Homeಮುಖಪುಟಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

- Advertisement -
- Advertisement -

ಬಜರಂಗದಳ ಮುಖಂಡನಿಂದ ಹತ್ಯೆಗೊಳಗಾದ ದಲಿತ ಯುವಕನಿಗೆ ನ್ಯಾಯ ಸಿಗಬೇಕು ಮತ್ತು ಆರೋಪಿ ಕೃಷ್ಣನನ್ನು ಬಂಧಿಸಬೇಕೆಂದು ಎಂದು ಒತ್ತಾಯಿಸಿ ಬೆಳ್ತಂಗಡಿಯಿಂದ ಧರ್ಮಸ್ಥಳದ ಕನ್ಯಾಡಿವರೆಗೆ ಶುಕ್ರವಾರ ಸಂಜೆ 7 ಗಂಟೆಗೆ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಮತ್ತು ಪ್ರಗತಿಪರ ಸಂಘಟನೆಗಳು ನಿರ್ಧರಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ತೀವ್ರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಆತ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರದಲ್ಲಿ ಸೆರಯಾಗಿವೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಫೆಬ್ರವರಿ 24 ರಂದು ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದೆ. ಆದರೆ ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

“ಬೆಳ್ತಂಗಡಿಯ ಸಾಮಾಜಿಕ ಹೋರಾಟಗಾರ ಶೇಖರ್‌ ಲಾಯಿಲರವರು ನಾನುಗೌರಿ ಜೊತೆಗೆ ಮಾತನಾಡಿ, “ಆರೋಪಿಗಳು ಪ್ರಬಲ ರಾಜಕೀಯ ಬೆಂಬಲ ಹೊಂದಿರುವ ಕಾರಣಕ್ಕೆ ಅವರನ್ನು ಇನ್ನೂ ಬಂಧಿಸಿಲ್ಲ. ಇದು ಕೊಲೆ ಪ್ರಕರಣವಾಗಿದೆ ಮತ್ತು ಎಸ್‌ಸಿ, ಎಸ್ಟಿ ಅಟ್ರಾಸಿಟಿ ಕಾಯ್ದೆಯಡಿ ಬರುತ್ತದೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ. ಹಾಗಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಪ್ರಗತಿಪರ ಸಂಘಟನಗಳು ಬೆಳ್ತಂಗಡಿಯಿಂದ ಧರ್ಮಸ್ಥಳ ಕನ್ಯಾಡಿವರೆಗೂ ಪಾದಯಾತ್ರೆ ನಡೆಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...