Homeಕರ್ನಾಟಕಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ - ಪ್ರಕರಣ ದಾಖಲು

ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ಕೊಲೆ ಆರೋಪಿಯ ಸಹೋದರ ಬಜರಂಗದಳ ಜಿಲ್ಲಾ ಸಂಚಾಲಕನಾಗಿದ್ದು, ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಪ್ರಕರಣದ ಕುರಿತು ಮಾತನಾಡಿ, “ದಕ್ಷಿಣ ಕನ್ನಡದಲ್ಲಿ ಸಂಘಪರಿವಾದ ಪರ್ಯಾಯ ಸರ್ಕಾರ ಅಸ್ತಿತ್ವದಲ್ಲಿದೆ. ಅವರು ಅಕ್ರಮ ಮರಳು ಮಾಫಿಯ, ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಅವರನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ-ಕೊಲೆಗಳು ಸಾಮಾನ್ಯವಾಗಿವೆ. ಸ್ಥಳೀಯ ಬಿಜೆಪಿ ಶಾಸಕರು, ಸಚಿವರ ಅವರ ಬೆನ್ನಿಗಿರುವುದರಿಂದ ಅವರ ಮೇಲೆ ಯಾವುದೇ ಕ್ರಮಗಳು ಜರುಗುತ್ತಿಲ್ಲ. ಕನ್ಯಾಡಿ ಗ್ರಾಮದ ದಲಿತನ ಕೊಲೆಯೂ ಅದರ ಮುಂದುವರಿದ ಭಾಗವಾಗಿದೆ. ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ನಾವು ಒತ್ತಡ ತಂದು ಪ್ರಕರಣ ದಾಖಲಿಸಿದ್ದೇವೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...