕಾರ್ಯವನ್ನು ಹೊಸಗಣ್ಣಲ್ಲಿ ಓದುವ, ಅರ್ಥೈಸುವ, ಅವರ ಜೀವನತತ್ವವನ್ನು ಹೊಸ ಪರಿಭಾಷೆಯಲ್ಲಿ ಗ್ರಹಿಸುವ ಹೊಣೆಯನ್ನು ಹೊಸತಲೆಮಾರಿನ ಮುಂದಿಟ್ಟು ಹೋಗುತ್ತಾರೆ. ಕಣವಿಯವರಂತಹ ಮಾನವತಾವಾದಿ ಕವಿಯೂ ಈ ಸವಾಲನ್ನು ಮುಂದಿಟ್ಟು ನಿರ್ಗಮಿಸಿದ್ದಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ಹಳತು-ವಿವೇಕ; ‘ಸಮನ್ವಯ ಮಾಡಿಕೊಳ್ಳದಿದ್ದರೆ ಕಾವ್ಯ ಹೇಗಾಗುತ್ತೆ?’ ಚೆನ್ನವೀರ ಕಣವಿ ಅವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...