Homeಕರ್ನಾಟಕನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

- Advertisement -
- Advertisement -

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್‌ ಅವರಿಗೆ ಜಾಮೀನು ದೊರೆತಿದೆ.

ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿತ್ತು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಕಾರ್ಮಿಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...